AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಸ್​ 19 ಬಗೆಯ ರೂಪಾಂತರ ಪತ್ತೆ

ಹೊಸ ಸ್ವರೂಪದ ಕೊರೊನಾ ವೈರಾಣು ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಉತ್ತರಾಖಾಂಡ್, ಹರ್ಯಾಣ, ಗುಜರಾತ್ ಮತ್ತು ದೆಹಲಿಯಲ್ಲೂ ಇದೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ವೈರಸ್​ 19 ಬಗೆಯ ರೂಪಾಂತರ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Apr 06, 2022 | 11:13 PM

Share

ದೆಹಲಿ: ಕೊರೊನಾ ವೈರಾಣುವಿನ 19 ವಿಧದ ರೂಪಾಂತರಗಳನ್ನು ಭಾರತೀಯ ಸಂಶೋಧಕರು ಪತ್ತೆಹಚ್ಚಿದ್ದಾರೆ. ಮನುಷ್ಯ ದೇಹದ ರೋಗನಿರೋಧಕ ಶಕ್ತಿಯಿಂದ ತಪ್ಪಿಸಿಕೊಳ್ಳುವ ಶಕ್ತಿಯನ್ನೂ ಒಂದು ವೈರಾಣು ಪಡೆದುಕೊಂಡಿದೆ. ಅಂತಹ ವೈರಸ್​ನ ಹರಡುವಿಕೆ ಪ್ರಮಾಣ ಆಂಧ್ರಪ್ರದೇಶದಲ್ಲಿ ಹೆಚ್ಚಾಗಿದೆ ಎಂದೂ ತಿಳಿದುಬಂದಿದೆ.

ವಂಶವಾಹಿಯಲ್ಲಿ ಬದಲಾವಣೆ ಆಗಿರುವ ಈ ವೈರಾಣುವನ್ನು N440K ಎನ್ನಲಾಗಿದೆ. ಆಂಧ್ರಪ್ರದೇಶದಲ್ಲಿ, 272 ಕೋವಿಡ್-19 ಪ್ರಕರಣಗಳ ಪೈಕಿ ಶೇ 34ರಷ್ಟಲ್ಲಿ N440K ಕಂಡುಬಂದಿದೆ. ಈ ಸ್ವರೂಪದ ಕೊರೊನಾ ವೈರಾಣು ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣದಲ್ಲೂ ಇದೆ ಎಂದು ಮೂಲಗಳು ತಿಳಿಸಿವೆ. ಕೊವಿಡ್-19 ಮರುಕಳಿಸಿರುವ ನೋಯ್ಡಾದ ಒಬ್ಬ ವ್ಯಕ್ತಿಯಲ್ಲಿ ಈ ಹೊಸ ಸ್ವರೂಪದ ಕೊರೊನಾ ವೈರಾಣು ಕಂಡುಬಂದಿರುವ ಬಗ್ಗೆ ಮಾಹಿತಿ ಇದೆ.

ದೇಶದ ಕೊವಿಡ್-19 ಕಾರ್ಯಪಡೆ, ಕೊರೊನಾ ವೈರಸ್​ನ ರೂಪಾಂತರ ಪತ್ತೆಹಚ್ಚುವ ಬಗ್ಗೆ ಶನಿವಾರ ಯೋಜನೆ ಹಾಕಿಕೊಂಡಿತ್ತು. ರಾಷ್ಟ್ರದ ಶೇ 5ರಷ್ಟು ಕೊರೊನಾ ಕೇಸ್​ಗಳನ್ನು ಈ ಸಂಶೋಧನೆಯಲ್ಲಿ ಬಳಸುವ ಬಗ್ಗೆ ತಿಳಿಸಲಾಗಿದೆ. ಇಂಗ್ಲೆಂಡ್ ಹಾಗೂ ಅಮೆರಿಕಾಕ್ಕೆ ಹೋಲಿಸಿದರೆ ಭಾರತದಲ್ಲಿ ಈ ಬಗ್ಗೆ ಕಡಿಮೆ ಅಧ್ಯಯನಗಳು ಆಗಿವೆ. ಇಂಗ್ಲೆಂಡ್​ನಲ್ಲಿ 1.57 ಲಕ್ಷದಷ್ಟು ಪ್ರಕರಣಗಳ ಅಧ್ಯಯನವಾಗಿದ್ದರೆ, ಅಮೆರಿಕಾದಲ್ಲಿ 50 ಸಾವಿರದಷ್ಟು ಪ್ರಕರಣಗಳನ್ನು ಸಂಶೋಧನೆ ಮಾಡಲಾಗಿದೆ.

ಈಗ ಪತ್ತೆಹಚ್ಚಲಾಗಿರುವ ಹೊಸ ಸ್ವರೂಪದ ಕೊರೊನಾ ವೈರಾಣುವಿನ ವೈದ್ಯಕೀಯ ಗುಣಲಕ್ಷಣಗಳ ಬಗ್ಗೆ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ. ಅದಕ್ಕಾಗಿ ಇನ್ನಷ್ಟು ಮಾಹಿತಿ, ವಿಶ್ಲೇಷಣೆಗಳನ್ನು ಕಲೆಹಾಕಬೇಕಾಗಿದೆ. ಅವುಗಳ ಮೇಲೆ ಲಸಿಕೆಯ ಪರಿಣಾಮ, ಪ್ರಭಾವಗಳನ್ನೂ ತಿಳಿಯಲಾಗುತ್ತಿದೆ.

N440K ಸ್ವರೂಪದ ಕೊರೊನಾ ವೈರಾಣು ಹೊರತುಪಡಿಸಿ, ಇತರ ರೂಪಾಂತರಗಳು ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ಉತ್ತರಾಖಾಂಡ್, ಹರ್ಯಾಣ, ಗುಜರಾತ್ ಮತ್ತು ದೆಹಲಿಯಲ್ಲಿ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್

Published On - 4:02 pm, Mon, 28 December 20

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!