AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು ಎಂದು ಆರೋಪಿಸಿದ್ದಾರೆ.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 19, 2021 | 9:36 AM

Share

18 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಉತ್ತರ ಬಿಹಾರದ ಕೋರ್ಟ್​​ವೊಂದು ಆದೇಶ ನೀಡಿದೆ. ಈ 18 ಮಂದಿ ಪೊಲೀಸರು ವರ್ಷದ ಪ್ರಾರಂಭದಲ್ಲಿ ನಿವೃತ್ತ ಸೈನಿಕರೊಬ್ಬರ ಮನೆಯಿಂದ ಸುಮಾರು 50 ಲಕ್ಷ ರೂ.ಮೌಲ್ಯದ ನಗದು, ಚಿನ್ನಾಭರಣಗಳನ್ನು ಕದ್ದಿದ್ದಾರೆ ಎಂಬ ಆರೋಪದಡಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆಯನ್ನು ಅಡಿಶನಲ್​ ಚೀಫ್​ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್​ ನಯನ್​ ಕುಮಾರ್​ ನಡೆಸಿದ್ದರು. ರಸಲ್ಪುರ ಪ್ರದೇಶದ ಹರಿದ್ವಾರ್​ ಪ್ರಸಾದ್ ಠಾಕೂರ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಸ್ಥಳೀಯ ಪೊಲೀಸ್​ ಠಾಣೆಗೆ ಈ ಬಗ್ಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದರು.

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು. ಇದೇ ವೇಳೆ ನಮ್ಮ ಮನೆಯಲ್ಲಿ ಹಣ, ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ಠಾಕೂರ್​ ಆರೋಪಿಸಿದ್ದಾರೆ. 2016ರಿಂದಲೂ ಬಿಹಾರದಲ್ಲಿ ಅಲ್ಕೋಹಾಲ್​ ಸೇವನೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ಪೊಲೀಸರು ಲಿಕರ್​ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು. ಸರ್ಚ್ ವಾರಂಟ್​ ಕೊಡುವಂತೆ ನಾನು ಹೇಳಿದ್ದಕ್ಕೆ, ಕೋಪಗೊಂಡು ನನಗೆ ಹೊಡೆದರು. ನನ್ನ ಮಗ, ಸೊಸೆಯ ಮೇಲೆಯೂ ಹಲ್ಲೆ ನಡೆಸಿದರು ಎಂದು ಆರೋಪ ಮಾಡಿದ್ದಾರೆ.

ಈ ಪೊಲೀಸರು ನಮ್ಮ ಮನೆಯಿಂದ ಸುಮಾರು 49 ಲಕ್ಷ ರೂ.ಕದ್ದಿದ್ದಾರೆ. ಅಲ್ಲದೆ, ಮೂರು ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದೂ ಠಾಕೂರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ಸಂಚಾರದ ಬಗ್ಗೆ ಇಂದು ಮಹತ್ವದ ನಿರ್ಧಾರ; ಷರತ್ತುಗಳ ಅನ್ವಯ ಸಾಧ್ಯತೆ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ