AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಬ್ ಪಂತ್ ಅಪಘಾತ, ಕ್ರೈಂ ಸುದ್ದಿಗಳನ್ನು ಅಮಾನವೀಯವಾಗಿ ಪ್ರಸಾರ ಮಾಡಬೇಡಿ; ಟಿವಿ ಚಾನೆಲ್​​ಗಳಿಗೆ ಸರ್ಕಾರ ಖಡಕ್ ಸೂಚನೆ

ವಾರ್ತಾ ಮತ್ತು ಪ್ರಸಾರ ಸಚಿವಾಲಯ ಟಿವಿ ಚಾನೆಲ್‌ಗಳಿಗೆ ಕಠಿಣ ಸಂದೇಶ ರವಾನಿಸಿದ್ದು, ಕೇಬಲ್ ಟೆಲಿವಿಷನ್ ನೆಟ್‌ವರ್ಕ್ (ನಿಯಂತ್ರಣ) ಕಾಯ್ದೆ, 1995ರ ಅಡಿಯಲ್ಲಿ ರೂಪಿಸಲಾದ ಕಾರ್ಯಕ್ರಮ ಸಂಹಿತೆಗೆ ಬದ್ಧವಾಗಿರುವಂತೆ ಸೂಚಿಸಿದೆ.

ರಿಷಬ್ ಪಂತ್ ಅಪಘಾತ, ಕ್ರೈಂ ಸುದ್ದಿಗಳನ್ನು ಅಮಾನವೀಯವಾಗಿ ಪ್ರಸಾರ ಮಾಡಬೇಡಿ; ಟಿವಿ ಚಾನೆಲ್​​ಗಳಿಗೆ ಸರ್ಕಾರ ಖಡಕ್ ಸೂಚನೆ
ರಿಷಬ್ ಪಂತ್ ಅಪಘಾತದ ವೇಳೆ ಆಸ್ಪತ್ರೆಯ ದೃಶ್ಯImage Credit source: ANI
TV9 Web
| Edited By: |

Updated on:Jan 09, 2023 | 4:38 PM

Share

ನವದೆಹಲಿ: ಕ್ರಿಕೆಟಿಗ ರಿಷಬ್ ಪಂತ್ (Rishabh Pant) ಅವರ ಕಾರು ಇತ್ತೀಚೆಗೆ ಡಿವೈಡರ್​​ಗೆ ಡಿಕ್ಕಿ ಹೊಡೆದು, ಸುಟ್ಟು ಭಸ್ಮವಾಗಿತ್ತು. ಅಚ್ಚರಿಯ ರೀತಿಯಲ್ಲಿ ರಿಷಬ್ ಪಂತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಅಪಘಾತ (Accident) ಮತ್ತು ಇತರ ಕೆಲವು ಅಪರಾಧ ಪ್ರಕರಣಗಳ ಬಗ್ಗೆ ಟಿವಿ ಚಾನೆಲ್​ಗಳು ಬಹಳ ಅಸಹ್ಯಕರ ಮತ್ತು ಅಮಾನವೀಯವಾಗಿ ಸುದ್ದಿ ಬಿತ್ತರಿಸುತ್ತಿವೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ (Ministry of Information and Broadcasting) ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ, ಈ ರೀತಿಯ ಅಪರಾಧ ಪ್ರಕರಣಗಳ ಸುದ್ದಿ ಪ್ರಸಾರ ಮಾಡುವಾಗ ಸಂಬಂಧಿತ ಕಾನೂನಿನಡಿಯಲ್ಲಿ ನಿಗದಿಪಡಿಸಿದ ಕಾರ್ಯಕ್ರಮದ ಕೋಡ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚನೆ ನೀಡಿದೆ. ಈ ರೀತಿ ಅಮಾನವೀಯವಾಗಿ ಪ್ರಸಾರ ಮಾಡಲಾದ 12 ಕಾರ್ಯಕ್ರಮಗಳನ್ನು ಸಚಿವಾಲಯ ಪಟ್ಟಿ ಮಾಡಿದೆ. ಅದರಲ್ಲಿ ರಿಷಬ್ ಪಂತ್ ಅಪಘಾತದ ಸುದ್ದಿಯೂ ಸೇರಿದೆ.

ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಇಂದು (ಸೋಮವಾರ) ಟಿವಿ ಚಾನೆಲ್‌ಗಳಿಗೆ ಕಠಿಣ ಸಂದೇಶವನ್ನು ರವಾನಿಸಿದ್ದು, ಕೇಬಲ್ ಟೆಲಿವಿಷನ್ ನೆಟ್‌ವರ್ಕ್ (ನಿಯಂತ್ರಣ) ಕಾಯ್ದೆ, 1995ರ ಅಡಿಯಲ್ಲಿ ರೂಪಿಸಲಾದ ಕಾರ್ಯಕ್ರಮ ಸಂಹಿತೆಗೆ ಬದ್ಧವಾಗಿರುವಂತೆ ಸೂಚಿಸಿದೆ. ಇತ್ತೀಚೆಗೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಭಾರತೀಯ ಕ್ರಿಕೆಟಿಗ ರಿಷಬ್ ಪಂತ್ ಕುರಿತ ಸುದ್ದಿ, ಕೆಲವು ಅಪಘಾತಗಳು, ಸಾವುಗಳು ಮತ್ತು ಹಿಂಸಾಚಾರದ ಘಟನೆಗಳನ್ನು ಟಿವಿ ಚಾನೆಲ್​ಗಳು ಅತ್ಯಂತ ವೈಭವೀಕರಿಸಿ ಪ್ರಸಾರ ಮಾಡಿವೆ. ಸುದ್ದಿ ಪ್ರಸಾರ ಮಾಡುವವರಿಗೆ ಜವಾಬ್ದಾರಿ ಮತ್ತು ಶಿಸ್ತಿನ ನಿರ್ದಿಷ್ಟ ಪ್ರಜ್ಞೆ ಇರಬೇಕು. ಹಿಂಸಾತ್ಮಕ ಘಟನೆಗಳನ್ನು ವರದಿ ಮಾಡುವಾಗ ಚಿತ್ರಗಳನ್ನು ಮಸುಕುಗೊಳಿಸುವ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಬೇಕು. ಹಿಂಸಾತ್ಮಕ ಘಟನೆಯನ್ನು ವೈಭವೀಕರಿಸಿ ಪ್ರಸಾರ ಮಾಡುವುದು ಅಸಹ್ಯಕರ, ಹೃದಯ ವಿದ್ರಾವಕ, ದುಃಖಕರ, ಅವಮಾನಕರ, ಸಂವೇದನಾಶೀಲವಾಗಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹೇಳಿದೆ.

ಇದನ್ನೂ ಓದಿ: Rishabh Pant Health: ಚೇತರಿಕೆಯ ನಡುವೆಯೂ ರಿಷಬ್ ಪಂತ್ ಡೆಹ್ರಾಡೂನ್​ನಿಂದ ಮುಂಬೈಗೆ ಶಿಫ್ಟ್..!

ಇಂತಹ ವರದಿಗಳು ಮಕ್ಕಳ ಮೇಲೆ ಪ್ರತಿಕೂಲ ಮಾನಸಿಕ ಪರಿಣಾಮವನ್ನು ಬೀರುತ್ತವೆ. ಹಿಂಸಾತ್ಮಕ ವಿಡಿಯೋಗಳನ್ನು ಮಾಡ್ಯುಲೇಟ್ ಅಥವಾ ಎಡಿಟ್ ಮಾಡುವ ಪ್ರಯತ್ನವನ್ನು ಮಾಡದೆಯೇ ಸಾಮಾಜಿಕ ಮಾಧ್ಯಮದಿಂದ ವೀಡಿಯೊ ಕ್ಲಿಪ್‌ಗಳನ್ನು ತೆಗೆದುಕೊಂಡು ಯಥಾಪ್ರಕಾರವಾಗಿ ಪ್ರಸಾರ ಮಾಡಲಾಗುತ್ತಿದೆ. ಟಿವಿ ಚಾನೆಲ್‌ಗಳ ಇಂತಹ ಪ್ರಸಾರವು ಗಂಭೀರವಾದ ವಿಷಯವಾಗಿದೆ. ಪ್ರೋಗ್ರಾಂ ಕೋಡ್‌ಗೆ ಅನುಗುಣವಾಗಿ ಸಾವು ಸೇರಿದಂತೆ ಅಪರಾಧ, ಅಪಘಾತಗಳು ಮತ್ತು ಹಿಂಸಾಚಾರದ ಘಟನೆಗಳನ್ನು ವರದಿ ಮಾಡುವ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Mon, 9 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ