AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್ ಮಾತ್ರವಲ್ಲದೆ ಇನ್ನೂ 4 ಕಡೆ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ

CoVaxin: ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ  4  ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ.

ಭಾರತ್ ಬಯೋಟೆಕ್ ಮಾತ್ರವಲ್ಲದೆ ಇನ್ನೂ 4 ಕಡೆ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 15, 2021 | 5:08 PM

Share

ದೇಶದಲ್ಲಿ ಕೊವಿಡ್ ಲಸಿಕೆ ವಿತರಣೆ ಅಭಿಯಾನವನ್ನು ತೀವ್ರಗೊಳಿಸಲು ಸರ್ಕಾರ ಹವಣಿಸುತ್ತಿದೆ. ಸದ್ಯ ಕೊವಿಡ್ ಲಸಿಕೆ ಉತ್ಪಾದಿಸುತ್ತಿರುವ ಭಾರತ್ ಬಯೋಟೆಕ್​ನ ಜತೆ ದೇಶದ 4 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ಕೊವಿಡ್ ಲಸಿಕೆಯ ಉತ್ಪಾದನೆ ಹೆಚ್ಚಿಸಲು ಅನವರತ ತೊಡಗಿಕೊಂಡಿವೆ. ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ  4  ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ.

ಮುಂಬೈಯ ಹಾಫ್​ಕಿನ್ ಫಾರ್ಮಾಸೂಟಿಕಲ್ಸ್ ಕಾರ್ಪೊರೇಶನ್ ಲಿಮಿಟೆಡ್​ ಮಹಾರಾಷ್ಟ್ರ ಸರ್ಕಾರದ ಅಡಿಯ ಪ್ರಮುಖ ಸಾರ್ವಜನಿಕ ಸಂಸ್ಥೆ. ಕೊವಿಡ್ ಲಸಿಕೆ ಉತ್ಪಾದನೆಗೆ ಸರ್ವ ಸನ್ನದ್ಧವಾಗಿರುವಂತೆ ಸೂಚಿಸಿರುವ ಭಾರತ ಸರ್ಕಾರ, ಈ ಹಾಪ್​ಕಿನ್ ಫಾರ್ಮಾಸೂಟಿಕಲ್ಸ್​ಗೆ 65 ಕೋಟಿ ಧನ ಸಹಾಯ ಒದಗಿಸಿದೆ. ಸದ್ಯ ಲಸಿಕೆ ಉತ್ಪಾದನೆಯ ಕುರಿತು ಕೆಲವು ಪ್ರಕ್ರಿಯೆಯಗಳು ನಡೆಯುತ್ತಿದ್ದು, ಪ್ರತಿ ತಿಂಗಳು 20 ಕೋಟಿ ಕೊವಿಡ್ ಲಸಿಕೆ ಉತ್ಪಾದನೆ ಮಾಡಲು ಹಾಪ್​ಕಿನ್ ಫಾರ್ಮಾಸೂಟಿಕಲ್ಸ್ ಸಂಸ್ಥೆ ಶಕ್ತವಾಗಿದೆ.

ಹೈದರಾಬಾದ್​ನ ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್​ಗೆ ಸರ್ಕಾರ 60 ಕೋಟಿ ಸಹಾಯ ಧನ ನೀಡಿದ್ದು, ಕೊವಿಡ್ ಲಸಿಕೆ ಉತ್ಪಾದನೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ನಿರ್ಮಿಸಲು ತಿಳಿಸಿದೆ. ಇವೆರೆಡು ಸಂಸ್ಥೆಗಳ ಜತೆಗೆ ಬುಲಶಂದರ್​ನಲ್ಲಿರುವ ಭಾರತ್ ಇಮ್ಯನೊಲಾಜಿಕಲ್ ಆ್ಯಂಡ್ ಬಯೋಲಾಜಿಕಲ್ ಲಿಮಿಟೆಡ್​ಗೆ (BIBCOL) 30 ಕೋಟಿ ಸಹಾಯ ಧನ ನೀಡಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳಿಗೆ 1ರಿಂದ1.5 ಕೋಟಿ ಡೋಸ್ ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯವನ್ನು ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್ ಹೊಂದಿದೆ.

ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್​ನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗವೂ ಸಹ ಭಾರತ್ ಬಯೋಟೆಕ್​ನ ಜತೆ ನಿಕಟ ಸಂಪರ್ಕದಲ್ಲಿದೆ. ಭಾರತ್ ಬಯೋಟೆಕ್​ನಿಂದ ಲಸಿಕೆ ಉತ್ಪಾದನೆಯ ಫಾರ್ಮುಲಾ ಹಂಚಿಕೊಳ್ಳುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು ಪ್ರತಿ ತಿಂಗಳೂ 2 ಕೋಟಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆಗೆ ಗುಜರಾತ್​ನ ಈ ಸಂಸ್ಥೆ ಸಜ್ಜಾಗಿದೆ.

ಇದನ್ನೂ ಓದಿ: Union Health Secretary PC: ಕಳೆದ 12 ದಿನಗಳಿಂದ ದೇಶದಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ: ಲವ್ ಅಗರ್ವಾಲ್ 

ಮಕ್ಕಳಲ್ಲಿ ಕೊರೊನಾ ಸೋಂಕು: ಲಕ್ಷಣಗಳೇನು? ಯಾವ ಹಂತದಲ್ಲಿ ಎಂಥಾ ಚಿಕಿತ್ಸೆ?-ಸ್ಪಷ್ಟವಾಗಿ ವಿವರಿಸಿದ ಆರೋಗ್ಯ ಇಲಾಖೆ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ