AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮತ್ತು ಬ್ರಿಟನ್​ನ​ಲ್ಲಿ ಕಂಡುಬರುವ ಕೊರೊನಾವೈರಸ್ ತಳಿಗಳ ವಿರುದ್ಧ ಕೊವಾಕ್ಸಿನ್ ಪರಿಣಾಮಕಾರಿ: ಭಾರತ್ ಬಯೋಟೆಕ್‌

Covaxin: ಭಾರತ್ ಬಯೋಟೆಕ್ ಟ್ವೀಟ್ ಮಾಡಿದ ಇನ್ಫೋಗ್ರಾಫಿಕ್ ಪ್ರಕಾರ ಈ ಲಸಿಕೆಯು ಕೊರೊನಾವೈರಸ್ ರೂಪಾಂತರಿಗೆ (ಡಿ 614 ಜಿ) ಹೋಲಿಸಿದರೆ ಬಿ .1.617 ರೂಪಾಂತರಿ ವಿರುದ್ಧ 1.95 ಅಂಶದಿಂದ ತಟಸ್ಥೀಕರಣದಲ್ಲಿ ಸಾಧಾರಣ ಇಳಿಕೆ ಕಂಡುಬಂದಿದೆ. ಆದಾಗ್ಯೂ, ಈ ಕಡಿತದ ಹೊರತಾಗಿಯೂ ಬಿ .1.617ನೊಂದಿಗೆ ಟೈಟ್ರೆ ಮಟ್ಟವು ರಕ್ಷಣಾತ್ಮಕ ಎಂದು ನಿರೀಕ್ಷಿಸಿದ ಮಟ್ಟಕ್ಕಿಂತಲೂ ಹೆಚ್ಚಿಗೆ ಆಗಿದೆ.

ಭಾರತ ಮತ್ತು ಬ್ರಿಟನ್​ನ​ಲ್ಲಿ ಕಂಡುಬರುವ ಕೊರೊನಾವೈರಸ್ ತಳಿಗಳ ವಿರುದ್ಧ ಕೊವಾಕ್ಸಿನ್ ಪರಿಣಾಮಕಾರಿ: ಭಾರತ್ ಬಯೋಟೆಕ್‌
ಕೊವ್ಯಾಕ್ಸಿನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 16, 2021 | 5:37 PM

Share

ದೆಹಲಿ: ಕೋವಿಡ್ ಲಸಿಕೆ ಕೊವಾಕ್ಸಿನ್ ಭಾರತ ಮತ್ತು ಬ್ರಿಟನ್​ನಲ್ಲಿ ಮೊದಲು ಗುರುತಿಸಲ್ಪಟ್ಟ B.1.617 ಮತ್ತು B.1.1.7 ಸೇರಿದಂತೆ ಪರೀಕ್ಷಿಸಲ್ಪಟ್ಟ ಎಲ್ಲಾ ಪ್ರಮುಖ ಹೊಸ ರೂಪಾಂತರಿ ವೈರಸ್​ಗಳ ವಿರುದ್ಧ ಪರಿಣಾಮಕಾರಿ ಆಗಿದೆ ಎಂದು ಭಾರತ್ ಬಯೋಟೆಕ್‌ ಭಾನುವಾರ ಹೇಳಿದೆ. ಭಾರತ್ ಬಯೋಟೆಕ್ ಟ್ವೀಟ್ ಮಾಡಿದ ಇನ್ಫೋಗ್ರಾಫಿಕ್ ಪ್ರಕಾರ ಈ ಲಸಿಕೆಯು ಕೊರೊನಾವೈರಸ್ ರೂಪಾಂತರಿಗೆ (ಡಿ 614 ಜಿ) ಹೋಲಿಸಿದರೆ ಬಿ .1.617 ರೂಪಾಂತರಿ ವಿರುದ್ಧ 1.95 ಅಂಶದಿಂದ ತಟಸ್ಥೀಕರಣದಲ್ಲಿ ಸಾಧಾರಣ ಇಳಿಕೆ ಕಂಡುಬಂದಿದೆ. ಆದಾಗ್ಯೂ, ಈ ಕಡಿತದ ಹೊರತಾಗಿಯೂ ಬಿ .1.617ನೊಂದಿಗೆ ಟೈಟ್ರೆ ಮಟ್ಟವು ರಕ್ಷಣಾತ್ಮಕ ಎಂದು ನಿರೀಕ್ಷಿಸಿದ ಮಟ್ಟಕ್ಕಿಂತಲೂ ಹೆಚ್ಚಿಗೆ ಆಗಿದೆ.

B.1.1.7 (ಬ್ರಿಟನ್ ನಲ್ಲಿ ಮೊದಲು ಕಂಡುಬಂದಿದೆ) ಮತ್ತು ಲಸಿಕೆ ತಳಿ (D614G) ನಡುವಿನ ತಟಸ್ಥೀಕರಣದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ ಎಂದು ಭಾರತ್ ಬಯೋಟೆಕ್ ಸೇರಿಸಲಾಗಿದೆ.

ಈ ಸಂಶೋಧನೆಗಳು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ – ಇಂಡಿಯಾ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದೊಂದಿಗೆ ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.

ಪ್ರಸ್ತುತ ದೇಶದಲ್ಲಿ ಲಭ್ಯವಿರುವ ಮೂರು ಕೋವಿಡ್ -19 ಲಸಿಕೆಗಳಲ್ಲಿ ಕೋವಾಕ್ಸಿನ್ ಕೂಡ ಒಂದು. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶಾದ್ಯಂತ ಈವರೆಗೆ ಒಟ್ಟು 18,22,20,164 ಡೋಸ್ ಕೊವಿಡ್ -19 ಲಸಿಕೆಗಳನ್ನು ನೀಡಲಾಗಿದೆ.

ಇದನ್ನೂ ಓದಿ: ಮುಂದಿನ ಮೂರು ದಿನಗಳಲ್ಲಿ 51 ಲಕ್ಷ ಡೋಸ್ ಕೊವಿಡ್ ಲಸಿಕೆ ರಾಜ್ಯಗಳಿಗೆ ಸಿಗಲಿದೆ: ಕೇಂದ್ರ ಆರೋಗ್ಯ ಸಚಿವಾಲಯ

Published On - 5:34 pm, Sun, 16 May 21

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ