Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವೈರಸ್​ 19 ಬಗೆಯ ರೂಪಾಂತರ ಪತ್ತೆ

ಹೊಸ ಸ್ವರೂಪದ ಕೊರೊನಾ ವೈರಾಣು ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ, ಉತ್ತರಾಖಾಂಡ್, ಹರ್ಯಾಣ, ಗುಜರಾತ್ ಮತ್ತು ದೆಹಲಿಯಲ್ಲೂ ಇದೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ವೈರಸ್​ 19 ಬಗೆಯ ರೂಪಾಂತರ ಪತ್ತೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 06, 2022 | 11:13 PM

ದೆಹಲಿ: ಕೊರೊನಾ ವೈರಾಣುವಿನ 19 ವಿಧದ ರೂಪಾಂತರಗಳನ್ನು ಭಾರತೀಯ ಸಂಶೋಧಕರು ಪತ್ತೆಹಚ್ಚಿದ್ದಾರೆ. ಮನುಷ್ಯ ದೇಹದ ರೋಗನಿರೋಧಕ ಶಕ್ತಿಯಿಂದ ತಪ್ಪಿಸಿಕೊಳ್ಳುವ ಶಕ್ತಿಯನ್ನೂ ಒಂದು ವೈರಾಣು ಪಡೆದುಕೊಂಡಿದೆ. ಅಂತಹ ವೈರಸ್​ನ ಹರಡುವಿಕೆ ಪ್ರಮಾಣ ಆಂಧ್ರಪ್ರದೇಶದಲ್ಲಿ ಹೆಚ್ಚಾಗಿದೆ ಎಂದೂ ತಿಳಿದುಬಂದಿದೆ.

ವಂಶವಾಹಿಯಲ್ಲಿ ಬದಲಾವಣೆ ಆಗಿರುವ ಈ ವೈರಾಣುವನ್ನು N440K ಎನ್ನಲಾಗಿದೆ. ಆಂಧ್ರಪ್ರದೇಶದಲ್ಲಿ, 272 ಕೋವಿಡ್-19 ಪ್ರಕರಣಗಳ ಪೈಕಿ ಶೇ 34ರಷ್ಟಲ್ಲಿ N440K ಕಂಡುಬಂದಿದೆ. ಈ ಸ್ವರೂಪದ ಕೊರೊನಾ ವೈರಾಣು ಕರ್ನಾಟಕ, ಮಹಾರಾಷ್ಟ್ರ ಹಾಗೂ ತೆಲಂಗಾಣದಲ್ಲೂ ಇದೆ ಎಂದು ಮೂಲಗಳು ತಿಳಿಸಿವೆ. ಕೊವಿಡ್-19 ಮರುಕಳಿಸಿರುವ ನೋಯ್ಡಾದ ಒಬ್ಬ ವ್ಯಕ್ತಿಯಲ್ಲಿ ಈ ಹೊಸ ಸ್ವರೂಪದ ಕೊರೊನಾ ವೈರಾಣು ಕಂಡುಬಂದಿರುವ ಬಗ್ಗೆ ಮಾಹಿತಿ ಇದೆ.

ದೇಶದ ಕೊವಿಡ್-19 ಕಾರ್ಯಪಡೆ, ಕೊರೊನಾ ವೈರಸ್​ನ ರೂಪಾಂತರ ಪತ್ತೆಹಚ್ಚುವ ಬಗ್ಗೆ ಶನಿವಾರ ಯೋಜನೆ ಹಾಕಿಕೊಂಡಿತ್ತು. ರಾಷ್ಟ್ರದ ಶೇ 5ರಷ್ಟು ಕೊರೊನಾ ಕೇಸ್​ಗಳನ್ನು ಈ ಸಂಶೋಧನೆಯಲ್ಲಿ ಬಳಸುವ ಬಗ್ಗೆ ತಿಳಿಸಲಾಗಿದೆ. ಇಂಗ್ಲೆಂಡ್ ಹಾಗೂ ಅಮೆರಿಕಾಕ್ಕೆ ಹೋಲಿಸಿದರೆ ಭಾರತದಲ್ಲಿ ಈ ಬಗ್ಗೆ ಕಡಿಮೆ ಅಧ್ಯಯನಗಳು ಆಗಿವೆ. ಇಂಗ್ಲೆಂಡ್​ನಲ್ಲಿ 1.57 ಲಕ್ಷದಷ್ಟು ಪ್ರಕರಣಗಳ ಅಧ್ಯಯನವಾಗಿದ್ದರೆ, ಅಮೆರಿಕಾದಲ್ಲಿ 50 ಸಾವಿರದಷ್ಟು ಪ್ರಕರಣಗಳನ್ನು ಸಂಶೋಧನೆ ಮಾಡಲಾಗಿದೆ.

ಈಗ ಪತ್ತೆಹಚ್ಚಲಾಗಿರುವ ಹೊಸ ಸ್ವರೂಪದ ಕೊರೊನಾ ವೈರಾಣುವಿನ ವೈದ್ಯಕೀಯ ಗುಣಲಕ್ಷಣಗಳ ಬಗ್ಗೆ ವಿಜ್ಞಾನಿಗಳು ಸಂಶೋಧನೆ ನಡೆಸುತ್ತಿದ್ದಾರೆ. ಅದಕ್ಕಾಗಿ ಇನ್ನಷ್ಟು ಮಾಹಿತಿ, ವಿಶ್ಲೇಷಣೆಗಳನ್ನು ಕಲೆಹಾಕಬೇಕಾಗಿದೆ. ಅವುಗಳ ಮೇಲೆ ಲಸಿಕೆಯ ಪರಿಣಾಮ, ಪ್ರಭಾವಗಳನ್ನೂ ತಿಳಿಯಲಾಗುತ್ತಿದೆ.

N440K ಸ್ವರೂಪದ ಕೊರೊನಾ ವೈರಾಣು ಹೊರತುಪಡಿಸಿ, ಇತರ ರೂಪಾಂತರಗಳು ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ, ತೆಲಂಗಾಣ, ಪಶ್ಚಿಮ ಬಂಗಾಳ, ಉತ್ತರಾಖಾಂಡ್, ಹರ್ಯಾಣ, ಗುಜರಾತ್ ಮತ್ತು ದೆಹಲಿಯಲ್ಲಿ ಕಂಡುಬಂದಿದೆ ಎಂದು ಮೂಲಗಳು ತಿಳಿಸಿವೆ.

ಶಿವಮೊಗ್ಗದಲ್ಲೂ ಶುರುವಾಯ್ತಾ ರೂಪಾಂತರಿ ಕೊರೊನಾ ಆತಂಕ? ಬ್ರಿಟನ್​ನಿಂದ ಬಂದ ನಾಲ್ವರಿಗೆ ಪಾಸಿಟಿವ್

Published On - 4:02 pm, Mon, 28 December 20

ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
ಆಡಳಿತ ಮತ್ತು ವಿರೋಧ ಪಕ್ಷದ ನಾಯಕರಿಗೆ ಕೇವಲ ಅಧಿಕಾರದ ತೆವಲು: ಗೋವಿಂದು
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
Live: ಆರ್​ಎಸ್​ಎಸ್ ಅಖಿಲ ಭಾರತೀಯ ಪ್ರತಿನಿಧಿ ಸಭಾ ಪತ್ರಿಕಾಗೋಷ್ಠಿ ಲೈವ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಪರೀಕ್ಷೆ ಇಲ್ಲದಿರುವುದನ್ನು ಸಚಿವರಿಂದ ಖಚಿತಪಡಿಸಿಕೊಂಡಿದ್ದೆವು: ವಾಟಾಳ್
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ
ಹನಿ ಟ್ರ್ಯಾಪ್ ಆರೋಪ ವಿಷಯದಲ್ಲಿ ಸಿಎಂ, ಹೆಚ್​ಎಂ ಪ್ರತಿಕ್ರಿಯೆ ನೀಡಿಲ್ಲ