AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾನುವಾರದಿಂದ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್: ಯಾವ ಲಸಿಕೆ ನೀಡಲಾಗುತ್ತದೆ? ಲಸಿಕೆ ಪಡೆಯಲು ಯಾರು ಅರ್ಹರು?

18 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ ನಂತರ ಒಂಬತ್ತು ತಿಂಗಳು ಅಥವಾ 39 ವಾರಗಳನ್ನು ಪೂರ್ಣಗೊಳಿಸಿದ ಎಲ್ಲರೂ ಮುನ್ನೆಚ್ಚರಿಕೆಯ ಮೂರನೇ ಡೋಸ್‌ಗೆ ಅರ್ಹರಾಗಿರುತ್ತಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಭಾನುವಾರದಿಂದ ಎಲ್ಲಾ ವಯಸ್ಕರಿಗೆ ಬೂಸ್ಟರ್ ಡೋಸ್: ಯಾವ ಲಸಿಕೆ ನೀಡಲಾಗುತ್ತದೆ? ಲಸಿಕೆ ಪಡೆಯಲು ಯಾರು ಅರ್ಹರು?
ಪ್ರಾತಿನಿಧಿಕ ಚಿತ್ರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Apr 08, 2022 | 7:52 PM

Share

ಏಪ್ರಿಲ್ 10 ರಿಂದ ಖಾಸಗಿ ಲಸಿಕೆ ಕೇಂದ್ರಗಳಲ್ಲಿ 18ಕ್ಕಿಂತ ಮೇಲ್ಪಟ್ಟ ಜನರಿಗೆ ಕೊವಿಡ್ -19 (Covid 19) ಲಸಿಕೆಯ ಮುನ್ನೆಚ್ಚರಿಕೆಯ ಮೂರನೇ ಡೋಸ್ (Booster Dose) ನೀಡುವುದಾಗಿ ಆರೋಗ್ಯ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ. ಕೊರೊನಾವೈರಸ್ ಲಸಿಕೆಯ (coronavirus vaccine) ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳುಗಳನ್ನು ಪೂರ್ಣಗೊಳಿಸಿದ ಎಲ್ಲಾ ವಯಸ್ಕರು ಭಾನುವಾರದಿಂದ ಅವರ ಮೂರನೇ ಡೋಸ್ ಅಥವಾ ಮುಂಜಾಗ್ರತಾ ಡೋಸ್‌ಗಾಗಿ ಖಾಸಗಿ ಲಸಿಕೆ ಕೇಂದ್ರಗಳಿಗೆ ಭೇಟಿ ನೀಡಬಹುದು. ಆರೋಗ್ಯ ಸಚಿವಾಲಯವು ಬಿಡುಗಡೆ ಮಾಡಿದ ಹೇಳಿಕೆ ಪ್ರಕಾರ ಕೊವಿಡ್ ಲಸಿಕೆಗಳ ಮುನ್ನೆಚ್ಚರಿಕೆ ಡೋಸ್ 18 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರಿಗೆ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಖಾಸಗಿ ಲಸಿಕೆ ಕೇಂದ್ರಗಳ ಮೂಲಕ 18ಕ್ಕಿಂತ  ಮೇಲ್ಪಟ್ಟ  ವಯಸ್ಸಿನ ಜನರಿಗೆ ಮುನ್ನೆಚ್ಚರಿಕೆ ಡೋಸ್ ನೀಡಿಕೆ ಏಪ್ರಿಲ್ 10 (ಭಾನುವಾರ), 2022 ರಿಂದ ಪ್ರಾರಂಭವಾಗುತ್ತದೆ. 18 ವರ್ಷಕ್ಕಿಂತ ಮೇಲ್ಪಟ್ಟ ಮತ್ತು ಎರಡನೇ ಡೋಸ್ ಪಡೆದು 9 ತಿಂಗಳುಗಳನ್ನು ಪೂರೈಸಿದ ಎಲ್ಲರೂ, ಮುನ್ನೆಚ್ಚರಿಕೆ ಡೋಸ್‌ ಪಡೆಯಬಹುದು. ಈ ಸೌಲಭ್ಯವು ಎಲ್ಲಾ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಲಭ್ಯವಿರುತ್ತದೆ.

ಬೂಸ್ಟರ್ ಡೋಸ್ ಪಡೆಯುವುದು ಯಾವಾಗ? 18 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ ನಂತರ ಒಂಬತ್ತು ತಿಂಗಳು ಅಥವಾ 39 ವಾರಗಳನ್ನು ಪೂರ್ಣಗೊಳಿಸಿದ ಎಲ್ಲರೂ ಮುನ್ನೆಚ್ಚರಿಕೆಯ ಮೂರನೇ ಡೋಸ್‌ಗೆ ಅರ್ಹರಾಗಿರುತ್ತಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಇದು ಉಚಿತವಾಗಿ ಲಭ್ಯವಿದೆಯೇ? ಇಲ್ಲ. 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಮುನ್ನೆಚ್ಚರಿಕೆಯ ಡೋಸ್ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಲಭ್ಯವಿರುತ್ತದೆ. ಆದ್ದರಿಂದ, ಡೋಸ್ ಅನ್ನು ಸ್ವೀಕರಿಸುವ ವ್ಯಕ್ತಿ ಲಸಿಕೆ ಪಡೆಯಲು ಹಣ ಪಾವತಿಸಬೇಕಾಗುತ್ತದೆ. ಖಾಸಗಿ ಕೇಂದ್ರಗಳು ಶೀಘ್ರದಲ್ಲೇ ಮುನ್ನೆಚ್ಚರಿಕೆಯ ಡೋಸ್‌ನ ಬೆಲೆಯನ್ನು ಪ್ರಕಟಿಸುತ್ತವೆ ಮತ್ತು ಅದು CoWin ಪ್ಲಾಟ್‌ಫಾರ್ಮ್‌ನಲ್ಲಿ ಕಾಣಬಹುದು.

ಮುನ್ನೆಚ್ಚರಿಕೆ ಡೋಸ್‌ಗಳಿಗೆ ಉಚಿತವಾಗಿ ಯಾರು ಅರ್ಹರು? ಆದ್ಯತೆಯ ಗುಂಪುಗಳು ಅಂದರೆ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕೆಲಸಗಾರರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಜನರು ಸರ್ಕಾರಿ ಲಸಿಕೆ ಕೇಂದ್ರಗಳಲ್ಲಿ ಮೂರನೇ ಡೋಸ್ ಅನ್ನು ಉಚಿತವಾಗಿ ಪಡೆಯಲು ಅರ್ಹರಾಗಿರುತ್ತಾರೆ.

ಮುನ್ನೆಚ್ಚರಿಕೆಯ ಡೋಸ್‌ಗಾಗಿ ಯಾವ ಲಸಿಕೆಯನ್ನು ನೀಡಲಾಗುತ್ತದೆ? ಬೂಸ್ಟರ್ ವೇಳಾಪಟ್ಟಿಗಳಿಗಾಗಿ ಭಾರತವು ಏಕರೂಪದ ಲಸಿಕೆಯನ್ನು ಅನುಸರಿಸುವುದನ್ನು ಮುಂದುವರಿಸುತ್ತದೆ. ಇದರರ್ಥ ಎರಡು ಡೋಸ್ ಕೊವಿಶೀಲ್ಡ್ ಅನ್ನು ಪಡೆದ ಫಲಾನುಭವಿಯು ಕೊವಿಶೀಲ್ಡ್ ಅನ್ನು ಮೂರನೇ ಡೋಸ್ ಆಗಿ ತೆಗೆದುಕೊಳ್ಳಬೇಕಾಗುತ್ತದೆ. ಅಂತೆಯೇ, ಎರಡು ಡೋಸ್ ಕೊವಾಕ್ಸಿನ್ ಪಡೆದವರು ಕೊವಾಕ್ಸಿನ್ ಅನ್ನು ಮುನ್ನೆಚ್ಚರಿಕೆಯ ಡೋಸ್ ಆಗಿ ತೆಗೆದುಕೊಳ್ಳಬೇಕಾಗುತ್ತದೆ.

ಮೂರನೇ ಡೋಸ್‌ಗೆ ಯಾವಾಗ ಅರ್ಹವಾಗಿದ್ದೇನೆ ಎಂದು ತಿಳಿಯುವುದು ಹೇಗೆ? ಕೊ-ವಿನ್ ಪ್ಲಾಟ್‌ಫಾರ್ಮ್ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ಬಾಕಿಯಿರುವಾಗ ಅದನ್ನು ಪಡೆಯಲು SMS ಕಳುಹಿಸುವ ನಿರೀಕ್ಷೆಯಿದೆ.

ಮುನ್ನೆಚ್ಚರಿಕೆಯ ಡೋಸ್‌ಗಾಗಿ ಫಲಾನುಭವಿಯು ಲಸಿಕೆ ಕೇಂದ್ರಕ್ಕೆ ಹೋಗಬೇಕೆ? ಹೌದು. ನೋಂದಣಿ ಮತ್ತು ಬುಕಿಂಗ್ ಸೇವೆಗಳನ್ನು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಪ್ರವೇಶಿಸಬಹುದು. ಆದ್ದರಿಂದ CoWin ನಲ್ಲಿ ಸ್ಲಾಟ್‌ಗಳನ್ನು ಬುಕ್ ಮಾಡಲು ಬಯಸದವರು ವಾಕ್-ಇನ್ ಸೌಲಭ್ಯಗಳನ್ನು ಒದಗಿಸುವ ಖಾಸಗಿ ಲಸಿಕೆ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ಪಡೆಯಬಹುದು.

ಭಾರತದಲ್ಲಿ ಇದುವರೆಗೆ ಎಷ್ಟು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ? ಒಟ್ಟು 45.15 ಲಕ್ಷ ಆರೋಗ್ಯ ಕಾರ್ಯಕರ್ತರು, 69.77 ಲಕ್ಷ ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ 1.25 ಕೋಟಿ ಜನರು ಮುನ್ನೆಚ್ಚರಿಕೆ ಪ್ರಮಾಣವನ್ನು ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 10 ರಿಂದ ಎಲ್ಲಾ ವಯಸ್ಕರಿಗೆ ಕೊವಿಡ್ ಬೂಸ್ಟರ್ ಡೋಸ್‌: ಆರೋಗ್ಯ ಸಚಿವಾಲಯ

Published On - 7:50 pm, Fri, 8 April 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್