AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ
ಆನೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Dec 28, 2023 | 1:52 PM

Share

ದೆಹಲಿ ಡಿಸೆಂಬರ್ 28: ಉತ್ತರಾಖಂಡದ (Uttarakhand Court) ಹರಿದ್ವಾರದ (Haridwar)ನ್ಯಾಯಾಲಯವೊಂದರಲ್ಲಿ ಬುಧವಾರ ಆನೆಯೊಂದು ಗೇಟ್ ನಿಂದ ಕೆಳಗಿಳಿದು ಆವರಣದೊಳಗೆ ನುಗ್ಗಿದ ಘಟನೆ ನಡೆದಿದೆ. ಹರಿದ್ವಾರದ ರೋಶನಾಬಾದ್ ಪ್ರದೇಶದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಹತ್ತಿರದ ರಾಜಾಜಿ ರಕ್ಷಿತಾರಣ್ಯದಿಂದ ಹೊರಬಂದಿದೆ ಎಂದು ನಂಬಲಾದ ಆನೆ (Elephant) ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮತ್ತು ನ್ಯಾಯಾಲಯದ ಆವರಣದಲ್ಲಿ ಸಂಚರಿಸುತ್ತಿದ್ದಂತೆ ಗೊಂದಲವನ್ನು ಸೃಷ್ಟಿಸಿತು. ಆನೆ ಗೇಟ್ ಗಳನ್ನು ಮುರಿದು ಗೋಡೆಯನ್ನು ಹಾನಿಗೊಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಘಟನೆಯ ವಿಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆನೆಯು ನ್ಯಾಯಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಮುಖ್ಯ ದ್ವಾರದಿಂದ ಕೆಳಗಿಳಿದು ತಿರುಗಾಡುವುದನ್ನು ತೋರಿಸುತ್ತದೆ.

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ 

ಉತ್ತರಾಖಂಡದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿಎಂ ಧಾಕಾಟೆ ಅವರ ಪ್ರಕಾರ, ಸಿಬ್ಬಂದಿ ಅಂತಿಮವಾಗಿ ಪ್ರಾಣಿಯನ್ನು ಹೆದರಿಸಿ ರಾಜಾಜಿ ಹುಲಿ ರಕ್ಷಿತಾರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದರು. “ಕಾಡಿನ ಪಕ್ಕದ ಪ್ರದೇಶಗಳಲ್ಲಿ, ಆನೆ ಹರಿದ್ವಾರಕ್ಕೆ ಪ್ರವೇಶಿಸಿದ ಅನೇಕ ಘಟನೆಗಳು ನಡೆದಿವೆ, ಈ ಸಂದರ್ಭದಲ್ಲಿ ಅದು ಜಿಲ್ಲಾಧಿಕಾರಿ ಕಚೇರಿ, ಆನೆ ಜಿಲ್ಲಾ ನ್ಯಾಯಾಲಯದ ನ್ಯಾಯಾಂಗದ ಮುಖ್ಯ ಗೇಟ್ ಕಡೆಗೆ ಮುಂದುವರಿಯಿತು ಮತ್ತು ಮುಚ್ಚಿದ ಗೇಟ್ ಅನ್ನು ಬಲವಂತವಾಗಿ ತೆರೆಯಿತು. ಸಾಂಪ್ರದಾಯಿಕ ಮಾರ್ಗಗಳಲ್ಲಿ ಆನೆ ಬಂದಿರುವುದನ್ನು ಗಮನಿಸಬೇಕು. ಹೆಚ್ಚಿನ ಪ್ರಯತ್ನದ ನಂತರ, ಉತ್ತರಾಖಂಡ ಅರಣ್ಯ ಇಲಾಖೆಯ ತಂಡವು ಆನೆಯನ್ನು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಓಡಿಸಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Thu, 28 December 23

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು