AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲ್ಯಾಕ್​ಫಂಗಸ್ ರೋಗಕ್ಕೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲು ಸೋನಿಯಾ ಗಾಂಧಿ ಸಲಹೆ; ಪ್ರಧಾನಿ ಮೋದಿಗೆ ಪತ್ರ

ಮ್ಯೂಕೋರ್ಮೈಕೋಸಿಸ್ ಕಾಯಿಲೆಯನ್ನು ಎಪಿಡೆಮಿಕ್​ ಕಾಯ್ದೆಯಡಿ ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಹೀಗಿದ್ದಮೇಲೆ ಈ ಕಾಯಿಲೆಯ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ಉತ್ಪಾದನೆ, ಪೂರೈಕೆಗಳೆಲ್ಲ ಸಾಕಷ್ಟು ಪ್ರಮಾಣದಲ್ಲಿ ಇರಬೇಕು ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

ಬ್ಲ್ಯಾಕ್​ಫಂಗಸ್ ರೋಗಕ್ಕೆ ಆಯುಷ್ಮಾನ್ ಭಾರತ್ ಯೋಜನೆಯಡಿ ಚಿಕಿತ್ಸೆ ನೀಡಲು ಸೋನಿಯಾ ಗಾಂಧಿ ಸಲಹೆ; ಪ್ರಧಾನಿ ಮೋದಿಗೆ ಪತ್ರ
ಸೋನಿಯಾ ಗಾಂಧಿ
Lakshmi Hegde
|

Updated on: May 22, 2021 | 7:29 PM

Share

ದೆಹಲಿ: ಮ್ಯೂಕೋರ್ಮೈಕೋಸಿಸ್ (ಬ್ಲ್ಯಾಕ್​ಫಂಗಸ್​ ಅಥವಾ ಕಪ್ಪುಶಿಲೀಂದ್ರ)ನ್ನು ಅಂಟುರೋಗ (ಸಾಂಕ್ರಾಮಿಕ)ವೆಂದು ಘೋಷಿಸುವಂತೆ ಕೇಂದ್ರಸರ್ಕಾರ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್​ ಹಾಗೂ ಮತ್ತಿತರ ಆರೋಗ್ಯ ವಿಮಾ ಯೋಜನೆಯಡಿ ಈ ರೋಗಕ್ಕೆ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮ್ಯೂಕೋರ್ಮೈಕೋಸಿಸ್ ಕಾಯಿಲೆಯನ್ನು ಎಪಿಡೆಮಿಕ್​ ಕಾಯ್ದೆಯಡಿ ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಹೀಗಿದ್ದಮೇಲೆ ಈ ಕಾಯಿಲೆಯ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳ ಉತ್ಪಾದನೆ, ಪೂರೈಕೆಗಳೆಲ್ಲ ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಹಾಗೇ, ಅಗತ್ಯ ಇರುವ ರೋಗಿಗಳಿಗೆ ಚಿಕಿತ್ಸೆ, ಆರೈಕೆಯನ್ನು ಉಚಿತವಾಗಿ ನೀಡಬೇಕು ಎಂದು ಸೋನಿಯಾ ಗಾಂಧಿ ಪತ್ರದಲ್ಲಿ ಹೇಳಿದ್ದಾರೆ. ಮ್ಯೂಕೋರ್ಮೈಕೋಸಿಸ್ ಕಾಯಿಲೆ ಚಿಕಿತ್ಸೆಗೆ ಲಿಪೊಸಾರ್ನಲ್ ಆಂಫೊಟೆರಿಸಿನ್-ಇ 1 ಔಷಧ ಅತ್ಯಗತ್ಯವಾಗಿದೆ. ಆದರೆ ಮಾರುಕಟ್ಟೆಯಲ್ಲಿ ಈ ಔಷಧಿಯ ತೀವ್ರ ಕೊರತೆ ಇರುವುದಾಗಿ ವರದಿಯಾಗಿದೆ. ಅಷ್ಟೇ ಅಲ್ಲ, ಈ ರೋಗವನ್ನು ಇನ್ನೂ ಆಯುಷ್ಮಾನ್​ ಭಾರತ್ ಸೇರಿ ಯಾವುದೇ ರೀತಿಯ ಆರೋಗ್ಯ ವಿಮೆ ಯೋಜನೆಯಡಿ ಸೇರಿಸಲಾಗಿಲ್ಲ. ದೇಶದಲ್ಲಿ ದಿನೇದಿನೆ ಬ್ಲ್ಯಾಕ್​ ಫಂಗಸ್​​ನಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅವರಿಗೆ ಅನುಕೂಲವಾಗುವಂತೆ ಕೂಡಲೇ ಯೋಜನೆ ರೂಪಿಸಿ ಎಂದು ಮನವಿ ಮಾಡುತ್ತೇನೆ ಎಂದೂ ಬರೆದಿದ್ದಾರೆ.

ಭಾರತದಲ್ಲಿ ಕೊರೊನಾದಿಂದ ಗುಣಮುಖರಾದವರಲ್ಲಿ ಕಪ್ಪುಶಿಲೀಂದ್ರದ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರೂ ಎಚ್ಚರಿಕೆ ನೀಡಿದ್ದಾರೆ. ಈ ಬ್ಲ್ಯಾಕ್​ ಫಂಗಸ್​ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸಬೇಕು. ಹೊಸ ಸವಾಲಿನ ವಿರುದ್ಧ ಹೋರಾಡಲು ಸಿದ್ಧರಾಗಬೇಕು ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ದಯವಿಟ್ಟು ಜೀವಂತ ಕೋಳಿಗಳಿಗೆ ಮುತ್ತು ಕೊಡಬೇಡಿ: ಅಮೆರಿಕ ಆರೋಗ್ಯ ಸಂಸ್ಥೆ

ಶ್ವೇತ ಭವನದಲ್ಲಿ ಬೆಚ್ಚನೆಯ ಅಪ್ಪುಗೆಗಳು, ಹೊಸ ವೈಬ್ಸ್ ಶುರು​! ಇದಕ್ಕೆ ಕಾರಣವೇನು? ಕೊರೊನಾ ಕಾಟ ಮುಗಿಯಿತಾ?

Cover Mucormycosis in Ayushman Bharat urged by Sonia Gandhi in letter which is write to PM Modi

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ