AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು ಎಂದು ಆರೋಪಿಸಿದ್ದಾರೆ.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 19, 2021 | 9:36 AM

Share

18 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಉತ್ತರ ಬಿಹಾರದ ಕೋರ್ಟ್​​ವೊಂದು ಆದೇಶ ನೀಡಿದೆ. ಈ 18 ಮಂದಿ ಪೊಲೀಸರು ವರ್ಷದ ಪ್ರಾರಂಭದಲ್ಲಿ ನಿವೃತ್ತ ಸೈನಿಕರೊಬ್ಬರ ಮನೆಯಿಂದ ಸುಮಾರು 50 ಲಕ್ಷ ರೂ.ಮೌಲ್ಯದ ನಗದು, ಚಿನ್ನಾಭರಣಗಳನ್ನು ಕದ್ದಿದ್ದಾರೆ ಎಂಬ ಆರೋಪದಡಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆಯನ್ನು ಅಡಿಶನಲ್​ ಚೀಫ್​ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್​ ನಯನ್​ ಕುಮಾರ್​ ನಡೆಸಿದ್ದರು. ರಸಲ್ಪುರ ಪ್ರದೇಶದ ಹರಿದ್ವಾರ್​ ಪ್ರಸಾದ್ ಠಾಕೂರ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಸ್ಥಳೀಯ ಪೊಲೀಸ್​ ಠಾಣೆಗೆ ಈ ಬಗ್ಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದರು.

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು. ಇದೇ ವೇಳೆ ನಮ್ಮ ಮನೆಯಲ್ಲಿ ಹಣ, ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ಠಾಕೂರ್​ ಆರೋಪಿಸಿದ್ದಾರೆ. 2016ರಿಂದಲೂ ಬಿಹಾರದಲ್ಲಿ ಅಲ್ಕೋಹಾಲ್​ ಸೇವನೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ಪೊಲೀಸರು ಲಿಕರ್​ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು. ಸರ್ಚ್ ವಾರಂಟ್​ ಕೊಡುವಂತೆ ನಾನು ಹೇಳಿದ್ದಕ್ಕೆ, ಕೋಪಗೊಂಡು ನನಗೆ ಹೊಡೆದರು. ನನ್ನ ಮಗ, ಸೊಸೆಯ ಮೇಲೆಯೂ ಹಲ್ಲೆ ನಡೆಸಿದರು ಎಂದು ಆರೋಪ ಮಾಡಿದ್ದಾರೆ.

ಈ ಪೊಲೀಸರು ನಮ್ಮ ಮನೆಯಿಂದ ಸುಮಾರು 49 ಲಕ್ಷ ರೂ.ಕದ್ದಿದ್ದಾರೆ. ಅಲ್ಲದೆ, ಮೂರು ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದೂ ಠಾಕೂರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ಸಂಚಾರದ ಬಗ್ಗೆ ಇಂದು ಮಹತ್ವದ ನಿರ್ಧಾರ; ಷರತ್ತುಗಳ ಅನ್ವಯ ಸಾಧ್ಯತೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ