AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 5000 ದಾಟಿದ ಕೊವಿಡ್ ಪ್ರಕರಣಗಳು; ಅತಿ ಹೆಚ್ಚು ಸೋಂಕಿರುವ ಕೇರಳದಲ್ಲಿ ಹೈ ಅಲರ್ಟ್​

ಭಾರತ ದೇಶದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ 5000 ದಾಟಿದೆ. ಕೇರಳದಲ್ಲಿ ಅತಿ ಹೆಚ್ಚು ಸೋಂಕು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 498 ಹೊಸ ಪ್ರಕರಣಗಳು ವರದಿಯಾಗುವುದರೊಂದಿಗೆ ಭಾರತದಲ್ಲಿ ಕೋವಿಡ್ ಪ್ರಕರಣಗಳು 5000 ದಾಟಿವೆ. ಸುಮಾರು 500 ಹೊಸ ಪ್ರಕರಣಗಳು ಸೇರ್ಪಡೆಯಾಗಿದ್ದರೆ, ಕಳೆದ 24 ಗಂಟೆಗಳಲ್ಲಿ 64 ರೋಗಿಗಳನ್ನು ಗುಣಪಡಿಸಲಾಗಿದೆ ಅಥವಾ ಡಿಸ್ಚಾರ್ಜ್ ಮಾಡಲಾಗಿದೆ ಎಂದು ದಾಖಲೆಗಳು ತಿಳಿಸಿವೆ.

ಭಾರತದಲ್ಲಿ 5000 ದಾಟಿದ ಕೊವಿಡ್ ಪ್ರಕರಣಗಳು; ಅತಿ ಹೆಚ್ಚು ಸೋಂಕಿರುವ ಕೇರಳದಲ್ಲಿ ಹೈ ಅಲರ್ಟ್​
Covid 19
ಸುಷ್ಮಾ ಚಕ್ರೆ
|

Updated on:Jun 06, 2025 | 4:56 PM

Share

ನವದೆಹಲಿ, ಜೂನ್ 6: ಭಾರತದಲ್ಲಿ ಕೊವಿಡ್ ಪ್ರಕರಣಗಳು (Covid Cases) 5000 ದಾಟಿದ್ದು, ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ, ಕೇರಳವು ಅತಿ ಹೆಚ್ಚು ಸೋಂಕು ಪೀಡಿತ ರಾಜ್ಯವಾಗಿದೆ. ಕಳೆದ 24 ಗಂಟೆಗಳಲ್ಲಿ 4 ಹೊಸ ಸಾವುಗಳೊಂದಿಗೆ ಒಂದೇ ದಿನದಲ್ಲಿ ಕೊವಿಡ್ ಪ್ರಕರಣಗಳು ಸುಮಾರು 500ರಷ್ಟು ಏರಿಕೆಯಾಗಿ 5364ಕ್ಕೆ ತಲುಪಿವೆ. ಕೇರಳವು ಅತಿ ಹೆಚ್ಚು ಸೋಂಕು ಪೀಡಿತ ರಾಜ್ಯವಾಗಿದ್ದು, ಸಕ್ರಿಯ ಪ್ರಕರಣಗಳು 1679ಕ್ಕೆ ತಲುಪಿವೆ. ಇದರ ನಂತರದ ಸ್ಥಾನಗಳಲ್ಲಿ ಗುಜರಾತ್ (615), ಪಶ್ಚಿಮ ಬಂಗಾಳ (596) ಮತ್ತು ದೆಹಲಿ (592) ಇವೆ. ಕೇರಳದಲ್ಲಿ 2 ಸಾವುಗಳು ವರದಿಯಾಗಿವೆ, ಕರ್ನಾಟಕ ಮತ್ತು ಪಂಜಾಬ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಒಂದು ದಿನದಲ್ಲಿ 498 ಹೊಸ ಪ್ರಕರಣಗಳು ಸೇರ್ಪಡೆಯಾಗಿದ್ದರೂ, ಕಳೆದ 24 ಗಂಟೆಗಳಲ್ಲಿ 764 ರೋಗಿಗಳನ್ನು ಗುಣಪಡಿಸಲಾಗಿದೆ ಅಥವಾ ಡಿಸ್ಚಾರ್ಜ್ ಮಾಡಲಾಗಿದೆ.

ಕೊವಿಡ್ ಪ್ರಕರಣಗಳ ಏರಿಕೆಯ ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಆಮ್ಲಜನಕ, ಐಸೋಲೇಷನ್ ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿದೆ. ಹೆಚ್ಚಿನ ಕೊವಿಡ್ ಪ್ರಕರಣಗಳು ಸೌಮ್ಯವಾಗಿರುತ್ತವೆ. ಕೊವಿಡ್ ಪ್ರಕರಣಗಳ ಹೆಚ್ಚಳದ ದೃಷ್ಟಿಯಿಂದ ಕೊವಿಡ್‌ಗಾಗಿ ಸೌಲಭ್ಯ ಮಟ್ಟದ ಸಿದ್ಧತೆಯನ್ನು ಪರಿಶೀಲಿಸಲು ಕೇಂದ್ರ ಸರ್ಕಾರವು ಅಣಕು ಅಭ್ಯಾಸಗಳನ್ನು ನಡೆಸುತ್ತಿದೆ. ಹೆಚ್ಚಿನ ಪ್ರಕರಣಗಳು ಸೌಮ್ಯವಾಗಿರುತ್ತವೆ ಮತ್ತು ಅವುಗಳನ್ನು ಮನೆಯ ಆರೈಕೆಯಡಿಯಲ್ಲಿ ನಿರ್ವಹಿಸಲಾಗುತ್ತದೆ ಎಂದು ಅಧಿಕೃತ ಮೂಲಗಳು ಸಮರ್ಥಿಸಿಕೊಂಡಿವೆ.

ಇದನ್ನೂ ಓದಿ
Image
ವಿಮಾನಕ್ಕೆ ಹದ್ದು ಡಿಕ್ಕಿಯಾಗಿ ತುರ್ತು ಭೂಸ್ಪರ್ಶ; 175 ಪ್ರಯಾಣಿಕರು ಪಾರು
Image
ರಷ್ಯಾದಿಂದ ಬಾಕಿ ಎಸ್-400 ಕ್ಷಿಪಣಿ ವ್ಯವಸ್ಥೆಗಳು ಭಾರತಕ್ಕೆ 2026ಕ್ಕೆ ಲಭ್ಯ
Image
ಉಕ್ರೇನ್‌ ಡ್ರೋನ್ ದಾಳಿಯಲ್ಲಿ ಯುದ್ಧ ವಿಮಾನ ಪತನದ ಬಗ್ಗೆ ಮೌನ ಮುರಿದ ರಷ್ಯಾ
Image
ಪಾಕಿಸ್ತಾನ ಭಿಕ್ಷಾ ಪಾತ್ರೆ ಹಿಡಿದು ದೇಶಗಳ ಸುತ್ತುತ್ತಿದೆ

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌; ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಈ ವರ್ಷದ ಜನವರಿಯಿಂದ ಭಾರತದಲ್ಲಿ 4724 ಪ್ರಕರಣಗಳು ವರದಿಯಾಗಿವೆ, 55 ಸಾವುಗಳು ದೃಢಪಟ್ಟಿವೆ. ಮೇ 22ರಂದು ದೇಶದಲ್ಲಿ ಒಟ್ಟು 257 ಸಕ್ರಿಯ ರೋಗಿಗಳಿದ್ದರು. ಜೂನ್ 2 ಮತ್ತು 3ರಂದು ಆರೋಗ್ಯ ಸೇವೆಗಳ ಮಹಾನಿರ್ದೇಶಕಿ (DGHS) ಡಾ. ಸುನೀತಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ವಿಪತ್ತು ನಿರ್ವಹಣಾ ಕೋಶ, ತುರ್ತು ನಿರ್ವಹಣಾ ಪ್ರತಿಕ್ರಿಯೆ (EMR) ಕೋಶ, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC), ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮ (IDSP) ಮತ್ತು ದೆಹಲಿಯ ಕೇಂದ್ರ ಸರ್ಕಾರಿ ಆಸ್ಪತ್ರೆಗಳ ಪ್ರತಿನಿಧಿಗಳು ಮತ್ತು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಗಳೊಂದಿಗೆ ಪ್ರಸ್ತುತ COVID-19 ಪರಿಸ್ಥಿತಿ ಮತ್ತು ಸನ್ನದ್ಧತಾ ಕ್ರಮಗಳನ್ನು ಮೌಲ್ಯಮಾಪನ ಮಾಡಲು ತಾಂತ್ರಿಕ ಪರಿಶೀಲನಾ ಸಭೆಗಳನ್ನು ನಡೆಸಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 4:54 pm, Fri, 6 June 25