AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಬಿಕ್ಕಟ್ಟು.. ಪ್ರಧಾನಿ ಮೋದಿ ನಿರ್ಮಿತ ವಿಪತ್ತು’-ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿಯವರೇ, ನಿಮಗೆ ಕೊರೊನಾ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದೆ ಇದ್ದರೆ, ನಿಮ್ಮ ಖುರ್ಚಿಯನ್ನು ಬಿಟ್ಟುಬಿಡಿ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

‘ಕೊರೊನಾ ಬಿಕ್ಕಟ್ಟು.. ಪ್ರಧಾನಿ ಮೋದಿ ನಿರ್ಮಿತ ವಿಪತ್ತು'-ಸಿಎಂ ಮಮತಾ ಬ್ಯಾನರ್ಜಿ ವಾಗ್ದಾಳಿ
ಮಮತಾ ಬ್ಯಾನರ್ಜಿ ಮತ್ತು ನರೇಂದ್ರ ಮೋದಿ
Lakshmi Hegde
|

Updated on: Apr 21, 2021 | 5:13 PM

Share

ಕೋಲ್ಕತ್ತ: ದೇಶದಲ್ಲಿ ಕೊರೊನಾ ವೈರಸ್ ಎರಡನೇ ಅಲೆ ಪರಿಸ್ಥಿತಿಯ ಬಗ್ಗೆ ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ವಿರುದ್ಧ ಹೋರಾಟಕ್ಕೆ ಸಹಕರಿಸಿ ಎಂದು ಜನರ ಬಳಿ ಮನವಿ ಮಾಡಿಕೊಂಡಿದ್ದಲ್ಲದೆ, ಲಾಕ್​ಡೌನ್​ನ್ನು ಕೊನೇ ಅಸ್ತ್ರವನ್ನಾಗಿ ಪ್ರಯೋಗಿಸಿ ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದ್ದಾರೆ.

ಅದರ ಬೆನ್ನಲ್ಲೇ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಹರಿಹಾಯ್ದಿದ್ದಾರೆ. ಈ ಕೊರೊನಾ ಬಿಕ್ಕಟ್ಟು ಎನ್ನುವುದು ನರೇಂದ್ರ ಮೋದಿ ನಿರ್ಮಿತ ಬಹುದೊಡ್ಡ ಆಪತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆ ನಿಮಿತ್ತ ಪ್ರಚಾರ ನಡೆಸಿದ ಮಮತಾ ಬ್ಯಾನರ್ಜಿ, ದೇಶದಲ್ಲಿ ಕೊರೊನಾದ ಕೆಟ್ಟ ಪರಿಸ್ಥಿತಿ ಉಂಟಾಗಲು ಕೇಂದ್ರಸರ್ಕಾರವೇ ಕಾರಣ ಎಂದು ಹೇಳಿದ ಮಮತಾ ಬ್ಯಾನರ್ಜಿ, ಪ್ರಧಾನಿ ನರೇಂದ್ರ ಮೋದಿಯವರೇ, ನಿಮಗೆ ಕೊರೊನಾ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗದೆ ಇದ್ದರೆ, ನಿಮ್ಮ ಖುರ್ಚಿಯನ್ನು ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ದೇಶದಲ್ಲಿ ಉಂಟಾಗಿರುವ ಆಕ್ಸಿಜನ್​, ಕೊವಿಡ್​ 19 ವ್ಯಾಕ್ಸಿನ್​ ಸೇರಿ ಹಲವು ವ್ಯದ್ಯಕೀಯ ವ್ಯವಸ್ಥೆಗಳ ಅಭಾವ ಆಗಿರುವುದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ನಿನ್ನೆ ನರೇಂದ್ರ ಮೋದಿಯವರು ದೇಶವನ್ನು ಉದ್ದೇಶಿಸಿ ಮಾತನಾಡುತ್ತ, ಆಕ್ಸಿಜನ್, ಲಸಿಕೆ, ಬೆಡ್​ಗಳ ಕೊರತೆ ಆಗಿರುವುದು ಗಮನಕ್ಕೆ ಬಂದಿದೆ. ನಾವದನ್ನು ಅಗತ್ಯ ಇರುವಷ್ಟು ಪೂರೈಸಲು ಎಲ್ಲ ರೀತಿಯ ಕ್ರಮಗಳನ್ನೂ ತೆಗೆದುಕೊಳ್ಳುತ್ತಿದ್ದೇವೆ. ಜನರ ಜೀವ ರಕ್ಷಣೆಯೇ ನಮ್ಮ ಗುರಿ ಎಂದು ಹೇಳಿದ್ದರು. ಅಲ್ಲದೆ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದ ಮೋದಿಯವರು, ಲಾಕ್​ಡೌನ್​ ಕೊನೇ ಅಸ್ತ್ರವಾಗಿರಲಿ. ಅದರ ಬದಲು ಸೂಕ್ಷ್ಮ ಕಂಟೈನ್​​ಮೆಂಟ್ ಝೋನ್​ಗಳನ್ನಾಗಿ ವಿಂಗಡಿಸಿ, ಕೊರೊನಾ ನಿಯಂತ್ರಿಸಿ ಎಂದು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರರಂಗದಲ್ಲಿ 17 ವರ್ಷ ಕಳೆದ ಶುಭಾ ಪೂಂಜಾಗೆ ಈ ಗತಿಯೇ; ಮರುಗಿದ ಮಂಜು

ದೀದಿ ರಾಜಕಾರಣ ಅಪಾಯದ ಮಟ್ಟವನ್ನೂ ಮೀರಿದೆ, ಮೃತದೇಹಗಳನ್ನು ಮುಂದಿಟ್ಟು ಪಾಲಿಟಿಕ್ಸ್​ ಮಾಡೋದು ಅವರ ಹಳೇ ಅಭ್ಯಾಸ: ಪ್ರಧಾನಿ ಮೋದಿ

(covid 19 crisis is a Narendra Modi Made Disaster says Mamata Banerjee)

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ