AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್ ಮಾತ್ರವಲ್ಲದೆ ಇನ್ನೂ 4 ಕಡೆ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ

CoVaxin: ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ  4  ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ.

ಭಾರತ್ ಬಯೋಟೆಕ್ ಮಾತ್ರವಲ್ಲದೆ ಇನ್ನೂ 4 ಕಡೆ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 15, 2021 | 5:08 PM

Share

ದೇಶದಲ್ಲಿ ಕೊವಿಡ್ ಲಸಿಕೆ ವಿತರಣೆ ಅಭಿಯಾನವನ್ನು ತೀವ್ರಗೊಳಿಸಲು ಸರ್ಕಾರ ಹವಣಿಸುತ್ತಿದೆ. ಸದ್ಯ ಕೊವಿಡ್ ಲಸಿಕೆ ಉತ್ಪಾದಿಸುತ್ತಿರುವ ಭಾರತ್ ಬಯೋಟೆಕ್​ನ ಜತೆ ದೇಶದ 4 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ಕೊವಿಡ್ ಲಸಿಕೆಯ ಉತ್ಪಾದನೆ ಹೆಚ್ಚಿಸಲು ಅನವರತ ತೊಡಗಿಕೊಂಡಿವೆ. ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ  4  ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ.

ಮುಂಬೈಯ ಹಾಫ್​ಕಿನ್ ಫಾರ್ಮಾಸೂಟಿಕಲ್ಸ್ ಕಾರ್ಪೊರೇಶನ್ ಲಿಮಿಟೆಡ್​ ಮಹಾರಾಷ್ಟ್ರ ಸರ್ಕಾರದ ಅಡಿಯ ಪ್ರಮುಖ ಸಾರ್ವಜನಿಕ ಸಂಸ್ಥೆ. ಕೊವಿಡ್ ಲಸಿಕೆ ಉತ್ಪಾದನೆಗೆ ಸರ್ವ ಸನ್ನದ್ಧವಾಗಿರುವಂತೆ ಸೂಚಿಸಿರುವ ಭಾರತ ಸರ್ಕಾರ, ಈ ಹಾಪ್​ಕಿನ್ ಫಾರ್ಮಾಸೂಟಿಕಲ್ಸ್​ಗೆ 65 ಕೋಟಿ ಧನ ಸಹಾಯ ಒದಗಿಸಿದೆ. ಸದ್ಯ ಲಸಿಕೆ ಉತ್ಪಾದನೆಯ ಕುರಿತು ಕೆಲವು ಪ್ರಕ್ರಿಯೆಯಗಳು ನಡೆಯುತ್ತಿದ್ದು, ಪ್ರತಿ ತಿಂಗಳು 20 ಕೋಟಿ ಕೊವಿಡ್ ಲಸಿಕೆ ಉತ್ಪಾದನೆ ಮಾಡಲು ಹಾಪ್​ಕಿನ್ ಫಾರ್ಮಾಸೂಟಿಕಲ್ಸ್ ಸಂಸ್ಥೆ ಶಕ್ತವಾಗಿದೆ.

ಹೈದರಾಬಾದ್​ನ ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್​ಗೆ ಸರ್ಕಾರ 60 ಕೋಟಿ ಸಹಾಯ ಧನ ನೀಡಿದ್ದು, ಕೊವಿಡ್ ಲಸಿಕೆ ಉತ್ಪಾದನೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ನಿರ್ಮಿಸಲು ತಿಳಿಸಿದೆ. ಇವೆರೆಡು ಸಂಸ್ಥೆಗಳ ಜತೆಗೆ ಬುಲಶಂದರ್​ನಲ್ಲಿರುವ ಭಾರತ್ ಇಮ್ಯನೊಲಾಜಿಕಲ್ ಆ್ಯಂಡ್ ಬಯೋಲಾಜಿಕಲ್ ಲಿಮಿಟೆಡ್​ಗೆ (BIBCOL) 30 ಕೋಟಿ ಸಹಾಯ ಧನ ನೀಡಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳಿಗೆ 1ರಿಂದ1.5 ಕೋಟಿ ಡೋಸ್ ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯವನ್ನು ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್ ಹೊಂದಿದೆ.

ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್​ನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗವೂ ಸಹ ಭಾರತ್ ಬಯೋಟೆಕ್​ನ ಜತೆ ನಿಕಟ ಸಂಪರ್ಕದಲ್ಲಿದೆ. ಭಾರತ್ ಬಯೋಟೆಕ್​ನಿಂದ ಲಸಿಕೆ ಉತ್ಪಾದನೆಯ ಫಾರ್ಮುಲಾ ಹಂಚಿಕೊಳ್ಳುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು ಪ್ರತಿ ತಿಂಗಳೂ 2 ಕೋಟಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆಗೆ ಗುಜರಾತ್​ನ ಈ ಸಂಸ್ಥೆ ಸಜ್ಜಾಗಿದೆ.

ಇದನ್ನೂ ಓದಿ: Union Health Secretary PC: ಕಳೆದ 12 ದಿನಗಳಿಂದ ದೇಶದಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ: ಲವ್ ಅಗರ್ವಾಲ್ 

ಮಕ್ಕಳಲ್ಲಿ ಕೊರೊನಾ ಸೋಂಕು: ಲಕ್ಷಣಗಳೇನು? ಯಾವ ಹಂತದಲ್ಲಿ ಎಂಥಾ ಚಿಕಿತ್ಸೆ?-ಸ್ಪಷ್ಟವಾಗಿ ವಿವರಿಸಿದ ಆರೋಗ್ಯ ಇಲಾಖೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ