AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಬಯೋಟೆಕ್ ಮಾತ್ರವಲ್ಲದೆ ಇನ್ನೂ 4 ಕಡೆ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ

CoVaxin: ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ  4  ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ.

ಭಾರತ್ ಬಯೋಟೆಕ್ ಮಾತ್ರವಲ್ಲದೆ ಇನ್ನೂ 4 ಕಡೆ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ
ಪ್ರಾತಿನಿಧಿಕ ಚಿತ್ರ
guruganesh bhat
|

Updated on: May 15, 2021 | 5:08 PM

Share

ದೇಶದಲ್ಲಿ ಕೊವಿಡ್ ಲಸಿಕೆ ವಿತರಣೆ ಅಭಿಯಾನವನ್ನು ತೀವ್ರಗೊಳಿಸಲು ಸರ್ಕಾರ ಹವಣಿಸುತ್ತಿದೆ. ಸದ್ಯ ಕೊವಿಡ್ ಲಸಿಕೆ ಉತ್ಪಾದಿಸುತ್ತಿರುವ ಭಾರತ್ ಬಯೋಟೆಕ್​ನ ಜತೆ ದೇಶದ 4 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳು ಕೊವಿಡ್ ಲಸಿಕೆಯ ಉತ್ಪಾದನೆ ಹೆಚ್ಚಿಸಲು ಅನವರತ ತೊಡಗಿಕೊಂಡಿವೆ. ಭಾರತ್ ಬಯೋಟೆಕ್ ಒಂದರಲ್ಲಷ್ಟೇ ಅಲ್ಲದೇ ಈ  4  ಸಂಸ್ಥೆಗಳಲ್ಲಿ ಕೊವಿಡ್ ಲಸಿಕೆ ಉತ್ಪಾದಿಸುವ ಮೂಲಕ ದೇಶದಲ್ಲಿನ ಲಸಿಕೆ ಕೊರತೆ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಭಾರತ ಸರ್ಕಾರ ಕ್ರಮ ಕೈಗೊಂಡಿದೆ.

ಮುಂಬೈಯ ಹಾಫ್​ಕಿನ್ ಫಾರ್ಮಾಸೂಟಿಕಲ್ಸ್ ಕಾರ್ಪೊರೇಶನ್ ಲಿಮಿಟೆಡ್​ ಮಹಾರಾಷ್ಟ್ರ ಸರ್ಕಾರದ ಅಡಿಯ ಪ್ರಮುಖ ಸಾರ್ವಜನಿಕ ಸಂಸ್ಥೆ. ಕೊವಿಡ್ ಲಸಿಕೆ ಉತ್ಪಾದನೆಗೆ ಸರ್ವ ಸನ್ನದ್ಧವಾಗಿರುವಂತೆ ಸೂಚಿಸಿರುವ ಭಾರತ ಸರ್ಕಾರ, ಈ ಹಾಪ್​ಕಿನ್ ಫಾರ್ಮಾಸೂಟಿಕಲ್ಸ್​ಗೆ 65 ಕೋಟಿ ಧನ ಸಹಾಯ ಒದಗಿಸಿದೆ. ಸದ್ಯ ಲಸಿಕೆ ಉತ್ಪಾದನೆಯ ಕುರಿತು ಕೆಲವು ಪ್ರಕ್ರಿಯೆಯಗಳು ನಡೆಯುತ್ತಿದ್ದು, ಪ್ರತಿ ತಿಂಗಳು 20 ಕೋಟಿ ಕೊವಿಡ್ ಲಸಿಕೆ ಉತ್ಪಾದನೆ ಮಾಡಲು ಹಾಪ್​ಕಿನ್ ಫಾರ್ಮಾಸೂಟಿಕಲ್ಸ್ ಸಂಸ್ಥೆ ಶಕ್ತವಾಗಿದೆ.

ಹೈದರಾಬಾದ್​ನ ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್​ಗೆ ಸರ್ಕಾರ 60 ಕೋಟಿ ಸಹಾಯ ಧನ ನೀಡಿದ್ದು, ಕೊವಿಡ್ ಲಸಿಕೆ ಉತ್ಪಾದನೆಗೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ನಿರ್ಮಿಸಲು ತಿಳಿಸಿದೆ. ಇವೆರೆಡು ಸಂಸ್ಥೆಗಳ ಜತೆಗೆ ಬುಲಶಂದರ್​ನಲ್ಲಿರುವ ಭಾರತ್ ಇಮ್ಯನೊಲಾಜಿಕಲ್ ಆ್ಯಂಡ್ ಬಯೋಲಾಜಿಕಲ್ ಲಿಮಿಟೆಡ್​ಗೆ (BIBCOL) 30 ಕೋಟಿ ಸಹಾಯ ಧನ ನೀಡಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳಿಗೆ 1ರಿಂದ1.5 ಕೋಟಿ ಡೋಸ್ ಲಸಿಕೆ ಉತ್ಪಾದನೆ ಮಾಡುವ ಸಾಮರ್ಥ್ಯವನ್ನು ಇಂಡಿಯನ್ ಇಮ್ಯುನೋಲಾಜಿಕಲ್ ಲಿಮಿಟೆಡ್ ಹೊಂದಿದೆ.

ಗುಜರಾತ್ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್​ನ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗವೂ ಸಹ ಭಾರತ್ ಬಯೋಟೆಕ್​ನ ಜತೆ ನಿಕಟ ಸಂಪರ್ಕದಲ್ಲಿದೆ. ಭಾರತ್ ಬಯೋಟೆಕ್​ನಿಂದ ಲಸಿಕೆ ಉತ್ಪಾದನೆಯ ಫಾರ್ಮುಲಾ ಹಂಚಿಕೊಳ್ಳುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು ಪ್ರತಿ ತಿಂಗಳೂ 2 ಕೋಟಿ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆಗೆ ಗುಜರಾತ್​ನ ಈ ಸಂಸ್ಥೆ ಸಜ್ಜಾಗಿದೆ.

ಇದನ್ನೂ ಓದಿ: Union Health Secretary PC: ಕಳೆದ 12 ದಿನಗಳಿಂದ ದೇಶದಲ್ಲಿ ಕೊವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ: ಲವ್ ಅಗರ್ವಾಲ್ 

ಮಕ್ಕಳಲ್ಲಿ ಕೊರೊನಾ ಸೋಂಕು: ಲಕ್ಷಣಗಳೇನು? ಯಾವ ಹಂತದಲ್ಲಿ ಎಂಥಾ ಚಿಕಿತ್ಸೆ?-ಸ್ಪಷ್ಟವಾಗಿ ವಿವರಿಸಿದ ಆರೋಗ್ಯ ಇಲಾಖೆ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ