AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯನ್ನು ದೇಶಾದ್ಯಂತ ಹಂಚುತ್ತೇವೆ: ಪ್ರಧಾನಿ ನರೇಂದ್ರ ಮೋದಿ ಅಭಯ ಹಸ್ತ

ಕೊರೊನಾ ಲಸಿಕೆ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವೇ ಮುಂಚೂಣಿಯಲ್ಲಿರಲಿದೆ. ನಮ್ಮ ವಿಜ್ಞಾನಿಗಳು ಆತ್ಮನಿರ್ಭರ ಭಾರತಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕೊರೊನಾ ಲಸಿಕೆ ವಿಚಾರದಲ್ಲಿ ನಾವು ಸ್ವಾವಲಂಬಿಗಳು..

ಕೊರೊನಾ ಲಸಿಕೆಯನ್ನು ದೇಶಾದ್ಯಂತ ಹಂಚುತ್ತೇವೆ: ಪ್ರಧಾನಿ ನರೇಂದ್ರ ಮೋದಿ ಅಭಯ ಹಸ್ತ
ಪ್ರಧಾನಿ ನರೇಂದ್ರ ಮೋದಿ
Skanda
| Edited By: |

Updated on: Jan 04, 2021 | 12:06 PM

Share

ದೆಹಲಿ: ಭಾರತದಲ್ಲಿ 2 ಸಂಸ್ಥೆಗಳ ಕೊರೊನಾ ಲಸಿಕೆಗೆ ಅನುಮತಿ ಸಿಕ್ಕಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪರಿಸರ ಮಾನದಂಡದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿರುವ ಮೋದಿ,  ದೇಶದ ವಿಜ್ಞಾನಿಗಳು 2 ಲಸಿಕೆಗಳನ್ನು ಸಿದ್ಧಪಡಿಸಿದ್ದಾರೆ. ಇದು ಆತ್ಮನಿರ್ಭರ ಭಾರತಕ್ಕೆ ದೊಡ್ಡ ಕೊಡುಗೆಯಾಗಿದ್ದು, ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆಯನ್ನು ದೇಶಾದ್ಯಂತ ಹಂಚುತ್ತೇವೆ. ಆ ಮೂಲಕ ವಿಶ್ವದಲ್ಲೇ ದೊಡ್ಡ ಪ್ರಮಾಣದ ಲಸಿಕೆ ಹಂಚಿಕೆಗೆ ಭಾರತ ಸಾಕ್ಷಿಯಾಗಲಿದೆ. ಭಾರತದಲ್ಲಿ ಅತಿ ಹೆಚ್ಚಿನ ಪ್ರಮಾಣದ ಕೊರೊನಾ ಲಸಿಕೆ ಉತ್ಪಾದನೆ ಸಹ ಆಗಲಿದೆ. ಇದುವರೆಗೆ ವಿದೇಶಿ ಉತ್ಪನ್ನಗಳ ಆಮದು ಹೆಚ್ಚಾಗಿತ್ತು. ಆದರೆ ಈಗ ಭಾರತದಲ್ಲೇ ಲಸಿಕೆ ತಯಾರಿಸುವ ಮೂಲಕ ಈ ವಿಚಾರದಲ್ಲಿ ನಾವು ಸ್ವಾವಲಂಬಿಗಳಾಗಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಹಲವು ವಿಚಾರಗಳಲ್ಲಿ ಜಾಗತಿಕ ನಾಯಕನಾಗಿ ಬೆಳೆಯುತ್ತಿರುವ ಭಾರತ ವಿಜ್ಞಾನ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದೆ ಎನ್ನುವುದಕ್ಕೆ ಕೊರೊನಾ ಲಸಿಕೆ ತಯಾರಿಕೆ ಸಾಕ್ಷಿಯಾಗಿದೆ. ಮಾದರಿ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತಕ್ಕೆ ನಮ್ಮ ವಿಜ್ಞಾನಿಗಳ ಕೊಡುಗೆ ಅಪಾರವಾಗಿದೆ. ಅದನ್ನು ನಾವು ಪ್ರಶಂಸಿಸಲೇಬೇಕು ಎಂದು ಹೇಳಿದ್ದಾರೆ.

ಕೊವ್ಯಾಕ್ಸಿನ್​ ಬಗ್ಗೆ ಕಾಂಗ್ರೆಸ್ ನಾಯಕರ ಅಪಸ್ವರ..; ಅಪಹಾಸ್ಯ, ರಾಜಕೀಯ ನಿಲ್ಲಿಸಿ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ