AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಉತ್ತರಾಖಂಡ ಕೋರ್ಟ್ ಆವರಣಕ್ಕೆ ನುಗ್ಗಿ ಆತಂಕ ಸೃಷ್ಟಿಸಿದ ಕಾಡಾನೆ
ಆನೆ
ರಶ್ಮಿ ಕಲ್ಲಕಟ್ಟ
|

Updated on:Dec 28, 2023 | 1:52 PM

Share

ದೆಹಲಿ ಡಿಸೆಂಬರ್ 28: ಉತ್ತರಾಖಂಡದ (Uttarakhand Court) ಹರಿದ್ವಾರದ (Haridwar)ನ್ಯಾಯಾಲಯವೊಂದರಲ್ಲಿ ಬುಧವಾರ ಆನೆಯೊಂದು ಗೇಟ್ ನಿಂದ ಕೆಳಗಿಳಿದು ಆವರಣದೊಳಗೆ ನುಗ್ಗಿದ ಘಟನೆ ನಡೆದಿದೆ. ಹರಿದ್ವಾರದ ರೋಶನಾಬಾದ್ ಪ್ರದೇಶದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದೆ. ಹತ್ತಿರದ ರಾಜಾಜಿ ರಕ್ಷಿತಾರಣ್ಯದಿಂದ ಹೊರಬಂದಿದೆ ಎಂದು ನಂಬಲಾದ ಆನೆ (Elephant) ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿ ಮತ್ತು ನ್ಯಾಯಾಲಯದ ಆವರಣದಲ್ಲಿ ಸಂಚರಿಸುತ್ತಿದ್ದಂತೆ ಗೊಂದಲವನ್ನು ಸೃಷ್ಟಿಸಿತು. ಆನೆ ಗೇಟ್ ಗಳನ್ನು ಮುರಿದು ಗೋಡೆಯನ್ನು ಹಾನಿಗೊಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಘಟನೆಯ ವಿಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಆನೆಯು ನ್ಯಾಯಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಮುಖ್ಯ ದ್ವಾರದಿಂದ ಕೆಳಗಿಳಿದು ತಿರುಗಾಡುವುದನ್ನು ತೋರಿಸುತ್ತದೆ.

ಅಧಿಕಾರಿಗಳು ಅಸಾಮಾನ್ಯ ಪರಿಸ್ಥಿತಿಗೆ ತ್ವರಿತವಾಗಿ ಪ್ರತಿಕ್ರಿಯಿಸಿದರು. ಆನೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಗಾಳಿಯಲ್ಲಿ ಗುಂಡು ಹಾರಿಸಿ ಆನೆಯನ್ನು ಹೆದರಿಸಿ ರಾಜಾಜಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಆನೆಯನ್ನು ಓಡಿಸಿದ್ದಾರೆ.

ಇದನ್ನೂ ಓದಿ:ರಾಮನಗರ: ಆನೆ ಪಳಗಿಸುತ್ತೇನೆ ಎಂದು ಕಾಡಿಗೆ ಹೋದವನು ಕಾಡಾನೆಗೆ ಬಲಿ 

ಉತ್ತರಾಖಂಡದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿಎಂ ಧಾಕಾಟೆ ಅವರ ಪ್ರಕಾರ, ಸಿಬ್ಬಂದಿ ಅಂತಿಮವಾಗಿ ಪ್ರಾಣಿಯನ್ನು ಹೆದರಿಸಿ ರಾಜಾಜಿ ಹುಲಿ ರಕ್ಷಿತಾರಣ್ಯ ಪ್ರದೇಶಕ್ಕೆ ಓಡಿಸುವಲ್ಲಿ ಯಶಸ್ವಿಯಾದರು. “ಕಾಡಿನ ಪಕ್ಕದ ಪ್ರದೇಶಗಳಲ್ಲಿ, ಆನೆ ಹರಿದ್ವಾರಕ್ಕೆ ಪ್ರವೇಶಿಸಿದ ಅನೇಕ ಘಟನೆಗಳು ನಡೆದಿವೆ, ಈ ಸಂದರ್ಭದಲ್ಲಿ ಅದು ಜಿಲ್ಲಾಧಿಕಾರಿ ಕಚೇರಿ, ಆನೆ ಜಿಲ್ಲಾ ನ್ಯಾಯಾಲಯದ ನ್ಯಾಯಾಂಗದ ಮುಖ್ಯ ಗೇಟ್ ಕಡೆಗೆ ಮುಂದುವರಿಯಿತು ಮತ್ತು ಮುಚ್ಚಿದ ಗೇಟ್ ಅನ್ನು ಬಲವಂತವಾಗಿ ತೆರೆಯಿತು. ಸಾಂಪ್ರದಾಯಿಕ ಮಾರ್ಗಗಳಲ್ಲಿ ಆನೆ ಬಂದಿರುವುದನ್ನು ಗಮನಿಸಬೇಕು. ಹೆಚ್ಚಿನ ಪ್ರಯತ್ನದ ನಂತರ, ಉತ್ತರಾಖಂಡ ಅರಣ್ಯ ಇಲಾಖೆಯ ತಂಡವು ಆನೆಯನ್ನು ಅದರ ನೈಸರ್ಗಿಕ ಆವಾಸಸ್ಥಾನಕ್ಕೆ ಓಡಿಸಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:51 pm, Thu, 28 December 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!