AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲ್ಯಾಕ್​ಫಂಗಸ್ ರೋಗಕ್ಕೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲು ಸೋನಿಯಾ ಗಾಂಧಿ ಸಲಹೆ; ಪ್ರಧಾನಿ ಮೋದಿಗೆ ಪತ್ರ

ಮ್ಯೂಕೋರ್ಮೈಕೋಸಿಸ್ ಕಾಯಿಲೆಯನ್ನು ಎಪಿಡೆಮಿಕ್​ ಕಾಯ್ದೆಯಡಿ ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಹೀಗಿದ್ದಮೇಲೆ ಈ ಕಾಯಿಲೆಯ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ಉತ್ಪಾದನೆ, ಪೂರೈಕೆಗಳೆಲ್ಲ ಸಾಕಷ್ಟು ಪ್ರಮಾಣದಲ್ಲಿ ಇರಬೇಕು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಬ್ಲ್ಯಾಕ್​ಫಂಗಸ್ ರೋಗಕ್ಕೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲು ಸೋನಿಯಾ ಗಾಂಧಿ ಸಲಹೆ; ಪ್ರಧಾನಿ ಮೋದಿಗೆ ಪತ್ರ
ಸೋನಿಯಾ ಗಾಂಧಿ
Lakshmi Hegde
|

Updated on: May 22, 2021 | 7:29 PM

Share

ದೆಹಲಿ: ಮ್ಯೂಕೋರ್ಮೈಕೋಸಿಸ್ (ಬ್ಲ್ಯಾಕ್​ಫಂಗಸ್​ ಅಥವಾ ಕಪ್ಪುಶಿಲೀಂದ್ರ)ನ್ನು ಅಂಟುರೋಗ (ಸಾಂಕ್ರಾಮಿಕ)ವೆಂದು ಘೋಷಿಸುವಂತೆ ಕೇಂದ್ರಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್​ ಹಾಗೂ ಮತ್ತಿತರ ಆರೋಗ್ಯ ವಿಮಾ ಯೋಜನೆಯಡಿ ಈ ರೋಗಕ್ಕೆ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮ್ಯೂಕೋರ್ಮೈಕೋಸಿಸ್ ಕಾಯಿಲೆಯನ್ನು ಎಪಿಡೆಮಿಕ್​ ಕಾಯ್ದೆಯಡಿ ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಹೀಗಿದ್ದಮೇಲೆ ಈ ಕಾಯಿಲೆಯ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ಉತ್ಪಾದನೆ, ಪೂರೈಕೆಗಳೆಲ್ಲ ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಹಾಗೇ, ಅಗತ್ಯ ಇರುವ ರೋಗಿಗಳಿಗೆ ಚಿಕಿತ್ಸೆ, ಆರೈಕೆಯನ್ನು ಉಚಿತವಾಗಿ ನೀಡಬೇಕು ಎಂದು ಸೋನಿಯಾ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ. ಮ್ಯೂಕೋರ್ಮೈಕೋಸಿಸ್ ಕಾಯಿಲೆ ಚಿಕಿತ್ಸೆಗೆ ಲಿಪೊಸಾರ್ನಲ್ ಆಂಫೊಟೆರಿಸಿನ್-ಇ 1 ಔಷಧ ಅತ್ಯಗತ್ಯವಾಗಿದೆ. ಆದರೆ ಮಾರುಕಟ್ಟೆಯಲ್ಲಿ ಈ ಔಷಧಿಯ ತೀವ್ರ ಕೊರತೆ ಇರುವುದಾಗಿ ವರದಿಯಾಗಿದೆ. ಅಷ್ಟೇ ಅಲ್ಲ, ಈ ರೋಗವನ್ನು ಇನ್ನೂ ಆಯುಷ್ಮಾನ್​ ಭಾರತ್ ಸೇರಿ ಯಾವುದೇ ರೀತಿಯ ಆರೋಗ್ಯ ವಿಮೆ ಯೋಜನೆಯಡಿ ಸೇರಿಸಲಾಗಿಲ್ಲ. ದೇಶದಲ್ಲಿ ದಿನೇದಿನೆ ಬ್ಲ್ಯಾಕ್​ ಫಂಗಸ್​​ನಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಅನುಕೂಲವಾಗುವಂತೆ ಕೂಡಲೇ ಯೋಜನೆ ರೂಪಿಸಿ ಎಂದು ಮನವಿ ಮಾಡುತ್ತೇನೆ ಎಂದೂ ಬರೆದಿದ್ದಾರೆ.

ಭಾರತದಲ್ಲಿ ಕೊರೊನಾದಿಂದ ಗುಣಮುಖರಾದವರಲ್ಲಿ ಕಪ್ಪುಶಿಲೀಂದ್ರದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರೂ ಎಚ್ಚರಿಕೆ ನೀಡಿದ್ದಾರೆ. ಈ ಬ್ಲ್ಯಾಕ್​ ಫಂಗಸ್​ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಬೇಕು. ಹೊಸ ಸವಾಲಿನ ವಿರುದ್ಧ ಹೋರಾಡಲು ಸಿದ್ಧರಾಗಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ದಯವಿಟ್ಟು ಜೀವಂತ ಕೋಳಿಗಳಿಗೆ ಮುತ್ತು ಕೊಡಬೇಡಿ: ಅಮೆರಿಕ ಆರೋಗ್ಯ ಸಂಸ್ಥೆ

ಶ್ವೇತ ಭವನದಲ್ಲಿ ಬೆಚ್ಚನೆಯ ಅಪ್ಪುಗೆಗಳು, ಹೊಸ ವೈಬ್ಸ್ ಶುರು​! ಇದಕ್ಕೆ ಕಾರಣವೇನು? ಕೊರೊನಾ ಕಾಟ ಮುಗಿಯಿತಾ?

Cover Mucormycosis in Ayushman Bharat urged by Sonia Gandhi in letter which is write to PM Modi

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ