AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covaxin: ವಿಶ್ವ ಆರೋಗ್ಯ ಸಂಸ್ಥೆಯಿಂದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಇಂದು ಅನುಮತಿ ಸಾಧ್ಯತೆ

Bharat Biotech: ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿಯು ಇಂದು ಸಭೆ ಸೇರಲಿದ್ದು, ಸಭೆಯ ನಂತರ ಕೋವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮೋದನೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

Covaxin: ವಿಶ್ವ ಆರೋಗ್ಯ ಸಂಸ್ಥೆಯಿಂದ ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ತುರ್ತು ಬಳಕೆಗೆ ಇಂದು ಅನುಮತಿ ಸಾಧ್ಯತೆ
ಕೊವಿಡ್ ಲಸಿಕೆ
TV9 Web
| Edited By: |

Updated on: Nov 03, 2021 | 12:52 PM

Share

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ತಂಡ ಭಾರತ್ ಬಯೋಟೆಕ್​ನ (Bharat Biotech) ಕೋವ್ಯಾಕ್ಸಿನ್ ಲಸಿಕೆಯ (Covaxin Vaccine) ತುರ್ತು ಬಳಕೆಯ ಅನುಮೋದನೆಗೆ ಹೆಚ್ಚುವರಿ ದಾಖಲೆಗಳನ್ನು ಕೋರಿತ್ತು. ಕೋವಾಕ್ಸಿನ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವ ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಈ ಲಸಿಕೆಯ ತುರ್ತು ಬಳಕೆಯ ಅನುಮತಿಗಾಗಿ ಏಪ್ರಿಲ್ 19ರಂದು ವಿಶ್ವ ಆರೋಗ್ಯ ಸಂಸ್ಥೆಗೆ EOI ಸಲ್ಲಿಸಿತ್ತು. ವಿಶ್ವ ಆರೋಗ್ಯ ಸಂಸ್ಥೆ (WHO) ಈಗಾಗಲೇ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ತುರ್ತು ಬಳಕೆಗಾಗಿ ಅನುಮೋದನೆಗೆ ಸಂಬಂಧಿಸಿದ ನಿರ್ಧಾರವನ್ನು ನೀಡಲು ಸಾಕಷ್ಟು ವಿಳಂಬ ಮಾಡಿದೆ. ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಇಂದು ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಯ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಭಾರತ ಮೂಲದ ಕೊವಿಡ್ ಲಸಿಕೆಗಳ ತುರ್ತು ಬಳಕೆಯ ಪಟ್ಟಿಗಾಗಿ ಕೋವ್ಯಾಕ್ಸಿನ್​ನಲ್ಲಿನ ಡೇಟಾವನ್ನು ಪರಿಶೀಲಿಸಲು ತಾಂತ್ರಿಕ ಸಲಹಾ ತಂಡ ಕಳೆದ ತಿಂಗಳು ಸಭೆ ಸೇರಿತ್ತು. ಈ ಲಸಿಕೆಯ ಜಾಗತಿಕ ಬಳಕೆಗಾಗಿ ಅಂತಿಮ ಮೌಲ್ಯಮಾಪನವನ್ನು ನಡೆಸಲು ತಯಾರಕರಿಂದ ಹೆಚ್ಚುವರಿ ಸ್ಪಷ್ಟೀಕರಣಗಳ ಅಗತ್ಯವಿದೆ ಎಂದು ಸಭೆಯ ಬಳಿಕ ತಿಳಿಸಿತ್ತು. WHO ನ ಸ್ವತಂತ್ರ ಸಲಹಾ ಸಮಿತಿಯಾದ ತಾಂತ್ರಿಕ ಸಲಹಾ ತಂಡ (TAG) ಭಾರತೀಯ ಕೊವಿಡ್ ಲಸಿಕೆಯಾದ ಕೋವ್ಯಾಕ್ಸಿನ್​ನ ತುರ್ತು ಬಳಕೆಯ ಪಟ್ಟಿ (EUL) ಅನುಮೋದನೆಗೆ ಸಂಬಂಧಿಸಿದಂತೆ ಇಂದು ಮತ್ತೊಂದು ಸಭೆ ನಡೆಸಿ ನಿರ್ಧಾರ ಪ್ರಕಟಿಸುವುದಾಗಿ ಈ ಹಿಂದೆ ಘೋಷಿಸಿತ್ತು.

WHOನ ತಾಂತ್ರಿಕ ಸಲಹಾ ತಂಡ ಈ ಹಿಂದೆ ಭಾರತ್ ಬಯೋಟೆಕ್ ಅನ್ನು ಕೋವಾಕ್ಸಿನ್ ಅನುಮೋದನೆಯನ್ನು ಮೇಲ್ವಿಚಾರಣೆ ಮಾಡಲು ಹೆಚ್ಚುವರಿ ಸ್ಪಷ್ಟೀಕರಣಗಳನ್ನು ನೀಡುವಂತೆ ಕೇಳಿಕೊಂಡಿತ್ತು. ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿಯು ಇಂದು ಸಭೆ ಸೇರಲಿದ್ದು, ಸಭೆಯ ನಂತರ ಕೋವಾಕ್ಸಿನ್‌ಗೆ ಅನುಮೋದನೆಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ತುರ್ತು ಬಳಕೆಯ ಪಟ್ಟಿಗಾಗಿ ಕೋವಾಕ್ಸಿನ್‌ನ ಅನುಮೋದನೆಯು ಗುರುತಿಸುವಿಕೆಗೆ ಸಮಾನವಾಗಿರುತ್ತದೆ ಮತ್ತು ಇತರ ದೇಶಗಳಲ್ಲಿ ಲಸಿಕೆ ಆದೇಶಗಳಿಗೆ ಅರ್ಹತೆ ಪಡೆಯಲು ಡೋಸ್ ತೆಗೆದುಕೊಂಡ ಜನರಿಗೆ ದಾರಿ ಮಾಡಿಕೊಡಲು ಸಹಾಯ ಮಾಡುತ್ತದೆ. ಅಕ್ಟೋಬರ್ ಅಂತ್ಯದ ವೇಳೆಗೆ WHO ಅನುಮೋದನೆಯನ್ನು ನಿರೀಕ್ಷಿಸಲಾಗಿತ್ತು, ಆದರೆ ಜೈವಿಕ ತಂತ್ರಜ್ಞಾನ ಕಂಪನಿಯು ಇನ್ನೂ ಅನುಮೋದನೆಗಾಗಿ ಕಾಯುತ್ತಿದೆ.

ಕೊವಿಡ್ ಸೋಂಕಿನ ವಿರುದ್ಧ ಕೋವ್ಯಾಕ್ಸಿನ್ ಲಸಿಕೆ ಶೇ. 77.8ರಷ್ಟು ಪರಿಣಾಮಕಾರಿಯಾಗಿದೆ. ಹಾಗೇ ಹೊಸ ಡೆಲ್ಟಾ ರೂಪಾಂತರಿ ವೈರಸ್ ವಿರುದ್ಧ ಶೇ. 65.2ರಷ್ಟು ರಕ್ಷಣೆಯನ್ನು ಪ್ರದರ್ಶಿಸಿದೆ. ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಮತ್ತು ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಕೋವಿಶೀಲ್ಡ್ ಭಾರತದಲ್ಲಿ ವ್ಯಾಪಕವಾಗಿ ಬಳಸಲಾಗುವ ಎರಡು ಲಸಿಕೆಗಳಾಗಿವೆ. ವಿಶ್ವ ಆರೋಗ್ಯ ಸಂಸ್ಥೆ ಇದುವರೆಗೆ ಫೈಜರ್-ಬಯೋಎನ್​ಟೆಕ್, ಆಸ್ಟ್ರಾಜೆನೆಕಾ, ಎಸ್​ಕೆ ಬಯೋ/ಸೆರಂ ಇನ್​ಸ್ಟಿಟ್ಯೂಟ್​ ಆಫ್ ಇಂಡಿಯಾ, ಜಾನ್ಸನ್ ಆ್ಯಂಡ್ ಜಾನ್ಸನ್-ಜಾನ್​ಸ್ಸೆನ್, ಮಾಡರ್ನಾ ಮತ್ತು ಸಿನೋಫಾರ್ಮ್ ಕೊವಿಡ್-19 ಲಸಿಕೆಗಳ ತುರ್ತು ಬಳಕೆಗಾಗಿ ಅನುಮೋದನೆ ನೀಡಿದೆ.

ಜಾಗತಿಕ ಮಟ್ಟದಲ್ಲಿ ತುರ್ತು ಬಳಕೆ ಪಟ್ಟಿಗೆ ಕೋವ್ಯಾಕ್ಸಿನ್ ಲಸಿಕೆಯನ್ನು ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆ ಭಾರತ್ ಬಯೋಟೆಕ್​ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿತ್ತು. ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮುನ್ನ ಅಂತಿಮ ಹಂತದ ಅಪಾಯ-ಪ್ರಯೋಜನ ಮೌಲ್ಯಮಾಪನವನ್ನು ನಡೆಸುವುದಕ್ಕೆ ಈ ಹೆಚ್ಚುವರಿ ಸ್ಪಷ್ಟನೆಗಳನ್ನು ಕೇಳಲಾಗಿತ್ತು. ನಿರೀಕ್ಷಿತ ಸಮಯದಲ್ಲಿ ಡೇಟಾ ಲಭ್ಯವಾದಲ್ಲಿ ನವೆಂಬರ್ 3ಕ್ಕೆ ಅಂತಿಮ ಮೌಲ್ಯಮಾಪನ ನಡೆಸಲು ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿ ಮತ್ತೊಮ್ಮೆ ಸಭೆ ಸೇರಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದರು. ಅದರಂತೆ ಇಂದು ಈ ಬಗ್ಗೆ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಕೋವ್ಯಾಕ್ಸಿನ್ ಲಸಿಕೆಗೆ ಅನುಮತಿ ನೀಡಲು ಭಾರತ್ ಬಯೋಟೆಕ್​ನಿಂದ ಹೆಚ್ಚುವರಿ ಸ್ಪಷ್ಟನೆ ಕೇಳಿದ WHO

Covaxin: ನವೆಂಬರ್​ನಲ್ಲಿ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಲಭ್ಯ ಸಾಧ್ಯತೆ; ಆರೋಗ್ಯ ಸಮಸ್ಯೆ ಇರುವವರಿಗೆ ಆದ್ಯತೆ

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?