Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ ಮಾರ್ಚ್​ ತಿಂಗಳಷ್ಟೊತ್ತಿಗೆ ಕಡಿಮೆಯಾಗಲಿದೆ: ಐಸಿಎಂಆರ್​ ಆರೋಗ್ಯ ತಜ್ಞರ ವರದಿ

ದೇಶಾದ್ಯಂತ  ಕೊರೊನಾ ವೈರಸ್​ ಮೂರನೇ ಅಲೆ ತಗ್ಗಲಿದೆ. ಅದರಲ್ಲೂ ದೆಹಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಫೆಬ್ರವರಿ ಅಂತ್ಯದ ಹೊತ್ತಿಗೆ ಸೋಂಕು ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ ಮಾರ್ಚ್​ ತಿಂಗಳಷ್ಟೊತ್ತಿಗೆ ಕಡಿಮೆಯಾಗಲಿದೆ: ಐಸಿಎಂಆರ್​ ಆರೋಗ್ಯ ತಜ್ಞರ ವರದಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Feb 05, 2022 | 6:19 PM

ದೆಹಲಿ: ದೇಶದಲ್ಲೀಗ ಒಮಿಕ್ರಾನ್​ ಚಾಲಿತ ಕೊರೊನಾ ಸೋಂಕಿನ ಮೂರನೇ ಅಲೆ (Corona Virus 3rd Wave) ಎದ್ದಿದೆ. ಒಂದು ದಿನದಲ್ಲಿ ಮೂರು ಲಕ್ಷದವರೆಗಿನ ಪ್ರಕರಣಗಳು ಪತ್ತೆಯಾಗಿ ಇದೀಗ ಮತ್ತೆ ಇಳಿಮುಖಗೊಂಡಿದೆ. ದಿನಕ್ಕೆ ಒಂದು ಲಕ್ಷದಷ್ಟು ಸೋಂಕಿತರು ದಾಖಲಾಗುತ್ತಿದ್ದಾರೆ. ಆದರೆ ಈ ಮೂರನೇ ಅಲೆ ಇದೊಂದು ತಿಂಗಳು ಕಾಡಲಿದೆ. ಭಾರತದಲ್ಲಿ ಮಾರ್ಚ್​ ತಿಂಗಳ ಹೊತ್ತಿಗೆ ಕೊವಿಡ್​ 19 ಮೂರನೇ ಅಲೆ ಪ್ರಮಾಣ ತುಸು ತಗ್ಗಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೂಡ ಕೊರೊನಾ ಸಕ್ರಿಯ ಪ್ರಕರಣಗಳು ಕಡಿಮೆ ಆಗಿವೆ.   

ಐಸಿಎಂಆರ್​ನ ಡಾ. ಸಮೀರನ್​ ಪಾಂಡಾ ಪ್ರತಿಕ್ರಿಯೆ ನೀಡಿ, ದೇಶಾದ್ಯಂತ  ಕೊರೊನಾ ವೈರಸ್​ ಮೂರನೇ ಅಲೆ ತಗ್ಗಲಿದೆ. ಅದರಲ್ಲೂ ದೆಹಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಫೆಬ್ರವರಿ ಅಂತ್ಯದ ಹೊತ್ತಿಗೆ ಸೋಂಕು ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.  ಭಾರತದಲ್ಲಿ ಈಗಾಗಲೇ ದಿನದಲ್ಲಿ ದಾಖಲಾಗುವ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಇಂದು 1,27,952 ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ರೇಟ್ ಶೇ.​ 9.27ರಿಂದ ಶೇ.7.98ಕ್ಕೆ ಇಳಿಕೆಯಾಗಿದೆ. ಹಾಗೇ, ದೇಶದಲ್ಲೀಗ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648ಕ್ಕೆ ಇಳಿದಿದೆ.

ದೇಶದಲ್ಲಿ ದಿನದಲ್ಲಿ ಪತ್ತೆಯಾಗುವ ಕೊರೊನಾ ಪ್ರಕರಣದಲ್ಲಿ ಇಳಿಮುಖವಾಗಿದ್ದರೂ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಚೇತರಿಕೆ ರೇಟ್​ 95.64ರಷ್ಟಿದ್ದು, 24 ಗಂಟೆಯಲ್ಲಿ 2,30,814 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಈ ಮಧ್ಯೆ ವಯಸ್ಕರಿಗೆ  168.98 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, 5.34 ಕೋಟಿ ಮಕ್ಕಳಿಗೆ ಕೊವಿಡ್ 19 ಮೊದಲ ಡೋಸ್ ಲಸಿಕೆ ನೀಡಿಕೆಯಾಗಿದೆ.

ಇದನ್ನೂ ಓದಿ: ಶಿಕ್ಷಣದಲ್ಲಿ ಹಿಜಾಬ್​ ಅಷ್ಟೊಂದು ಮುಖ್ಯವಾಗಿದ್ದರೆ, ರಾಹುಲ್​ ಗಾಂಧಿಯೇ ಅದನ್ನು ಕಡ್ಡಾಯಗೊಳಿಸಬಹುದಿತ್ತಲ್ಲ?!-ಬಿಜೆಪಿ ತಿರುಗೇಟು

Published On - 9:46 am, Sat, 5 February 22

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ