Covid-19: ಕೊರೊನಾ ರೋಗಿಗಳ ಕಣ್ಣೀರಿನಿಂದಲೂ ಹರಡುತ್ತೆ ಕೊವಿಡ್ ಸೋಂಕು!; ಅಚ್ಚರಿಯ ವಿಷಯ ಬಯಲು

ಅಮೃತಸರದ ಸರ್ಕಾರಿ ಮೆಡಿಕಲ್ ಕಾಲೇಜಿನ ಸಂಶೋಧಕರು ಈ ಬಗ್ಗೆ ಅಧ್ಯಯನ ನಡೆಸಿ, ಮಾಹಿತಿ ನೀಡಿದ್ದಾರೆ. ಕಣ್ಣೀರಿನಿಂದಲೂ ಕೊರೊನಾ ರೋಗ ಹರಡುತ್ತದೆ ಎಂಬುದು ಸಂಶೋಧನೆಯಲ್ಲಿ ಸಾಬೀತಾಗಿದೆ.

Covid-19: ಕೊರೊನಾ ರೋಗಿಗಳ ಕಣ್ಣೀರಿನಿಂದಲೂ ಹರಡುತ್ತೆ ಕೊವಿಡ್ ಸೋಂಕು!; ಅಚ್ಚರಿಯ ವಿಷಯ ಬಯಲು
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Aug 02, 2021 | 2:18 PM

ಚಂಡೀಗಢ: ಪ್ರಪಂಚದಾದ್ಯಂತ ಕಳೆದ ಒಂದೂವರೆ ವರ್ಷದಿಂದ ಸಾವಿನ ಭೀತಿಯನ್ನು ಹೆಚ್ಚಿಸಿರುವ ಕೊವಿಡ್ ಇದೀಗ 3ನೇ ಅಲೆಯ ಆತಂಕವನ್ನು (COVID 3rd Wave) ಸೃಷ್ಟಿಸಿದೆ. ಇದರ ಜೊತೆಗೆ ರೂಪಾಂತರಿ ಕೊರೊನಾ ವೈರಸ್​ಗಳಿಂದ ಆತಂಕ ಇನ್ನಷ್ಟು ಹೆಚ್ಚಾಗಿದೆ. ಭಾರತದಲ್ಲಿ ಕೊಂಚ ಕಡಿಮೆಯಾಗಿದ್ದ ಕೊರೊನಾ ಕೇಸುಗಳು ಮತ್ತೆ ಹೆಚ್ಚಾಗತೊಡಗಿವೆ. ಈಗಾಗಲೇ ಕೊವಿಡ್​ಗೆ ಲಸಿಕೆಗಳನ್ನು(Coronavirus Vaccine) ಕಂಡುಹಿಡಿಯಲಾಗಿದ್ದು, ಈ ಕುರಿತ ಸಂಶೋಧನೆಗಳು ಇನ್ನೂ ನಡೆಯುತ್ತಲೇ ಇವೆ. ನಾನಾ ರೀತಿಯಲ್ಲಿ ಕೊರೊನಾ ಸೋಂಕು ತಗುಲುವ ಅಪಾಯವಿರುವುದರಿಂದ ಮಾಸ್ಕ್, ಸಾಮಾಜಿಕ ಅಂತರವನ್ನು ಕಡ್ಡಾಯಗೊಳಿಸಲಾಗಿತ್ತು. ಇದರ ನಡುವೆ ಕೊವಿಡ್ ರೋಗಿಗಳ ಕಣ್ಣೀರಿನಿಂದಲೂ ಬೇರೆಯವರಿಗೆ ಕೊರೊನಾ ತಗುಲುವ ಸಾಧ್ಯತೆಗಳಿವೆ ಎಂಬ ಹೊಸ ವಿಚಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ.

ಅಮೃತಸರದ ಸರ್ಕಾರಿ ಮೆಡಿಕಲ್ ಕಾಲೇಜಿನ ಸಂಶೋಧಕರು ಈ ಬಗ್ಗೆ ಅಧ್ಯಯನ ನಡೆಸಿ, ಮಾಹಿತಿ ನೀಡಿದ್ದಾರೆ. ಯಾವುದೇ ಕೊವಿಡ್ ಲಕ್ಷಣಗಳಿಲ್ಲದ ರೋಗಿಗಳ ಕಣ್ಣೀರಿನ ಮೂಲಕವೂ ಬೇರೆಯವರಿಗೆ ಕೊರೊನಾ ರೋಗ ಹರಡಬಲ್ಲದು ಎಂಬ ಮಾಹಿತಿಯನ್ನು ಬಯಲು ಮಾಡಿದೆ. ರೆಸ್ಪಿರೇಟರಿ ಡ್ರಾಪ್ಲೆಟ್ ಕೊರೊನಾ ಹರಡಲು ಮುಖ್ಯ ಕಾರಣವಾಗಿರುತ್ತದೆ. ಇದು ಕೊರೊನಾ ರೋಗಿ ಸೀನಿದಾಗ, ಕೆಮ್ಮಿದಾಗ, ಶೀತವಾದ ಮೂಗನ್ನು ಮುಟ್ಟಿ ಬೇರೆಡೆ ಮುಟ್ಟುವುದರಿಂದ, ಎಂಜಲಿನಿಂದಲೂ ಉತ್ಪತ್ತಿಯಾಗುತ್ತದೆ. ಇದೇ ಕಾರಣಕ್ಕೆ ಆಗಾಗ ಕೈಗಳನ್ನು ಸ್ವಚ್ಛವಾಗಿ ತೊಳೆದುಕೊಳ್ಳಬೇಕು ಅಥವಾ ಸ್ಯಾನಿಟೈಸರ್ ಬಳಸುವುದು ಅತ್ಯವಶ್ಯಕ. ಇದರ ಹೊರತಾಗಿ ಕಣ್ಣೀರಿನಿಂದಲೂ ಕೊರೊನಾ ರೋಗ ಹರಡುತ್ತದೆ ಎಂಬುದು ಸಂಶೋಧನೆಯಲ್ಲಿ ಸಾಬೀತಾಗಿದೆ.

ಈ ಸಂಶೋಧನೆಗಾಗಿ ರೋಗಿಗಳು ಆಸ್ಪತ್ರೆಗೆ ದಾಖಲಾದ 48 ಗಂಟೆಯೊಳಗೆ ಅವರ ಕಣ್ಣೀರಿನ ಸ್ಯಾಂಪಲ್ ಸಂಗ್ರಹಿಸಲಾಗಿತ್ತು. ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕೇಸುಗಳು ಹೆಚ್ಚಾಗುತ್ತಿವೆ. ಜುಲೈ ಮೊದಲ ವಾರದಿಂದ ದೇಶದಲ್ಲಿ ಕೊವಿಡ್ ಕೇಸುಗಳು ಹೆಚ್ಚಾಗುತ್ತಿವೆ. ಇಂದು ದೇಶದಲ್ಲಿ 40,134 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ, 422 ಜನರು ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಇದುವರೆಗೂ 4.24 ಲಕ್ಷ ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಭಾರತದ 3.16 ಕೋಟಿ ಜನರಿಗೆ ಈಗಾಗಲೇ ಕೊರೊನಾ ಸೋಂಕು ತಗುಲಿದೆ.

ಇದನ್ನೂ ಓದಿ: Covid 19 Updates: ‘ಕೊರೊನಾ ಮೂರನೇ ಅಲೆ ಈ ತಿಂಗಳಲ್ಲೇ ಶುರುವಾಗಲಿದೆ, ಅಕ್ಟೋಬರ್​ನಲ್ಲಿ ಉತ್ತುಂಗಕ್ಕೇರಲಿದೆ’

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,875 ಕೊರೊನಾ ಕೇಸ್ ಪತ್ತೆ; 25 ಮಂದಿ ಸಾವು

(Covid-19 can be Transmitted from Tears of Coronavirus Positive Patients new Study Reveals)

ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್