AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೊಡೆತಕ್ಕೆ ಶೇಕಡಾ 30ರಷ್ಟು ಚಿನ್ನದ ಬೇಡಿಕೆ ಕುಸಿತ

ದೆಹಲಿ: ಮಹಾಮಾರಿ ಕೊರೊನಾ ಹೊಡೆತದಿಂದಾಗಿ ಆರ್ಥಿಕತೆ ಕುಸಿದಿತ್ತು. ಜನ ಜೀವನ ತತ್ತರಿಸಿತ್ತು. ಈ ನಡುವೆ ಗ್ರಾಹಕರ ಬೇಡಿಕೆ, ಬೆಲೆ ಏರಿಕೆಯಿಂದಾಗಿ ಹಳದಿ ಲೋಕ ಚಿನ್ನದ ಬೇಡಿಕೆ ಸಹ ಕುಸಿದಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಭಾರತದಲ್ಲಿ ಚಿನ್ನದ ಬೇಡಿಕೆ ಶೇಕಡಾ 30 ರಷ್ಟು ಕುಸಿದಿದೆ ಎಂದು ವಿಶ್ವ ಗೋಲ್ಡ್ ಕೌನ್ಸಿಲ್ (WGC) ವರದಿಯಲ್ಲಿ ತಿಳಿಸಿದೆ. ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದಲ್ಲಿ ಚಿನ್ನದ ಬೇಡಿಕೆ ಶೇ. 30ರಷ್ಟು ಕುಸಿದಿದೆ. ಈ ವರ್ಷದ ಕ್ಯೂ3 ತ್ರೈಮಾಸಿಕದಲ್ಲಿ ಭಾರತದಲ್ಲಿ ಚಿನ್ನದ ಬೇಡಿಕೆ […]

ಕೊರೊನಾ ಹೊಡೆತಕ್ಕೆ ಶೇಕಡಾ 30ರಷ್ಟು ಚಿನ್ನದ ಬೇಡಿಕೆ ಕುಸಿತ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on:Oct 30, 2020 | 6:59 PM

Share

ದೆಹಲಿ: ಮಹಾಮಾರಿ ಕೊರೊನಾ ಹೊಡೆತದಿಂದಾಗಿ ಆರ್ಥಿಕತೆ ಕುಸಿದಿತ್ತು. ಜನ ಜೀವನ ತತ್ತರಿಸಿತ್ತು. ಈ ನಡುವೆ ಗ್ರಾಹಕರ ಬೇಡಿಕೆ, ಬೆಲೆ ಏರಿಕೆಯಿಂದಾಗಿ ಹಳದಿ ಲೋಕ ಚಿನ್ನದ ಬೇಡಿಕೆ ಸಹ ಕುಸಿದಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಭಾರತದಲ್ಲಿ ಚಿನ್ನದ ಬೇಡಿಕೆ ಶೇಕಡಾ 30 ರಷ್ಟು ಕುಸಿದಿದೆ ಎಂದು ವಿಶ್ವ ಗೋಲ್ಡ್ ಕೌನ್ಸಿಲ್ (WGC) ವರದಿಯಲ್ಲಿ ತಿಳಿಸಿದೆ.

ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದಲ್ಲಿ ಚಿನ್ನದ ಬೇಡಿಕೆ ಶೇ. 30ರಷ್ಟು ಕುಸಿದಿದೆ. ಈ ವರ್ಷದ ಕ್ಯೂ3 ತ್ರೈಮಾಸಿಕದಲ್ಲಿ ಭಾರತದಲ್ಲಿ ಚಿನ್ನದ ಬೇಡಿಕೆ 86.6 ಟನ್ ಆಗಿದ್ದರೆ, ಕಳೆದ ವರ್ಷ ಇದೇ ತ್ರೈಮಾಸಿಕದಲ್ಲಿ 123.9 ಟನ್ ಆಗಿತ್ತು. ಮೌಲ್ಯದ ದೃಷ್ಟಿಯಿಂದ ಈ ತ್ರೈಮಾಸಿಕದಲ್ಲಿ ಚಿನ್ನದ ಬೇಡಿಕೆ ಶೇ. 4ರಷ್ಟು ಇಳಿಕೆಯಾಗಿದ್ದು, 2019ರ ಇದೇ ತ್ರೈಮಾಸಿಕದಲ್ಲಿ 41,300 ಕೋಟಿ ರೂ, ಈ ತ್ರೈಮಾಸಿಕದಲ್ಲಿ 39,510 ಕೋಟಿ ರೂ.ಗಳಾಗಿದೆ.

ಜುಲೈ-ಸೆಪ್ಟೆಂಬರ್ ತ್ರೈಮಾಸಿಕದ ಬೇಡಿಕೆ ಹಿಂದಿನ ತ್ರೈಮಾಸಿಕಕ್ಕಿಂತ ಹೆಚ್ಚಾಗಿತ್ತು. 64 ಟನ್‌ಗಳೊಂದಿಗೆ ಹಿಂದಿನ ತ್ರೈಮಾಸಿಕದಲ್ಲಿ ಬೇಡಿಕೆ ಶೇ. 70ರಷ್ಟು ಕುಸಿದಿತ್ತು. ಈ ತ್ರೈಮಾಸಿಕದಲ್ಲಿ ಹೆಚ್ಚಿನ ಬೇಡಿಕೆ ಇತ್ತು, ಕೊರೊನಾ ಲಾಕ್ ಡೌನ್, ಆಗಸ್ಟ್‌ನಲ್ಲಿ ಬೆಲೆ ಏರಿಕೆ ಖರೀದಿಗೆ ಹಿನ್ನೆಡೆಯಾಯಿತು ಎಂದು ಭಾರತದ ಡಬ್ಲ್ಯುಜಿಸಿ ವ್ಯವಸ್ಥಾಪಕ ನಿರ್ದೇಶಕ ಸೋಮಸುಂದರಂ ತಿಳಿಸಿದ್ದಾರೆ.

ಕರ್ನಾಟಕ ಜುಯೆಲರ್ಸ ಅಸೋಸಿಯೇಶನ್ ಅಧ್ಯಕ್ಷ ಮತ್ತು ಜೆ ಡಿ ಎಸ್ ನಾಯಕ, ಟಿ.ಎ. ಶರವಣ ಅವರ ಪ್ರಕಾರ, ಚಿನ್ನ ಖರೀದಿ ಮೇಲೆ ಕೊರೋನಾ ಭಾರಿ ಪರಿಣಾಮ ಬೀರಿದೆ. ಮಾರ್ಚ್​ ತಿಂಗಳಿನಲ್ಲಿ ಒಂದು ಗ್ರಾಂ ಚಿನ್ನದ ಬೆಲೆ ರೂ. 3,500 ಇತ್ತು. ಈಗ ಅದು ರೂ. 4,500 ಇದೆ. ಈ ಮಧ್ಯೆ ಚಿನ್ನದ ಬೆಲೆ ರೂ 5,000 ದಾಟಿ ಮೇಲೆ ಹೋಗಿತ್ತು. ಚಿನ್ನದ ಬೆಲೆಯಲ್ಲಿ ಸುಮಾರು 40 ಪ್ರತಿಶತ ಏರಿಕೆ ಕಂಡಿದ್ದೇವೆ. ಏಪ್ರಿಲ್ ತಿಂಗಳಿನಲ್ಲಿ ಅಕ್ಷಯ ತೃತೀಯಾ ಇತ್ತು. ಆ ಸಂದರ್ಭದಲ್ಲಿ ಪ್ರತಿ ವರ್ಷ ಚಿನ್ನದ ವ್ಯವಹಾರ ಚೆನ್ನಾಗಿ ಆಗುತ್ತಿತ್ತು. ಈ ಬಾರಿ ಲಾಕ್ ಡೌನ್ ನಿಂದಾಗಿ ನಮಗೆ ವ್ಯಾಪಾರ ಆಗಲಿಲ್ಲ. ಕಳೆದ ವರ್ಷಕ್ಕೆ ಹೋಲಿಸಿದರೆ ಖಂಡಿತವಾಗಿ 20-30 ಪ್ರತಿಶತ ವ್ಯಾಪಾರ ಕಡಿಮೆ ಆಗಿರೋದು ನಿಜ. ಅವರ ಪ್ರಕಾರ, ಅಕ್ಟೋಬರ್ ತಿಂಗಳಿನಲ್ಲಿ ವ್ಯಾಪಾರದಲ್ಲಿ ಚೇತರಿಕೆ ಕಂಡಿದೆ. ನವೆಂಬರ್ ನಲ್ಲಿ ಧನ್​ತೇರಸ್​ ಇದೆ, ಆಗ ವ್ಯಾಪಾರ ಜಾಸ್ತಿ ಆಗುವ ಸಾಧ್ಯತೆ ಇದೆ, ಎಂದು ಅವರು ಹೇಳಿದರು.

Published On - 5:27 pm, Fri, 30 October 20

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್