AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಂ ಐಸೊಲೇಶನ್​ನಲ್ಲಿರುವ ದೆಹಲಿಯ ಕೋವಿಡ್-19 ರೋಗಿಗಳು ಆನ್​ಲೈನ್​ನಲ್ಲಿ ಆಕ್ಸಿಜನ್​ಗೆ ಅಪ್ಲೈ ಮಾಡಬಹುದು

ದೆಹಲಿ ಸರ್ಕಾರವು ಮನೆಗಳಲ್ಲಿ ಪ್ರತ್ಯೇಕವಾಸದಲ್ಲಿರುವ (ಐಸೊಲೇಟ್) ರೋಗಿಗಳು ಸಹ ಆಕ್ಸಿಜನ್ ಸಿಲಿಂಡರ್​ಗಳಿಗೆ ದೆಹಲಿ ಸರ್ಕಾರದ ವೆಬ್​ಸೈಟ್​ ಮೂಲಕ ಅಪ್ಲೈ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ.

ಹೋಂ ಐಸೊಲೇಶನ್​ನಲ್ಲಿರುವ ದೆಹಲಿಯ ಕೋವಿಡ್-19 ರೋಗಿಗಳು ಆನ್​ಲೈನ್​ನಲ್ಲಿ ಆಕ್ಸಿಜನ್​ಗೆ ಅಪ್ಲೈ ಮಾಡಬಹುದು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on: May 06, 2021 | 8:50 PM

Share

ದೆಹಲಿ: ಕೋವಿಡ್-19 ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರವು ಮನೆಗಳಲ್ಲಿ ಪ್ರತ್ಯೇಕವಾಸದಲ್ಲಿರುವ (ಐಸೊಲೇಟ್) ರೋಗಿಗಳು ಸಹ ಆಕ್ಸಿಜನ್ ಸಿಲಿಂಡರ್​ಗಳಿಗೆ ದೆಹಲಿ ಸರ್ಕಾರದ ವೆಬ್​ಸೈಟ್​ ಮೂಲಕ ಅಪ್ಲೈ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದೆ. ಆಕ್ಸಿಜನ್ ಸಿಲಿಂಡರ್​ಗೆ ಬೇಡಿಕೆ ಸಲ್ಲಿಸುವ ರೋಗಿಗಳು ಫೋಟೊ ಐಡಿ, ಆಧಾರ್​ ಕಾರ್ಡ್​ ಮತ್ತು ಇತರ ವಿವರಗಳ ಜೊತೆಗೆ ಕೋವಿಡ್-19 ಪಾಸಿಟಿವ್ ವರದಿಯನ್ನು ಅಪ್​ಲೋಡ್ ಮಾಡಬೇಕು.

ದಾಸ್ತಾನು ಮತ್ತು ಲಭ್ಯತೆಗೆ ಅನುಗುಣವಾಗಿ ಜಿಲ್ಲಾಧಿಕಾರಿ ಕಚೇರಿಯು ದಿನಾಂಕ, ಸಮಯ ಮತ್ತು ಆಕ್ಸಿಜನ್ ಡೀಲರ್​ ವಿಳಾಸವಿರುವ ಪಾಸ್​ ನೀಡುತ್ತದೆ. ‘ಪ್ರತಿ ಜಿಲ್ಲೆಯಲ್ಲಿಯೂ ಆಕ್ಸಿಜನ್ ಸಿಲಿಂಡರ್​ಗಳನ್ನು ಭರ್ತಿ ಮಾಡಿಕೊಡುವ ಕೇಂದ್ರವನ್ನು ಸ್ಥಾಪಿಸಲಾಗುವುದು. ರಿಫಿಲ್ಲರ್​ಗಳಿಂದ ಅಗತ್ಯವಿರುವವರ ಮನೆಗಳಿಗೆ ಸಿಲಿಂಡರ್​ ಸರಬರಾಜು ಆಗುವ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳು ನಿಗಾವಣೆ ಮಾಡುತ್ತಾರೆ’ ಎಂದು ಕೋವಿಡ್ ದತ್ತಾಂಶ ನಿರ್ವಹಣಾ ಘಟಕದ ವಿಭಾಗೀಯ ಆಯುಕ್ತರ ಹೇಳಿಕೆ ತಿಳಿಸಿದೆ.

ಈ ಪ್ರಕ್ರಿಯೆಯನ್ನು ನಿರ್ವಹಿಸಲು ಜಿಲ್ಲಾಧಿಕಾರಿಗಳು ಅಗತ್ಯ ಪ್ರಮಾಣದ ಕಚೇರಿ ಸಿಬ್ಬಂದಿಯನ್ನು ಒದಗಿಸಬೇಕು. ಎಲ್ಲ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ, ಇ-ಪಾಸ್​ಗಳನ್ನು ನೀಡಬೇಕು. ಇದನ್ನು ಮೊದಲ ಆದ್ಯತೆಯಾಗಿ ತೆಗೆದುಕೊಳ್ಳಬೇಕು. ನಿರ್ದಿಷ್ಟ ಮರುಭರ್ತಿ ಕೇಂದ್ರಗಳಲ್ಲಿ ಡೀಲರ್​ಗಳು ಸಿಲಿಂಡರ್​ಗಳನ್ನು ಭರ್ತಿ ಮಾಡಿಕೊಳ್ಳಬೇಕು. ಈ ಅಂಶವನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು ಎಂದು ಆಯುಕ್ತರ ಆದೇಶವು ತಿಳಿಸಿದೆ

ಹೋಂ ಐಸೊಲೇಶನ್​ನಲ್ಲಿರುವ ಕೋವಿಡ್-19 ರೋಗಿಗಳಿಗೆ ಸೋಂಕು ದೃಢಪಟ್ಟ 24 ಗಂಟೆಗಳ ಒಳಗೆ ವೈದ್ಯರ ಜೊತೆಗೆ ಸಮಾಲೋಚನೆ ಸಿಗಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

ಪಿಎಂ-ಕೇರ್ಸ್​ ಅನುದಾನದಲ್ಲಿ ದೆಹಲಿಯ ಏಮ್ಸ್​ ಮತ್ತು ರಾಮ್​ ಮನೋಹರ್ ಲೋಹಿಯಾ ಆಸ್ಪತ್ರೆಗಳಲ್ಲಿ ಎರಡು ವೈದ್ಯಕೀಯ ಆಕ್ಸಿಜನ್ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು ಬುಧವಾರ ಹೇಳಿತ್ತು. ತಮಿಳುನಾಡಿನ ಕೊಯಮತ್ತೂರಿನಿಂದ ಏರ್​ಲಿಫ್ಟ್​ ಮಾಡಲಾದ ಘಟಕಗಳನ್ನು ದೆಹಲಿಯಲ್ಲಿ ಸ್ಥಾಪಿಸುವ ಕಾರ್ಯ ಯುದ್ಧೋಪಾದಿಯಲ್ಲಿ ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದೆಹಲಿಯಲ್ಲಿ ಬುಧವಾರ ಒಂದೇ ದಿನ 19,953 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, 338 ಮಂದಿ ಮೃತಪಟ್ಟಿದ್ದಾರೆ. 18,788 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್​ ಆಗಿದ್ದಾರೆ.

(Covid-19 Patients in Home Isolation Can Apply for Oxygen Cylinders Through Web Portal)

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ