AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜರ್ಮನಿ, ಬ್ರಿಟನ್​ನಿಂದ ಆಕ್ಸಿಜನ್ ಕಂಟೇನರ್ ಹೊತ್ತು ತಂದ ಭಾರತೀಯ ವಾಯುಪಡೆ

India Air Force: ಭಾರತೀಯ ವಾಯುಪಡೆಯ ಸಿ-17 ವಿಮಾನ ಭಾನುವಾರ ನಾಲ್ಕು ಕ್ರಯೋಜನಿಕ್ ಆಕ್ಸಿಜನ್  ಕಂಟೇನರ್​ಗಳನ್ನು ಜರ್ಮನಿಯ ಫ್ರಾಂಕ್ ಫರ್ಟ್ ನಿಂದ  ದೆಹಲಿ ಸಮೀಪದ  ಹಿಂಡನ್ ವಾಯುನೆಲೆಗೆ ಹೊತ್ತು ತಂದಿದೆ.

ಜರ್ಮನಿ, ಬ್ರಿಟನ್​ನಿಂದ ಆಕ್ಸಿಜನ್ ಕಂಟೇನರ್ ಹೊತ್ತು ತಂದ ಭಾರತೀಯ ವಾಯುಪಡೆ
ಆಕ್ಸಿಜನ್ ಕಂಟೇನರ್
ರಶ್ಮಿ ಕಲ್ಲಕಟ್ಟ
|

Updated on:May 03, 2021 | 3:35 PM

Share

ದೆಹಲಿ: ದೇಶದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವಂತೆ ಆಕ್ಸಿಜನ್ ಕೊರತೆಯೂ ತೀರ್ವವಾಗಿ ಕಾಡಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಭಾರತೀಯ ವಾಯುಪಡೆಯ ಸಿ-17 ವಿಮಾನ ಭಾನುವಾರ ನಾಲ್ಕು ಕ್ರಯೋಜನಿಕ್ ಆಕ್ಸಿಜನ್  ಕಂಟೇನರ್​ಗಳನ್ನು ಜರ್ಮನಿಯ ಫ್ರಾಂಕ್​ಫರ್ಟ್​ನಿಂದ  ದೆಹಲಿ ಸಮೀಪದ  ಹಿಂಡನ್ ವಾಯುನೆಲೆಗೆ ಹೊತ್ತು ತಂದಿದೆ. ಅದೇ ವೇಳೆ ಬ್ರಿಟನ್​ನ ಬ್ರೈಜ್  ನಾರ್ಟನ್​ ನಿಂದ  450 ಆಕ್ಸಿಜನ್ ಸಿಲಿಂಡರ್​ಗಳನ್ನು ತಮಿಳುನಾಡಿನ ಚೆನ್ನೈ ವಾಯುನೆಲೆಗೆ ತಂದಿದೆ.

 ಇದರ ಜತೆಗೆ ಸಿ-17 ಎರಡು ಕ್ರಯೋಜನಿಕ್ ಆಕ್ಸಿಜನ್ ಕಂಟೇನರ್​ಗಳನ್ನು ಚಂಢೀಗಡದಿಂದ ಭುವನೇಶ್ವರಕ್ಕೆ, ಎರಡು ಕಂಟೇನರ್​ಗಳನ್ನು ಜೋಧಾಪುರ್​ನಿಂದ ಜಾಮ್​ನಗರ್​ಗೆ, ಎರಡು ಸಿಲಿಂಡರ್​ಗಳನ್ನು ಹಿಂಡನ್​ನಿಂದ ರಾಂಚಿಗೆ,  ಇಂದೋರ್​ನಿಂದ ಜಾಮ್​ನಗರಕ್ಕೆ,  ಹಿಂಡನ್​ನಿಂದ ಭುವನೇಶ್ವರಕ್ಕೆ  ತಲಾ ಎರಡು ಕಂಟೇನರ್​  ಗಳನ್ನು ಸಾಗಿಸಲಾಗದೆ ಎಂದು ಭಾರತೀಯ ವಾಯುಪಡೆ  ಹೇಳಿದೆ.

ಸಿ-17 ಸಾಗಾಣಿಕೆ ವಿಮಾನವು ಸಿಂಗಾಪೂರ್​ನಿಂದ ಹೆಚ್ಚು ಆಕ್ಸಿಜನ್ ಸಿಲಿಂಡರ್ ಗಳನ್ನು ತರಲು ಸಿದ್ಧತೆ ನಡೆಸಿದೆ ಎಂದು ಗೃಹ ಸಚಿವಾಲಯ ಹೇಳಿದೆ.

ಐಎಎಫ್ ಸಿ 17 ಸಾಗಾಣಿಕೆ ವಿಮಾನವು  ಸಿಂಗಾಪುರ್​ನಿಂದ ಖಾಲಿ ಆಕ್ಸಿಜನ್ ಕಂಟೇನರ್ ಗಳನ್ನು ಏರ್​ ಲಿಫ್ಟ್ ಮಾಡಲಿದೆ. ಆಕ್ಸಿಜನ್  ಪೂರೈಕೆ ಮಾಡಲು  ವಾಯುಪಡೆ ವಿಮಾನ ಬಳಸಲಾಗುತ್ತಿದೆ. ಗೃಹ ಸಚಿವಾಲಯವು ಇದರ ಉಸ್ತುವಾರಿ ವಹಿಸಿದೆ ಎಂದು ಗೃಹ ಇಲಾಖೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ದುರಂತ: ಎಚ್ಚೆತ್ತ ಸರ್ಕಾರದಿಂದ ಆಕ್ಸಿಜನ್ ಪೂರೈಕೆ ಬಗ್ಗೆ ಮಹತ್ವದ ಆದೇಶ

ತೆಲಂಗಾಣ: ಹೈದರಾಬಾದ್‌ನಿಂದ ಒಡಿಶಾಗೆ ಆಕ್ಸಿಜನ್ ಟ್ಯಾಂಕ್ ಏರ್​ಲಿಫ್ಟ್ ಮಾಡಿದ ಭಾರತೀಯ ವಾಯುಪಡೆ

(COVID 19 crisis in the country India Air Force C-17 aircraft Airlifts Oxygen Containers From Germany UK)

Published On - 3:19 pm, Mon, 3 May 21

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ