AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯನ್ನು ದೇಶಾದ್ಯಂತ ಹಂಚುತ್ತೇವೆ: ಪ್ರಧಾನಿ ನರೇಂದ್ರ ಮೋದಿ ಅಭಯ ಹಸ್ತ

ಕೊರೊನಾ ಲಸಿಕೆ ಉತ್ಪಾದನೆ ಮತ್ತು ವಿತರಣೆಯಲ್ಲಿ ಭಾರತವೇ ಮುಂಚೂಣಿಯಲ್ಲಿರಲಿದೆ. ನಮ್ಮ ವಿಜ್ಞಾನಿಗಳು ಆತ್ಮನಿರ್ಭರ ಭಾರತಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಕೊರೊನಾ ಲಸಿಕೆ ವಿಚಾರದಲ್ಲಿ ನಾವು ಸ್ವಾವಲಂಬಿಗಳು..

ಕೊರೊನಾ ಲಸಿಕೆಯನ್ನು ದೇಶಾದ್ಯಂತ ಹಂಚುತ್ತೇವೆ: ಪ್ರಧಾನಿ ನರೇಂದ್ರ ಮೋದಿ ಅಭಯ ಹಸ್ತ
ಪ್ರಧಾನಿ ನರೇಂದ್ರ ಮೋದಿ
Skanda
| Edited By: |

Updated on: Jan 04, 2021 | 12:06 PM

Share

ದೆಹಲಿ: ಭಾರತದಲ್ಲಿ 2 ಸಂಸ್ಥೆಗಳ ಕೊರೊನಾ ಲಸಿಕೆಗೆ ಅನುಮತಿ ಸಿಕ್ಕಿರುವುದಕ್ಕೆ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪರಿಸರ ಮಾನದಂಡದ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿರುವ ಮೋದಿ,  ದೇಶದ ವಿಜ್ಞಾನಿಗಳು 2 ಲಸಿಕೆಗಳನ್ನು ಸಿದ್ಧಪಡಿಸಿದ್ದಾರೆ. ಇದು ಆತ್ಮನಿರ್ಭರ ಭಾರತಕ್ಕೆ ದೊಡ್ಡ ಕೊಡುಗೆಯಾಗಿದ್ದು, ನಮ್ಮ ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆಯನ್ನು ದೇಶಾದ್ಯಂತ ಹಂಚುತ್ತೇವೆ. ಆ ಮೂಲಕ ವಿಶ್ವದಲ್ಲೇ ದೊಡ್ಡ ಪ್ರಮಾಣದ ಲಸಿಕೆ ಹಂಚಿಕೆಗೆ ಭಾರತ ಸಾಕ್ಷಿಯಾಗಲಿದೆ. ಭಾರತದಲ್ಲಿ ಅತಿ ಹೆಚ್ಚಿನ ಪ್ರಮಾಣದ ಕೊರೊನಾ ಲಸಿಕೆ ಉತ್ಪಾದನೆ ಸಹ ಆಗಲಿದೆ. ಇದುವರೆಗೆ ವಿದೇಶಿ ಉತ್ಪನ್ನಗಳ ಆಮದು ಹೆಚ್ಚಾಗಿತ್ತು. ಆದರೆ ಈಗ ಭಾರತದಲ್ಲೇ ಲಸಿಕೆ ತಯಾರಿಸುವ ಮೂಲಕ ಈ ವಿಚಾರದಲ್ಲಿ ನಾವು ಸ್ವಾವಲಂಬಿಗಳಾಗಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಹಲವು ವಿಚಾರಗಳಲ್ಲಿ ಜಾಗತಿಕ ನಾಯಕನಾಗಿ ಬೆಳೆಯುತ್ತಿರುವ ಭಾರತ ವಿಜ್ಞಾನ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತಿದೆ ಎನ್ನುವುದಕ್ಕೆ ಕೊರೊನಾ ಲಸಿಕೆ ತಯಾರಿಕೆ ಸಾಕ್ಷಿಯಾಗಿದೆ. ಮಾದರಿ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತಕ್ಕೆ ನಮ್ಮ ವಿಜ್ಞಾನಿಗಳ ಕೊಡುಗೆ ಅಪಾರವಾಗಿದೆ. ಅದನ್ನು ನಾವು ಪ್ರಶಂಸಿಸಲೇಬೇಕು ಎಂದು ಹೇಳಿದ್ದಾರೆ.

ಕೊವ್ಯಾಕ್ಸಿನ್​ ಬಗ್ಗೆ ಕಾಂಗ್ರೆಸ್ ನಾಯಕರ ಅಪಸ್ವರ..; ಅಪಹಾಸ್ಯ, ರಾಜಕೀಯ ನಿಲ್ಲಿಸಿ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

Follow Us
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರುಗಳು ನಜ್ಜುಗುಜ್ಜು!
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
'ನನ್ನ ಹೆಂಡತಿ 1 ಲಕ್ಷ ರೂ., ಚಿನ್ನ ವಾಪಸ್ ಕೊಡಲಿ!' ಪತಿ ಆಕ್ರೋಶ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
ಬುರ್ಖಾ ಹಾಕಿದ್ದ ಮಹಿಳೆಯನ್ನು ಎಳೆದೊಯ್ದು ಕೈ ಟ್ವಿಸ್ಟ್ ಮಾಡಿದ ವ್ಯಕ್ತಿ
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
‘ತಂಗಿ ಎನ್ನುತ್ತಿದ್ದವನ ಜತೆಗೇ ಹೋಗಿ ಮದುವೆಯಾದ್ಳು!’ ಪತಿಯ ಅಳಲು
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಚನ್ನಕೇಶವನ ಪಾದ ಸೋಕಿದ ಸೂರ್ಯರಶ್ಮಿ!
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಸೇಫ್ಟಿನೆಟ್ ದಾಟಿ ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದ ಹುಲಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಅಭಿಷೇಕ್ ಶರ್ಮಾ ಶತಕ ಸಿಡಿಸಿದಾಗ ತಂದೆಯ ಸೆಲೆಬ್ರೇಷನ್ ಹೇಗಿತ್ತು ನೋಡಿ
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?