Covaxin: ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಲಸಿಕೆ​ಗೆ ಅನುಮತಿ ಬಗ್ಗೆ ಮುಂದಿನ ವಾರ ಅಂತಿಮ ನಿರ್ಧಾರ

Covid Vaccination: ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯ ಸ್ಟ್ರಾಟಜಿಕ್ ಅಡ್ಲೈಸರಿ ಗ್ರೂಪ್ ಆಫ್ ಎಕ್ಸ್ ಫರ್ಟ್ ಸಭೆ ನಡೆದಿದೆ.

Covaxin: ಭಾರತ್ ಬಯೋಟೆಕ್​ನ ಕೋವ್ಯಾಕ್ಸಿನ್ ಲಸಿಕೆ​ಗೆ ಅನುಮತಿ ಬಗ್ಗೆ ಮುಂದಿನ ವಾರ ಅಂತಿಮ ನಿರ್ಧಾರ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Follow us
| Updated By: ಸುಷ್ಮಾ ಚಕ್ರೆ

Updated on:Oct 06, 2021 | 3:35 PM

ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆ ಸಭೆ ನಡೆಸಿದೆ. ಈ ವೇಳೆ ಕೋವ್ಯಾಕ್ಸಿನ್ ಲಸಿಕೆಯ ಬಳಕೆಗೆ ತುರ್ತು ಅನುಮತಿ ನೀಡುವ ಬಗ್ಗೆ ಮುಂದಿನ ವಾರ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಾಗಿ ಡಬ್ಲುಎಚ್​ಒ ತಿಳಿಸಿದೆ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಮುಂದಿನ ವಾರ ಮತ್ತೊಂದು ಸಭೆ ನಿಗದಿಪಡಿಸಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಟ್ವೀಟ್ ಮೂಲಕ ತಿಳಿಸಿದೆ.

ಭಾರತದ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡುವ ಬಗ್ಗೆ ಮಂಗಳವಾರ ವಿಶ್ವ ಆರೋಗ್ಯ ಸಂಸ್ಥೆಯ ಸ್ಟ್ರಾಟಜಿಕ್ ಅಡ್ಲೈಸರಿ ಗ್ರೂಪ್ ಆಫ್ ಎಕ್ಸ್ ಫರ್ಟ್ ಸಭೆ ನಡೆದಿದೆ. ಈ ಎಕ್ಸ್ ಫರ್ಟ್ ಸಭೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ ತುರ್ತು ಬಳಕೆಗೆ ಅನುಮೋದನೆ ನೀಡಬೇಕೇ ಬೇಡವೇ ಎನ್ನುವ ಬಗ್ಗೆ ಚರ್ಚೆ ಮಾಡಲಾಗಿದೆ. ಇದು ಶಿಫಾರಸು ಮಾಡಿದ ನಂತರ ವಿಶ್ವ ಆರೋಗ್ಯ ಸಂಸ್ಥೆಯು ಅಂತಿಮ ತೀರ್ಮಾನ ಕೈಗೊಳ್ಳಲಿದೆ. ನಿನ್ನೆ ನಡೆದ ವಿಶ್ವ ಆರೋಗ್ಯ ಸಂಸ್ಥೆಯ ಸ್ಟ್ರಾಟಜಿಕ್ ಅಡ್ವೈಸರಿ ಗ್ರೂಪ್ ಆಫ್ ಎಕ್ಸ್ ಫರ್ಟ್ ಸಭೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಯನ್ನು ಉತ್ಪಾದಿಸಿರುವ ಭಾರತ್ ಬಯೋಟೆಕ್ ಕಂಪನಿಯ ಪ್ರತಿನಿಧಿಗಳು ಲಸಿಕೆಯ ಬಗ್ಗೆ ದಾಖಲೆ ಹಾಗೂ ದತ್ತಾಂಶಗಳನ್ನು ನೀಡಿದ್ದಾರೆ. ಕೊವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಕೊರೊನಾ ವೈರಸ್ ವಿರುದ್ದ ಪರಿಣಾಮಕಾರಿತನ ಹಾಗೂ 1ರಿಂದ 3ನೇ ಹಂತದ ಪ್ರಯೋಗದವರೆಗಿನ ಫಲಿತಾಂಶದ ಕುರಿತು ಮಾಹಿತಿ ನೀಡಿದ್ದಾರೆ.

ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ತುರ್ತು ಬಳಕೆಗೆ ಅನುಮೋದನೆ ಸಿಕ್ಕರೆ ಕೊವ್ಯಾಕ್ಸಿನ್ ಲಸಿಕೆ ಪಡೆದವರು ವಿಶ್ವದಲ್ಲಿ ಯಾವುದೇ ನಿರ್ಬಂಧ ಇಲ್ಲದೇ ಸಂಚಾರ ಮಾಡಬಹುದು. ಈ ಕಾರಣಕ್ಕಾಗಿ ಕೊವ್ಯಾಕ್ಸಿನ್ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಬಳಕೆಗೆ ಅನುಮೋದನೆ ಸಿಗುವುದು ಬಹಳ ಮಹತ್ವದ ವಿಷಯವಾಗಿದೆ.

ಭಾರತ್ ಬಯೋಟೆಕ್ ಕಂಪನಿಯು ಕಳೆದ ಜೂನ್ ತಿಂಗಳಲ್ಲೇ ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ವೈದ್ಯಕೀಯ ಪರೀಕ್ಷೆಯ ಅಂಕಿ-ಅಂಶಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಸಲ್ಲಿಸಿದೆ. ಈಗ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೊವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ನೀಡುವ ಮುನ್ನ ವೈದ್ಯಕೀಯ ಪ್ರಯೋಗದ ಅಂಕಿ-ಅಂಶಗಳನ್ನು ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: Covid Vaccine: ಕೊರೊನಾ ಲಸಿಕೆ ಬಳಿಕವೂ ಭಾರತದಲ್ಲಿ ಬೂಸ್ಟರ್ ಶಾಟ್ಸ್ ಅಗತ್ಯವಿದೆ; ಹಿರಿಯ ವಿಜ್ಞಾನಿ

ZyCov-D Vaccine: ಅ.2ರಂದು ಭಾರತಕ್ಕೆ ಮತ್ತೊಂದು ಕೊವಿಡ್ ಲಸಿಕೆ ಲಭ್ಯ; ಜೈಕೋವ್-ಡಿ ಬೆಲೆ ನಿಗದಿ ಬಗ್ಗೆ ಚರ್ಚೆ

Published On - 3:34 pm, Wed, 6 October 21

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ