AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಕೊವ್ಯಾಕ್ಸಿನ್ ಹೆಚ್ಚಿನ ಸಮಯ ತೆಗೆದುಕೊಳ್ಳಲಿಲ್ಲ: ಡಾ ಸೌಮ್ಯಾ ಸ್ವಾಮಿನಾಥನ್

Covaxin ಕೊವ್ಯಾಕ್ಸಿನ್ 90 ರಿಂದ 100 ದಿನಗಳನ್ನು ತೆಗೆದುಕೊಂಡಿತು" ಎಂದು ಡಾ ಸ್ವಾಮಿನಾಥನ್ ಹೇಳಿದರು. ತುರ್ತು ಬಳಕೆಗಾಗಿ ಅನುಮತಿ ನೀಡಲು ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಸಭೆ ನಡೆಸಿ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿದೆ ಎಂದು ಅವರು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಕೊವ್ಯಾಕ್ಸಿನ್ ಹೆಚ್ಚಿನ ಸಮಯ ತೆಗೆದುಕೊಳ್ಳಲಿಲ್ಲ: ಡಾ ಸೌಮ್ಯಾ ಸ್ವಾಮಿನಾಥನ್
ಸೌಮ್ಯಾ ಸ್ವಾಮಿನಾಥನ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Nov 04, 2021 | 12:00 PM

Share

ದೆಹಲಿ: ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಅನುಮೋದನೆಯನ್ನು ಪಡೆಯಲು ಕೊವ್ಯಾಕ್ಸಿನ್ ಯಾವುದೇ ರೀತಿಯಿಂದಲೂ ಹೆಚ್ಚು ಸಮಯ ತೆಗೆದುಕೊಂಡಿಲ್ಲ ಎಂದು ಮುಖ್ಯ ವಿಜ್ಞಾನಿ ಡಾ ಸೌಮ್ಯಾ ಸ್ವಾಮಿನಾಥನ್ (Dr Soumya Swaminathan) ಬುಧವಾರ ಹೇಳಿದ್ದಾರೆ. ಆರೋಗ್ಯ ಸಂಸ್ಥೆಯು ಭಾರತದ ಲಸಿಕೆ ಅನುಮೋದನೆಯನ್ನು ತಡೆಹಿಡಿದಿದೆ. ಅದೇ ವೇಳೆ ಚೀನಾದ ಲಸಿಕೆಗೆ ಅನುಮೋದನೆ ನೀಡಿದೆ ಎಂಬ ವಾದವನ್ನು ಡಾ ಸೌಮ್ಯಾ ತಳ್ಳಿ ಹಾಕಿದ್ದಾರೆ.

ಎನ್​ಡಿಟಿವಿಯೊಂದಿಗೆ ಮಾತನಾಡಿದ ಡಾ ಸೌಮ್ಯಾ  ಸ್ವಾಮಿನಾಥನ್, ಲಸಿಕೆ ತುರ್ತು ಬಳಕೆ ಅನುಮೋದನೆಯನ್ನು ಪಡೆಯಲು ಸರಾಸರಿ 50-60 ದಿನಗಳನ್ನು ತೆಗೆದುಕೊಂಡಿತು. ಆದರೆ ಕೆಲವು 165 ದಿನಗಳವರೆಗೆ ತೆಗೆದುಕೊಂಡವು. ಚೀನಾ ನಿರ್ಮಿತ ಸಿನೋಫಾರ್ಮ್ ಮತ್ತು ಸಿನೋವಾಕ್ ಲಸಿಕೆಗಳು ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಯನ್ನು ಪಡೆಯಲು 150-165 ದಿನಗಳ ನಡುವೆ ತೆಗೆದುಕೊಂಡಿತು ಎಂದು ಅವರು ಹೇಳಿದರು.

“ಕೊವ್ಯಾಕ್ಸಿನ್ 90 ರಿಂದ 100 ದಿನಗಳನ್ನು ತೆಗೆದುಕೊಂಡಿತು” ಎಂದು ಡಾ ಸ್ವಾಮಿನಾಥನ್ ಹೇಳಿದರು. ತುರ್ತು ಬಳಕೆಗಾಗಿ ಅನುಮತಿ ನೀಡಲು ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಸಭೆ ನಡೆಸಿ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿದೆ ಎಂದು ಅವರು ಹೇಳಿದರು. “ಸಮಿತಿಯು ಇಂದು ಮತ್ತೆ ಭೇಟಿಯಾಯಿತು ಮತ್ತು ತುಂಬಾ ತೃಪ್ತವಾಗಿದೆ” ಎಂದು ಅವರು ಹೇಳಿದರು. ಅದೇ ವೇಳೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಇನ್ನೂ 13 ಲಸಿಕೆಗಳು ಕಾಯುತ್ತಿವೆ.

ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಬಳಕೆಯ ಪಟ್ಟಿಯು ಸಾರ್ವಜನಿಕ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ಹೊಸ ಅಥವಾ ಪರವಾನಗಿರಹಿತ ಉತ್ಪನ್ನಗಳನ್ನು ನಿರ್ಣಯಿಸಲು ಮತ್ತು ಪಟ್ಟಿ ಮಾಡಲು ಅಪಾಯ-ಆಧಾರಿತ ಕಾರ್ಯವಿಧಾನವಾಗಿದೆ.

ವಿಶ್ವ  ಆರೋಗ್ಯ ಸಂಸ್ಥೆಯ ಅನುಮೋದನೆ ಎಂದರೆ ‘ಮೇಡ್-ಇನ್-ಇಂಡಿಯಾ’ ಲಸಿಕೆಯನ್ನು ಇತರ ದೇಶಗಳು ಗುರುತಿಸುತ್ತವೆ. ಲಸಿಕೆ ಪಡೆದ ಭಾರತೀಯರು ಸ್ವಯಂ-ಕ್ವಾರಂಟೈನ್ ಹೊಂದುವ ಅಗತ್ಯವಿಲ್ಲ ಅಥವಾ ವಿದೇಶಕ್ಕೆ ಪ್ರಯಾಣಿಸುವಾಗ ನಿರ್ಬಂಧಗಳನ್ನು ಎದುರಿಸಬೇಕಾಗಿಲ್ಲ.

ಇದನ್ನೂ ಓದಿ:  Covaxin: ಕೊವ್ಯಾಕ್ಸಿನ್‌ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ