AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು ಹೆಚ್ಚಳ; ಮುಂಬೈನಲ್ಲಿ ಶಾಪಿಂಗ್​ ಮಾಲ್​ ಪ್ರವೇಶಿಸಲು ಕೊವಿಡ್​ ನೆಗೆಟಿವ್​ ವರದಿ ಕಡ್ಡಾಯ

ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್​ಗಳು ಹೆಚ್ಚಾಗ್ತಿರುವ ಹಿನ್ನೆಲೆ, ಮುಂಬೈನಲ್ಲಿ ಶಾಪಿಂಗ್ ಮಾಲ್​ಗೆ ಹೋಗಲು ಕೊವಿಡ್​ ವರದಿ ಕಡ್ಡಾಯಗೊಳಿಸಲಾಗಿದೆ. ಆರ್​ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಆ್ಯಂಟಿಜೆನ್ ಟೆಸ್ಟ್ ವರದಿ ಇದ್ದರೆ ಮಾತ್ರ ಶಾಪಿಂಗ್​ ಮಾಲ್​ಗೆ ಪ್ರವೇಶ ನೀಡಲಾಗುತ್ತದೆ.

ಕೊರೊನಾ ಸೋಂಕು ಹೆಚ್ಚಳ; ಮುಂಬೈನಲ್ಲಿ ಶಾಪಿಂಗ್​ ಮಾಲ್​ ಪ್ರವೇಶಿಸಲು ಕೊವಿಡ್​ ನೆಗೆಟಿವ್​ ವರದಿ ಕಡ್ಡಾಯ
ಸಂಗ್ರಹ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Mar 19, 2021 | 2:26 PM

Share

ಮುಂಬೈ: ದೇಶಾದ್ಯಂತ ಕೊರೊನಾ ವೈರಸ್ ಎರಡನೇ ಅಲೆ ಭೀತಿ ವೇಗವಾಗಿ ವ್ಯಾಪಿಸುತ್ತಿದ್ದು, ಅತಿ ಹೆಚ್ಚು ಪ್ರಕರಣಗಳಿಗೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಜ್ಜೆ ಇಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್​ಗಳು ಹೆಚ್ಚಾಗ್ತಿರುವ ಹಿನ್ನೆಲೆ, ಮುಂಬೈನಲ್ಲಿ ಶಾಪಿಂಗ್ ಮಾಲ್​ಗೆ ಹೋಗಲು ಕೊವಿಡ್​ ವರದಿ ಕಡ್ಡಾಯಗೊಳಿಸಲಾಗಿದೆ. ಆರ್​ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಆ್ಯಂಟಿಜೆನ್ ಟೆಸ್ಟ್ ವರದಿ ಇದ್ದರೆ ಮಾತ್ರ ಶಾಪಿಂಗ್​ ಮಾಲ್​ಗೆ ಪ್ರವೇಶ ನೀಡಲಾಗುತ್ತದೆ. ಈ ನಿಯಮ ಮಾರ್ಚ್​ 22ರಿಂದ ಜಾರಿಯಾಗಲಿದ್ದು, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಬುಧವಾರ ಒಂದೇ ದಿನ 25 ಸಾವಿರ ಕೊರೊನಾ ಕೇಸ್​ಗಳು ದಾಖಲಾಗಿವೆ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ, ಮತ್ತೆ ಲಾಕ್​ಡೌನ್​ ಹೇರಿಕೆ ಆಗುವ ಭೀತಿ ಕೂಡ ಕಾಡಿದೆ.

ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಸಾಧ್ಯತೆ.. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಿದೆ. ಇದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಠಾಕ್ರೆ ಇತ್ತೀಚೆಗೆ ಅಭಿಪ್ರಾಯಪಟ್ಟಿದ್ದರು.

ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ. ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದ್ದರು. ಲಾಕ್​ಡೌನ್​ ಅಗತ್ಯವಿದೆಯೇ? ನೀವು ಜವಾಬ್ದಾರಿಯುತವಾಗಿ ವರ್ತಿಸಿ. ಲಾಕ್‌ಡೌನ್ ಬೇಡದವರು ಮಾಸ್ಕ್​ ಧರಿಸುತ್ತಾರೆ. ಲಾಕ್‌ಡೌನ್ ಬಯಸುವವರು ಮಾಸ್ಕ್​ ಧರಿಸುವುದಿಲ್ಲ. ಮಾಸ್ಕ್​ ಧರಿಸಿ, ಲಾಕ್​ಡೌನ್​ ಬೇಡವೆನ್ನಿ ಎಂದು ಉದ್ಧವ್​ ಕರೆ ನೀಡಿದ್ದರು.

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು 

ಕೊರೊನಾಕ್ಕೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗುಲಿದ ಭ್ರಷ್ಟಾಚಾರಿ ವೈರಸ್​ಗೆ ಮದ್ದು ಸಿಕ್ಕಿಲ್ಲ: ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು