AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಕೊವ್ಯಾಕ್ಸಿನ್ ಹೆಚ್ಚಿನ ಸಮಯ ತೆಗೆದುಕೊಳ್ಳಲಿಲ್ಲ: ಡಾ ಸೌಮ್ಯಾ ಸ್ವಾಮಿನಾಥನ್

Covaxin ಕೊವ್ಯಾಕ್ಸಿನ್ 90 ರಿಂದ 100 ದಿನಗಳನ್ನು ತೆಗೆದುಕೊಂಡಿತು" ಎಂದು ಡಾ ಸ್ವಾಮಿನಾಥನ್ ಹೇಳಿದರು. ತುರ್ತು ಬಳಕೆಗಾಗಿ ಅನುಮತಿ ನೀಡಲು ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಸಭೆ ನಡೆಸಿ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿದೆ ಎಂದು ಅವರು ಹೇಳಿದರು.

ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಕೊವ್ಯಾಕ್ಸಿನ್ ಹೆಚ್ಚಿನ ಸಮಯ ತೆಗೆದುಕೊಳ್ಳಲಿಲ್ಲ: ಡಾ ಸೌಮ್ಯಾ ಸ್ವಾಮಿನಾಥನ್
ಸೌಮ್ಯಾ ಸ್ವಾಮಿನಾಥನ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 04, 2021 | 12:00 PM

Share

ದೆಹಲಿ: ತುರ್ತು ಬಳಕೆಗಾಗಿ ವಿಶ್ವ ಆರೋಗ್ಯ ಸಂಸ್ಥೆಯ (WHO) ಅನುಮೋದನೆಯನ್ನು ಪಡೆಯಲು ಕೊವ್ಯಾಕ್ಸಿನ್ ಯಾವುದೇ ರೀತಿಯಿಂದಲೂ ಹೆಚ್ಚು ಸಮಯ ತೆಗೆದುಕೊಂಡಿಲ್ಲ ಎಂದು ಮುಖ್ಯ ವಿಜ್ಞಾನಿ ಡಾ ಸೌಮ್ಯಾ ಸ್ವಾಮಿನಾಥನ್ (Dr Soumya Swaminathan) ಬುಧವಾರ ಹೇಳಿದ್ದಾರೆ. ಆರೋಗ್ಯ ಸಂಸ್ಥೆಯು ಭಾರತದ ಲಸಿಕೆ ಅನುಮೋದನೆಯನ್ನು ತಡೆಹಿಡಿದಿದೆ. ಅದೇ ವೇಳೆ ಚೀನಾದ ಲಸಿಕೆಗೆ ಅನುಮೋದನೆ ನೀಡಿದೆ ಎಂಬ ವಾದವನ್ನು ಡಾ ಸೌಮ್ಯಾ ತಳ್ಳಿ ಹಾಕಿದ್ದಾರೆ.

ಎನ್​ಡಿಟಿವಿಯೊಂದಿಗೆ ಮಾತನಾಡಿದ ಡಾ ಸೌಮ್ಯಾ  ಸ್ವಾಮಿನಾಥನ್, ಲಸಿಕೆ ತುರ್ತು ಬಳಕೆ ಅನುಮೋದನೆಯನ್ನು ಪಡೆಯಲು ಸರಾಸರಿ 50-60 ದಿನಗಳನ್ನು ತೆಗೆದುಕೊಂಡಿತು. ಆದರೆ ಕೆಲವು 165 ದಿನಗಳವರೆಗೆ ತೆಗೆದುಕೊಂಡವು. ಚೀನಾ ನಿರ್ಮಿತ ಸಿನೋಫಾರ್ಮ್ ಮತ್ತು ಸಿನೋವಾಕ್ ಲಸಿಕೆಗಳು ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಯನ್ನು ಪಡೆಯಲು 150-165 ದಿನಗಳ ನಡುವೆ ತೆಗೆದುಕೊಂಡಿತು ಎಂದು ಅವರು ಹೇಳಿದರು.

“ಕೊವ್ಯಾಕ್ಸಿನ್ 90 ರಿಂದ 100 ದಿನಗಳನ್ನು ತೆಗೆದುಕೊಂಡಿತು” ಎಂದು ಡಾ ಸ್ವಾಮಿನಾಥನ್ ಹೇಳಿದರು. ತುರ್ತು ಬಳಕೆಗಾಗಿ ಅನುಮತಿ ನೀಡಲು ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಸಭೆ ನಡೆಸಿ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿದೆ ಎಂದು ಅವರು ಹೇಳಿದರು. “ಸಮಿತಿಯು ಇಂದು ಮತ್ತೆ ಭೇಟಿಯಾಯಿತು ಮತ್ತು ತುಂಬಾ ತೃಪ್ತವಾಗಿದೆ” ಎಂದು ಅವರು ಹೇಳಿದರು. ಅದೇ ವೇಳೆ ವಿಶ್ವ ಆರೋಗ್ಯ ಸಂಸ್ಥೆಯ ಅನುಮೋದನೆಗಾಗಿ ಇನ್ನೂ 13 ಲಸಿಕೆಗಳು ಕಾಯುತ್ತಿವೆ.

ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಬಳಕೆಯ ಪಟ್ಟಿಯು ಸಾರ್ವಜನಿಕ ಆರೋಗ್ಯ ತುರ್ತು ಸಂದರ್ಭಗಳಲ್ಲಿ ಬಳಸಬಹುದಾದ ಹೊಸ ಅಥವಾ ಪರವಾನಗಿರಹಿತ ಉತ್ಪನ್ನಗಳನ್ನು ನಿರ್ಣಯಿಸಲು ಮತ್ತು ಪಟ್ಟಿ ಮಾಡಲು ಅಪಾಯ-ಆಧಾರಿತ ಕಾರ್ಯವಿಧಾನವಾಗಿದೆ.

ವಿಶ್ವ  ಆರೋಗ್ಯ ಸಂಸ್ಥೆಯ ಅನುಮೋದನೆ ಎಂದರೆ ‘ಮೇಡ್-ಇನ್-ಇಂಡಿಯಾ’ ಲಸಿಕೆಯನ್ನು ಇತರ ದೇಶಗಳು ಗುರುತಿಸುತ್ತವೆ. ಲಸಿಕೆ ಪಡೆದ ಭಾರತೀಯರು ಸ್ವಯಂ-ಕ್ವಾರಂಟೈನ್ ಹೊಂದುವ ಅಗತ್ಯವಿಲ್ಲ ಅಥವಾ ವಿದೇಶಕ್ಕೆ ಪ್ರಯಾಣಿಸುವಾಗ ನಿರ್ಬಂಧಗಳನ್ನು ಎದುರಿಸಬೇಕಾಗಿಲ್ಲ.

ಇದನ್ನೂ ಓದಿ:  Covaxin: ಕೊವ್ಯಾಕ್ಸಿನ್‌ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಒಪ್ಪಿಗೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?