AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Updates: ‘ಕೊರೊನಾ ಮೂರನೇ ಅಲೆ ಈ ತಿಂಗಳಲ್ಲೇ ಶುರುವಾಗಲಿದೆ, ಅಕ್ಟೋಬರ್​ನಲ್ಲಿ ಉತ್ತುಂಗಕ್ಕೇರಲಿದೆ’

Covid 19 3rd Wave: ಹೆಚ್ಚುತ್ತಿರುವ ಕೊರೊನಾ ಪ್ರಸರಣ ಮೂರನೇ ಅಲೆಗೆ ಹಾದಿಯಾಗಿದೆ ಎಂದು ಹೈದರಾಬಾದ್​ನ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿಯ ಪ್ರೊಫೆಸರ್​ ಮಾಥುಕುಮಳ್ಳಿ ವಿದ್ಯಾಸಾಗರ್ ಮತ್ತು ಮನೀಂದ್ರಾ ಅಗರ್​ವಾಲ್​ ನೇತೃತ್ವದಲ್ಲಿ ನಡೆದ ಅಧ್ಯಯನ ವರದಿ ಹೇಳಿದೆ.

Covid 19 Updates: ‘ಕೊರೊನಾ ಮೂರನೇ ಅಲೆ ಈ ತಿಂಗಳಲ್ಲೇ ಶುರುವಾಗಲಿದೆ, ಅಕ್ಟೋಬರ್​ನಲ್ಲಿ ಉತ್ತುಂಗಕ್ಕೇರಲಿದೆ’
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Aug 02, 2021 | 11:46 AM

Share

ದೆಹಲಿ: ಕೊವಿಡ್​ 2ನೇ ಅಲೆ(Covid ಯಿಂದ ದೇಶ ಅದೆಷ್ಟು ಸಂಕಷ್ಟಕ್ಕೀಡಾಗಿತ್ತು ಎಂಬುದನ್ನು ನಾವೆಲ್ಲ ನೋಡಿದ್ದೇವೆ. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಇದು ಎರಡನೇ ಅಲೆಗೆ ಮುಗಿಯುವುದಿಲ್ಲ..ಮೂರನೇ ಅಲೆ ಹತ್ತಿರದಲ್ಲೇ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡುತ್ತಲೇ ಇದ್ದರು. ಇದೀಗ ಕೊವಿಡ್​ 19 ಮೂರನೇ ಅಲೆ ತುಂಬ ಹತ್ತಿರದಲ್ಲೇ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಅಂದರೆ ಕೊರೊನಾ ಮೂರನೇ ಅಲೆ ಆಗಸ್ಟ್​​ನಲ್ಲಿಯೇ ದೇಶವನ್ನು ಅಪ್ಪಳಿಸಲಿದೆ. ಅಕ್ಟೋಬರ್​ ಹೊತ್ತಿಗೆ ಉತ್ತುಂಗಕ್ಕೆ ಏರಲಿದೆ ಎಂದು ಹೇಳಲಾಗಿದೆ.

ಇತ್ತೀಚೆಗೆ ದೇಶದಲ್ಲಿ ಕೊರೊನಾ ಪ್ರಮಾಣ ತುಸು ತಗ್ಗಿತ್ತು. ಅಂದರೆ ಒಂದು ದಿನದಲ್ಲಿ ದಾಖಲಾಗುವ ಕೊರೊನಾ ವೈರಸ್​ ಪ್ರಮಾಣ ಕಡಿಮೆಯಾಗಿತ್ತು. ಆದರೀಗ ಮತ್ತೆ ಒಂದು ದಿನದಲ್ಲಿ 40 ಸಾವಿರಕ್ಕೂ ಅಧಿಕ ಕೊರೊನಾ ಕೇಸ್​ಗಳು ದಾಖಲಾಗುತ್ತಿವೆ. ಅದರಲ್ಲೂ ಕೇರಳದಲ್ಲಂತೂ ಮಿತಿಮೀರುತ್ತಿದೆ. ಈ ಹೊತ್ತಲ್ಲಿ ತಜ್ಞರು ನೀಡಿರುವ ಅಧ್ಯಯನ ವರದಿ ನಿಜಕ್ಕೂ ಆತಂಕ ಮೂಡಿಸುವಂತಿದೆ. ಅಕ್ಟೋಬರ್ ಹೊತ್ತಿಗೆ ಕೊರೊನಾ ವೈರಸ್ ಪ್ರಸರಣ ದೇಶದಲ್ಲಿ ಅತ್ಯಂತ ಉತ್ತುಂಗಕ್ಕೆ ಏರಲಿದೆ. ಆದ ಒಂದು ದಿನದಲ್ಲಿ 1 ಲಕ್ಷಕ್ಕೆ ಕಡಿಮೆ ಕೇಸ್​ ದಾಖಲಾದರೆ ಅದು ಉತ್ತಮ ಎಂದೇ ಪರಿಗಣಿಸಬೇಕು. ಯಾಕೆಂದರೆ ಒಂದು ದಿನದಲ್ಲಿ 1.50 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುವ ಕೆಟ್ಟ ಪರಿಸ್ಥಿತಿ ಬರಬಹುದು ಎಂದು ವರದಿಯಲ್ಲಿ ಹೇಳಲಾಗಿದೆ.

ಇದೀಗ ಹೆಚ್ಚುತ್ತಿರುವ ಕೊರೊನಾ ಪ್ರಸರಣ ಮೂರನೇ ಅಲೆಗೆ ಹಾದಿಯಾಗಿದೆ ಎಂದು ಹೈದರಾಬಾದ್​ನ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಟೆಕ್ನಾಲಜಿಯ ಪ್ರೊಫೆಸರ್​ ಮಾಥುಕುಮಳ್ಳಿ ವಿದ್ಯಾಸಾಗರ್ ಮತ್ತು ಮನೀಂದ್ರಾ ಅಗರ್​ವಾಲ್​ ನೇತೃತ್ವದಲ್ಲಿ ನಡೆದ ಅಧ್ಯಯನ ವರದಿ ಹೇಳಿದೆ. ಅದರಲ್ಲೂ ಅತಿಹೆಚ್ಚು ಕೊರೊನಾ ಕೇಸ್​ಗಳು ದಾಖಲಾಗುತ್ತಿರುವ ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳು ಕೊರೊನಾ ಮೂರನೇ ಅಲೆಯ ಸ್ಪಷ್ಟ ಚಿತ್ರಣವನ್ನು ನೀಡುತ್ತಿವೆ ಎಂದೂ ವಿದ್ಯಾಸಾಗರ್​ ಹೇಳಿದ್ದಾರೆ.

ಕೊರೊನಾ ಎರಡನೇ ಅಲೆ ದೇಶಕ್ಕೆ ನರಕವನ್ನೇ ತೋರಿಸಿದೆ. ಬೆಡ್​ಗಳ ಕೊರತೆ, ಆಕ್ಸಿಜನ್​ ಅಭಾವದಿಂದ ಅದೆಷ್ಟೋ ಮಂದಿಯ ಜೀವವೇ ಹೋಗಿದೆ. ಕೊರೊನಾ ಎರಡನೇ ಅಲೆ ದೇಶಕ್ಕೆ ಅತ್ಯಂತ ಹೆಚ್ಚು ಬಾಧಿಸಿದ್ದು ಮೇ ತಿಂಗಳಲ್ಲಿ. ಇದೀಗ ಆಗಸ್ಟ್​ನಲ್ಲಿಯೇ ಮೂರನೇ ಅಲೆ ಶುರುವಾಗುತ್ತದೆಂದು ಒತ್ತಿಒತ್ತಿ ಹೇಳಲಾಗುತ್ತಿದೆ. ಅಲ್ಲದೆ, ಕೊರೊನಾ ನಿಯಂತ್ರಣ ಕ್ರಮಗಳನ್ನು ಸೂಕ್ತವಾಗಿ ಅನುಸರಿಸದೆ ಇದ್ದರೆ, ಅಕ್ಟೋಬರ್​-ನವೆಂಬರ್ ವೇಳೆ ಸೋಂಕಿನ ಪ್ರಮಾಣ ಉಲ್ಬಣವಾಗುತ್ತದೆ ಎಂದೂ ತಜ್ಞರು ಹೇಳಿದ್ದಾರೆ. ಅದರಲ್ಲೂ ಕೇರಳ, ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಒಡಿಶಾ, ಅಸ್ಸಾಂ, ಮಿಜೋರಾಂ, ಮೇಘಾಲಯ, ಆಂಧ್ರಪ್ರದೇಶ, ಮಣಿಪುರಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಅತ್ಯಂತ ಹೆಚ್ಚಾಗಿದೆ. ದೇಶದಲ್ಲಿ ದಾಖಲಾಗುವ ಒಟ್ಟಾರೆ ಕೊರೊನಾ ಪ್ರಕರಣದಲ್ಲಿ ಬಹುಪಾಲು ಈ ರಾಜ್ಯಗಳದ್ದೇ ಆಗಿರುತ್ತದೆ.

ಇದನ್ನೂ ಓದಿ: ಬಿಜೆಪಿ ಭ್ರಷ್ಟ ಪಕ್ಷ, ಬಿಜೆಪಿಯದ್ದು ಭ್ರಷ್ಟ ಸರ್ಕಾರ: ಮಾಜಿ ಸಿಎಂ ಸಿದ್ದರಾಮಯ್ಯ

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್