AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು ಎಂದು ಆರೋಪಿಸಿದ್ದಾರೆ.

18 ಪೊಲೀಸರ ವಿರುದ್ಧ ಎಫ್​ಐಆರ್​ ದಾಖಲಿಸಲು ನ್ಯಾಯಾಲಯದ ಆದೇಶ; ಮಾಜಿ ಸೈನಿಕನಿಂದ ದೂರು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Jun 19, 2021 | 9:36 AM

Share

18 ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಉತ್ತರ ಬಿಹಾರದ ಕೋರ್ಟ್​​ವೊಂದು ಆದೇಶ ನೀಡಿದೆ. ಈ 18 ಮಂದಿ ಪೊಲೀಸರು ವರ್ಷದ ಪ್ರಾರಂಭದಲ್ಲಿ ನಿವೃತ್ತ ಸೈನಿಕರೊಬ್ಬರ ಮನೆಯಿಂದ ಸುಮಾರು 50 ಲಕ್ಷ ರೂ.ಮೌಲ್ಯದ ನಗದು, ಚಿನ್ನಾಭರಣಗಳನ್ನು ಕದ್ದಿದ್ದಾರೆ ಎಂಬ ಆರೋಪದಡಿ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಪ್ರಕರಣದ ವಿಚಾರಣೆಯನ್ನು ಅಡಿಶನಲ್​ ಚೀಫ್​ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್​ ನಯನ್​ ಕುಮಾರ್​ ನಡೆಸಿದ್ದರು. ರಸಲ್ಪುರ ಪ್ರದೇಶದ ಹರಿದ್ವಾರ್​ ಪ್ರಸಾದ್ ಠಾಕೂರ್​ ಕೋರ್ಟ್​ಗೆ ಅರ್ಜಿ ಸಲ್ಲಿಸಿ, ಸ್ಥಳೀಯ ಪೊಲೀಸ್​ ಠಾಣೆಗೆ ಈ ಬಗ್ಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದರು.

ಠಾಕೂರ್​ ಅವರು ಮಿಲಿಟರಿಯಲ್ಲಿ ಸೇವೆ ಸಲ್ಲಿಸಿದವರು. ನಮ್ಮ ಮನೆಯ ಸುತ್ತಮುತ್ತ ಲಿಕ್ಕರ್​ ದಂಧೆ ನಡೆಯುತ್ತಿದೆ ಎಂದು ಫೆ.22ರಂದು ಪೊಲೀಸರು ಇಲ್ಲಿಗೆ ಆಗಮಿಸಿದ್ದರು. ಈ ಪ್ರದೇಶದ ಹಲವು ಮನೆಗಳಲ್ಲಿ ಹುಡುಕಾಟ ನಡೆಸಿದರು. ಇದೇ ವೇಳೆ ನಮ್ಮ ಮನೆಯಲ್ಲಿ ಹಣ, ಚಿನ್ನಾಭರಣಗಳನ್ನು ಲೂಟಿ ಮಾಡಿದ್ದಾರೆ ಎಂದು ಠಾಕೂರ್​ ಆರೋಪಿಸಿದ್ದಾರೆ. 2016ರಿಂದಲೂ ಬಿಹಾರದಲ್ಲಿ ಅಲ್ಕೋಹಾಲ್​ ಸೇವನೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಆದರೆ ಪೊಲೀಸರು ಲಿಕರ್​ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು. ಸರ್ಚ್ ವಾರಂಟ್​ ಕೊಡುವಂತೆ ನಾನು ಹೇಳಿದ್ದಕ್ಕೆ, ಕೋಪಗೊಂಡು ನನಗೆ ಹೊಡೆದರು. ನನ್ನ ಮಗ, ಸೊಸೆಯ ಮೇಲೆಯೂ ಹಲ್ಲೆ ನಡೆಸಿದರು ಎಂದು ಆರೋಪ ಮಾಡಿದ್ದಾರೆ.

ಈ ಪೊಲೀಸರು ನಮ್ಮ ಮನೆಯಿಂದ ಸುಮಾರು 49 ಲಕ್ಷ ರೂ.ಕದ್ದಿದ್ದಾರೆ. ಅಲ್ಲದೆ, ಮೂರು ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದೂ ಠಾಕೂರ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೆಟ್ರೋ ಸಂಚಾರದ ಬಗ್ಗೆ ಇಂದು ಮಹತ್ವದ ನಿರ್ಧಾರ; ಷರತ್ತುಗಳ ಅನ್ವಯ ಸಾಧ್ಯತೆ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ