AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ ಮಾರ್ಚ್​ ತಿಂಗಳಷ್ಟೊತ್ತಿಗೆ ಕಡಿಮೆಯಾಗಲಿದೆ: ಐಸಿಎಂಆರ್​ ಆರೋಗ್ಯ ತಜ್ಞರ ವರದಿ

ದೇಶಾದ್ಯಂತ  ಕೊರೊನಾ ವೈರಸ್​ ಮೂರನೇ ಅಲೆ ತಗ್ಗಲಿದೆ. ಅದರಲ್ಲೂ ದೆಹಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಫೆಬ್ರವರಿ ಅಂತ್ಯದ ಹೊತ್ತಿಗೆ ಸೋಂಕು ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭಾರತದಲ್ಲಿ ಕೊವಿಡ್ 19 ಮೂರನೇ ಅಲೆ ಮಾರ್ಚ್​ ತಿಂಗಳಷ್ಟೊತ್ತಿಗೆ ಕಡಿಮೆಯಾಗಲಿದೆ: ಐಸಿಎಂಆರ್​ ಆರೋಗ್ಯ ತಜ್ಞರ ವರದಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 05, 2022 | 6:19 PM

Share

ದೆಹಲಿ: ದೇಶದಲ್ಲೀಗ ಒಮಿಕ್ರಾನ್​ ಚಾಲಿತ ಕೊರೊನಾ ಸೋಂಕಿನ ಮೂರನೇ ಅಲೆ (Corona Virus 3rd Wave) ಎದ್ದಿದೆ. ಒಂದು ದಿನದಲ್ಲಿ ಮೂರು ಲಕ್ಷದವರೆಗಿನ ಪ್ರಕರಣಗಳು ಪತ್ತೆಯಾಗಿ ಇದೀಗ ಮತ್ತೆ ಇಳಿಮುಖಗೊಂಡಿದೆ. ದಿನಕ್ಕೆ ಒಂದು ಲಕ್ಷದಷ್ಟು ಸೋಂಕಿತರು ದಾಖಲಾಗುತ್ತಿದ್ದಾರೆ. ಆದರೆ ಈ ಮೂರನೇ ಅಲೆ ಇದೊಂದು ತಿಂಗಳು ಕಾಡಲಿದೆ. ಭಾರತದಲ್ಲಿ ಮಾರ್ಚ್​ ತಿಂಗಳ ಹೊತ್ತಿಗೆ ಕೊವಿಡ್​ 19 ಮೂರನೇ ಅಲೆ ಪ್ರಮಾಣ ತುಸು ತಗ್ಗಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕೂಡ ಕೊರೊನಾ ಸಕ್ರಿಯ ಪ್ರಕರಣಗಳು ಕಡಿಮೆ ಆಗಿವೆ.   

ಐಸಿಎಂಆರ್​ನ ಡಾ. ಸಮೀರನ್​ ಪಾಂಡಾ ಪ್ರತಿಕ್ರಿಯೆ ನೀಡಿ, ದೇಶಾದ್ಯಂತ  ಕೊರೊನಾ ವೈರಸ್​ ಮೂರನೇ ಅಲೆ ತಗ್ಗಲಿದೆ. ಅದರಲ್ಲೂ ದೆಹಲಿ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ಫೆಬ್ರವರಿ ಅಂತ್ಯದ ಹೊತ್ತಿಗೆ ಸೋಂಕು ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.  ಭಾರತದಲ್ಲಿ ಈಗಾಗಲೇ ದಿನದಲ್ಲಿ ದಾಖಲಾಗುವ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಇಂದು 1,27,952 ಪ್ರಕರಣಗಳು ದಾಖಲಾಗಿದ್ದು, ಪಾಸಿಟಿವಿಟಿ ರೇಟ್ ಶೇ.​ 9.27ರಿಂದ ಶೇ.7.98ಕ್ಕೆ ಇಳಿಕೆಯಾಗಿದೆ. ಹಾಗೇ, ದೇಶದಲ್ಲೀಗ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648ಕ್ಕೆ ಇಳಿದಿದೆ.

ದೇಶದಲ್ಲಿ ದಿನದಲ್ಲಿ ಪತ್ತೆಯಾಗುವ ಕೊರೊನಾ ಪ್ರಕರಣದಲ್ಲಿ ಇಳಿಮುಖವಾಗಿದ್ದರೂ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಚೇತರಿಕೆ ರೇಟ್​ 95.64ರಷ್ಟಿದ್ದು, 24 ಗಂಟೆಯಲ್ಲಿ 2,30,814 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾಗಿ ಆರೋಗ್ಯ ಇಲಾಖೆ ತಿಳಿಸಿದೆ. ಈ ಮಧ್ಯೆ ವಯಸ್ಕರಿಗೆ  168.98 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, 5.34 ಕೋಟಿ ಮಕ್ಕಳಿಗೆ ಕೊವಿಡ್ 19 ಮೊದಲ ಡೋಸ್ ಲಸಿಕೆ ನೀಡಿಕೆಯಾಗಿದೆ.

ಇದನ್ನೂ ಓದಿ: ಶಿಕ್ಷಣದಲ್ಲಿ ಹಿಜಾಬ್​ ಅಷ್ಟೊಂದು ಮುಖ್ಯವಾಗಿದ್ದರೆ, ರಾಹುಲ್​ ಗಾಂಧಿಯೇ ಅದನ್ನು ಕಡ್ಡಾಯಗೊಳಿಸಬಹುದಿತ್ತಲ್ಲ?!-ಬಿಜೆಪಿ ತಿರುಗೇಟು

Published On - 9:46 am, Sat, 5 February 22

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ