AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು.

ಅಪಾಯಕಾರಿ ಡೆಲ್ಟಾ ಪ್ಲಸ್ ವಿರುದ್ಧವೂ ಪರಿಣಾಮಕಾರಿಯಾಗಿ ಹೋರಾಡಬಲ್ಲದು ಕೊವ್ಯಾಕ್ಸಿನ್​ ಲಸಿಕೆ: ಐಸಿಎಂಆರ್ ಅಧ್ಯಯನ ವರದಿ
ಕೊವ್ಯಾಕ್ಸಿನ್
TV9 Web
| Updated By: Lakshmi Hegde|

Updated on: Aug 02, 2021 | 1:44 PM

Share

ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನಲ್​ ಕೊರೊನಾ ಲಸಿಕೆ, ಡೆಲ್ಟಾ ಪ್ಲಸ್​ ರೂಪಾಂತರಿ ವೈರಾಣು ವಿರುದ್ಧ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (Indian Council Of Medical Research)ಯ ಇತ್ತೀಚೆಗಿನ ಅಧ್ಯಯನ ತಿಳಿಸಿದೆ. ಕೊವ್ಯಾಕ್ಸಿನ್​ ಲಸಿಕೆಯನ್ನು ಐಸಿಎಂಆರ್​ ಮತ್ತು ರಾಷ್ಟ್ರೀಯ ವೈರಾಲಜಿ ಇನ್​ಸ್ಟಿಟ್ಯೂಟ್​ (NIV) ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಕೊವಿಡ್​ 19 ವೈರಸ್ ವಿರುದ್ಧ ಶೇ.77.8ರಷ್ಟು ಮತ್ತು ಡೆಲ್ಟಾ ವೈರಾಣು ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿ ಎಂದು ಈ ಹೇಳಲಾಗಿತ್ತು. ಆದರೆ ಕೊವಿಡ್​ 19 ರೂಪಾಂತರಿ ತಳಿಯಾದ, ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ಡೆಲ್ಟಾ ಪ್ಲಸ್​ ವೈರಾಣು ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು ಎಂದು ಐಸಿಎಂಆರ್​ ಅಧ್ಯಯನ ಇದೀಗ ತಿಳಿಸಿದೆ.

ಕೊವ್ಯಾಕ್ಸಿನ್​ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ಪಡೆದಿತ್ತು. ಇತ್ತೀಚೆಗಷ್ಟೇ ಭಾರತ್​ ಬಯೋಟೆಕ್​ ಕಂಪನಿ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು. ಅದರ ಅನ್ವಯ ಈ ಲಸಿಕೆ ಲಕ್ಷಣ ಸಹಿತ ಕೊವಿಡ್​ 19 ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಸಂಪೂರ್ಣವಾಗಿ ಭಾರತದಲ್ಲೇ ತಯಾರಾದ ಈ ಲಸಿಕೆ ಸದ್ಯ ಬ್ರೆಜಿಲ್, ಮೆಕ್ಸಿಕೋ, ಫಿಲಿಪೈನ್ಸ್ ಮತ್ತು ಇರಾನ್ ಸೇರಿದಂತೆ 16 ರಾಷ್ಟ್ರಗಳಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದಿದೆ.

ಇದನ್ನೂ ಓದಿ: ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು

Covaxin Vaccine is Effective Against Delta Plus Says ICMR

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ