AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಕೊವ್ಯಾಕ್ಸಿನ್ ಹೆಚ್ಚಿನ ಸಮಯ ತೆಗೆದುಕೊಳ್ಳಲಿಲ್ಲ: ಡಾ ಸೌಮ್ಯಾ ಸ್ವಾಮಿನಾಥನ್

Covaxin ಕೊವ್ಯಾಕ್ಸಿನ್ 90 ರಿಂದ 100 ದಿನಗಳನ್ನು ತೆಗೆದುಕೊಂಡಿತು" ಎಂದು ಡಾ ಸ್ವಾಮಿನಾಥನ್ ಹೇಳಿದರು. ತುರ್ತು ಬಳಕೆಗಾಗಿ ಅನುಮತಿ ನೀಡಲು ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಸಭೆ ನಡೆಸಿ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿದೆ ಎಂದು ಅವರು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಕೊವ್ಯಾಕ್ಸಿನ್ ಹೆಚ್ಚಿನ ಸಮಯ ತೆಗೆದುಕೊಳ್ಳಲಿಲ್ಲ: ಡಾ ಸೌಮ್ಯಾ ಸ್ವಾಮಿನಾಥನ್
ಸೌಮ್ಯಾ ಸ್ವಾಮಿನಾಥನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 04, 2021 | 12:00 PM

Share

ದೆಹಲಿ: ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಅನುಮೋದನೆಯನ್ನು ಪಡೆಯಲು ಕೊವ್ಯಾಕ್ಸಿನ್ ಯಾವುದೇ ರೀತಿಯಿಂದಲೂ ಹೆಚ್ಚು ಸಮಯ ತೆಗೆದುಕೊಂಡಿಲ್ಲ ಎಂದು ಮುಖ್ಯ ವಿಜ್ಞಾನಿ ಡಾ ಸೌಮ್ಯಾ ಸ್ವಾಮಿನಾಥನ್ (Dr Soumya Swaminathan) ಬುಧವಾರ ಹೇಳಿದ್ದಾರೆ. ಆರೋಗ್ಯ ಸಂಸ್ಥೆಯು ಭಾರತದ ಲಸಿಕೆ ಅನುಮೋದನೆಯನ್ನು ತಡೆಹಿಡಿದಿದೆ. ಅದೇ ವೇಳೆ ಚೀನಾದ ಲಸಿಕೆಗೆ ಅನುಮೋದನೆ ನೀಡಿದೆ ಎಂಬ ವಾದವನ್ನು ಡಾ ಸೌಮ್ಯಾ ತಳ್ಳಿ ಹಾಕಿದ್ದಾರೆ.

ಎನ್​ಡಿಟಿವಿಯೊಂದಿಗೆ ಮಾತನಾಡಿದ ಡಾ ಸೌಮ್ಯಾ  ಸ್ವಾಮಿನಾಥನ್, ಲಸಿಕೆ ತುರ್ತು ಬಳಕೆ ಅನುಮೋದನೆಯನ್ನು ಪಡೆಯಲು ಸರಾಸರಿ 50-60 ದಿನಗಳನ್ನು ತೆಗೆದುಕೊಂಡಿತು. ಆದರೆ ಕೆಲವು 165 ದಿನಗಳವರೆಗೆ ತೆಗೆದುಕೊಂಡವು. ಚೀನಾ ನಿರ್ಮಿತ ಸಿನೋಫಾರ್ಮ್ ಮತ್ತು ಸಿನೋವಾಕ್ ಲಸಿಕೆಗಳು ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಯನ್ನು ಪಡೆಯಲು 150-165 ದಿನಗಳ ನಡುವೆ ತೆಗೆದುಕೊಂಡಿತು ಎಂದು ಅವರು ಹೇಳಿದರು.

“ಕೊವ್ಯಾಕ್ಸಿನ್ 90 ರಿಂದ 100 ದಿನಗಳನ್ನು ತೆಗೆದುಕೊಂಡಿತು” ಎಂದು ಡಾ ಸ್ವಾಮಿನಾಥನ್ ಹೇಳಿದರು. ತುರ್ತು ಬಳಕೆಗಾಗಿ ಅನುಮತಿ ನೀಡಲು ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಸಭೆ ನಡೆಸಿ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿದೆ ಎಂದು ಅವರು ಹೇಳಿದರು. “ಸಮಿತಿಯು ಇಂದು ಮತ್ತೆ ಭೇಟಿಯಾಯಿತು ಮತ್ತು ತುಂಬಾ ತೃಪ್ತವಾಗಿದೆ” ಎಂದು ಅವರು ಹೇಳಿದರು. ಅದೇ ವೇಳೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಇನ್ನೂ 13 ಲಸಿಕೆಗಳು ಕಾಯುತ್ತಿವೆ.

ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಬಳಕೆಯ ಪಟ್ಟಿಯು ಸಾರ್ವಜನಿಕ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ಹೊಸ ಅಥವಾ ಪರವಾನಗಿರಹಿತ ಉತ್ಪನ್ನಗಳನ್ನು ನಿರ್ಣಯಿಸಲು ಮತ್ತು ಪಟ್ಟಿ ಮಾಡಲು ಅಪಾಯ-ಆಧಾರಿತ ಕಾರ್ಯವಿಧಾನವಾಗಿದೆ.

ವಿಶ್ವ  ಆರೋಗ್ಯ ಸಂಸ್ಥೆಯ ಅನುಮೋದನೆ ಎಂದರೆ ‘ಮೇಡ್-ಇನ್-ಇಂಡಿಯಾ’ ಲಸಿಕೆಯನ್ನು ಇತರ ದೇಶಗಳು ಗುರುತಿಸುತ್ತವೆ. ಲಸಿಕೆ ಪಡೆದ ಭಾರತೀಯರು ಸ್ವಯಂ-ಕ್ವಾರಂಟೈನ್ ಹೊಂದುವ ಅಗತ್ಯವಿಲ್ಲ ಅಥವಾ ವಿದೇಶಕ್ಕೆ ಪ್ರಯಾಣಿಸುವಾಗ ನಿರ್ಬಂಧಗಳನ್ನು ಎದುರಿಸಬೇಕಾಗಿಲ್ಲ.

ಇದನ್ನೂ ಓದಿ:  Covaxin: ಕೊವ್ಯಾಕ್ಸಿನ್‌ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ