AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿ, ಬ್ರಿಟನ್​ನಿಂದ ಆಕ್ಸಿಜನ್ ಕಂಟೇನರ್ ಹೊತ್ತು ತಂದ ಭಾರತೀಯ ವಾಯುಪಡೆ

India Air Force: ಭಾರತೀಯ ವಾಯುಪಡೆಯ ಸಿ-17 ವಿಮಾನ ಭಾನುವಾರ ನಾಲ್ಕು ಕ್ರಯೋಜನಿಕ್ ಆಕ್ಸಿಜನ್  ಕಂಟೇನರ್​ಗಳನ್ನು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ  ದೆಹಲಿ ಸಮೀಪದ  ಹಿಂಡನ್ ವಾಯುನೆಲೆಗೆ ಹೊತ್ತು ತಂದಿದೆ.

ಜರ್ಮನಿ, ಬ್ರಿಟನ್​ನಿಂದ ಆಕ್ಸಿಜನ್ ಕಂಟೇನರ್ ಹೊತ್ತು ತಂದ ಭಾರತೀಯ ವಾಯುಪಡೆ
ಆಕ್ಸಿಜನ್ ಕಂಟೇನರ್
ರಶ್ಮಿ ಕಲ್ಲಕಟ್ಟ
|

Updated on:May 03, 2021 | 3:35 PM

Share

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಆಕ್ಸಿಜನ್ ಕೊರತೆಯೂ ತೀರ್ವವಾಗಿ ಕಾಡಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಭಾರತೀಯ ವಾಯುಪಡೆಯ ಸಿ-17 ವಿಮಾನ ಭಾನುವಾರ ನಾಲ್ಕು ಕ್ರಯೋಜನಿಕ್ ಆಕ್ಸಿಜನ್  ಕಂಟೇನರ್​ಗಳನ್ನು ಜರ್ಮನಿಯ ಫ್ರಾಂಕ್​ಫರ್ಟ್​ನಿಂದ  ದೆಹಲಿ ಸಮೀಪದ  ಹಿಂಡನ್ ವಾಯುನೆಲೆಗೆ ಹೊತ್ತು ತಂದಿದೆ. ಅದೇ ವೇಳೆ ಬ್ರಿಟನ್​ನ ಬ್ರೈಜ್  ನಾರ್ಟನ್​ ನಿಂದ  450 ಆಕ್ಸಿಜನ್ ಸಿಲಿಂಡರ್​ಗಳನ್ನು ತಮಿಳುನಾಡಿನ ಚೆನ್ನೈ ವಾಯುನೆಲೆಗೆ ತಂದಿದೆ.

 ಇದರ ಜತೆಗೆ ಸಿ-17 ಎರಡು ಕ್ರಯೋಜನಿಕ್ ಆಕ್ಸಿಜನ್ ಕಂಟೇನರ್​ಗಳನ್ನು ಚಂಢೀಗಡದಿಂದ ಭುವನೇಶ್ವರಕ್ಕೆ, ಎರಡು ಕಂಟೇನರ್​ಗಳನ್ನು ಜೋಧಾಪುರ್​ನಿಂದ ಜಾಮ್​ನಗರ್​ಗೆ, ಎರಡು ಸಿಲಿಂಡರ್​ಗಳನ್ನು ಹಿಂಡನ್​ನಿಂದ ರಾಂಚಿಗೆ,  ಇಂದೋರ್​ನಿಂದ ಜಾಮ್​ನಗರಕ್ಕೆ,  ಹಿಂಡನ್​ನಿಂದ ಭುವನೇಶ್ವರಕ್ಕೆ  ತಲಾ ಎರಡು ಕಂಟೇನರ್​  ಗಳನ್ನು ಸಾಗಿಸಲಾಗದೆ ಎಂದು ಭಾರತೀಯ ವಾಯುಪಡೆ  ಹೇಳಿದೆ.

ಸಿ-17 ಸಾಗಾಣಿಕೆ ವಿಮಾನವು ಸಿಂಗಾಪೂರ್​ನಿಂದ ಹೆಚ್ಚು ಆಕ್ಸಿಜನ್ ಸಿಲಿಂಡರ್ ಗಳನ್ನು ತರಲು ಸಿದ್ಧತೆ ನಡೆಸಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಐಎಎಫ್ ಸಿ 17 ಸಾಗಾಣಿಕೆ ವಿಮಾನವು  ಸಿಂಗಾಪುರ್​ನಿಂದ ಖಾಲಿ ಆಕ್ಸಿಜನ್ ಕಂಟೇನರ್ ಗಳನ್ನು ಏರ್​ ಲಿಫ್ಟ್ ಮಾಡಲಿದೆ. ಆಕ್ಸಿಜನ್  ಪೂರೈಕೆ ಮಾಡಲು  ವಾಯುಪಡೆ ವಿಮಾನ ಬಳಸಲಾಗುತ್ತಿದೆ. ಗೃಹ ಸಚಿವಾಲಯವು ಇದರ ಉಸ್ತುವಾರಿ ವಹಿಸಿದೆ ಎಂದು ಗೃಹ ಇಲಾಖೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಎಚ್ಚೆತ್ತ ಸರ್ಕಾರದಿಂದ ಆಕ್ಸಿಜನ್ ಪೂರೈಕೆ ಬಗ್ಗೆ ಮಹತ್ವದ ಆದೇಶ

ತೆಲಂಗಾಣ: ಹೈದರಾಬಾದ್‌ನಿಂದ ಒಡಿಶಾಗೆ ಆಕ್ಸಿಜನ್ ಟ್ಯಾಂಕ್ ಏರ್​ಲಿಫ್ಟ್ ಮಾಡಿದ ಭಾರತೀಯ ವಾಯುಪಡೆ

(COVID 19 crisis in the country India Air Force C-17 aircraft Airlifts Oxygen Containers From Germany UK)

Published On - 3:19 pm, Mon, 3 May 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ