AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕು ಹೆಚ್ಚಳ; ಮುಂಬೈನಲ್ಲಿ ಶಾಪಿಂಗ್​ ಮಾಲ್​ ಪ್ರವೇಶಿಸಲು ಕೊವಿಡ್​ ನೆಗೆಟಿವ್​ ವರದಿ ಕಡ್ಡಾಯ

ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್​ಗಳು ಹೆಚ್ಚಾಗ್ತಿರುವ ಹಿನ್ನೆಲೆ, ಮುಂಬೈನಲ್ಲಿ ಶಾಪಿಂಗ್ ಮಾಲ್​ಗೆ ಹೋಗಲು ಕೊವಿಡ್​ ವರದಿ ಕಡ್ಡಾಯಗೊಳಿಸಲಾಗಿದೆ. ಆರ್​ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಆ್ಯಂಟಿಜೆನ್ ಟೆಸ್ಟ್ ವರದಿ ಇದ್ದರೆ ಮಾತ್ರ ಶಾಪಿಂಗ್​ ಮಾಲ್​ಗೆ ಪ್ರವೇಶ ನೀಡಲಾಗುತ್ತದೆ.

ಕೊರೊನಾ ಸೋಂಕು ಹೆಚ್ಚಳ; ಮುಂಬೈನಲ್ಲಿ ಶಾಪಿಂಗ್​ ಮಾಲ್​ ಪ್ರವೇಶಿಸಲು ಕೊವಿಡ್​ ನೆಗೆಟಿವ್​ ವರದಿ ಕಡ್ಡಾಯ
ಸಂಗ್ರಹ ಚಿತ್ರ
Skanda
| Edited By: ಸಾಧು ಶ್ರೀನಾಥ್​|

Updated on: Mar 19, 2021 | 2:26 PM

Share

ಮುಂಬೈ: ದೇಶಾದ್ಯಂತ ಕೊರೊನಾ ವೈರಸ್ ಎರಡನೇ ಅಲೆ ಭೀತಿ ವೇಗವಾಗಿ ವ್ಯಾಪಿಸುತ್ತಿದ್ದು, ಅತಿ ಹೆಚ್ಚು ಪ್ರಕರಣಗಳಿಗೆ ಸಾಕ್ಷಿಯಾಗುತ್ತಿರುವ ಮಹಾರಾಷ್ಟ್ರ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವತ್ತ ಆರೋಗ್ಯ ಇಲಾಖೆ ಅಧಿಕಾರಿಗಳು ಹೆಜ್ಜೆ ಇಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್​ಗಳು ಹೆಚ್ಚಾಗ್ತಿರುವ ಹಿನ್ನೆಲೆ, ಮುಂಬೈನಲ್ಲಿ ಶಾಪಿಂಗ್ ಮಾಲ್​ಗೆ ಹೋಗಲು ಕೊವಿಡ್​ ವರದಿ ಕಡ್ಡಾಯಗೊಳಿಸಲಾಗಿದೆ. ಆರ್​ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಆ್ಯಂಟಿಜೆನ್ ಟೆಸ್ಟ್ ವರದಿ ಇದ್ದರೆ ಮಾತ್ರ ಶಾಪಿಂಗ್​ ಮಾಲ್​ಗೆ ಪ್ರವೇಶ ನೀಡಲಾಗುತ್ತದೆ. ಈ ನಿಯಮ ಮಾರ್ಚ್​ 22ರಿಂದ ಜಾರಿಯಾಗಲಿದ್ದು, ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಬುಧವಾರ ಒಂದೇ ದಿನ 25 ಸಾವಿರ ಕೊರೊನಾ ಕೇಸ್​ಗಳು ದಾಖಲಾಗಿವೆ. ಇದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲ, ಮತ್ತೆ ಲಾಕ್​ಡೌನ್​ ಹೇರಿಕೆ ಆಗುವ ಭೀತಿ ಕೂಡ ಕಾಡಿದೆ.

ಮಹಾರಾಷ್ಟ್ರದಲ್ಲಿ ಲಾಕ್​ಡೌನ್​ ಸಾಧ್ಯತೆ.. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಿದೆ. ಇದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಠಾಕ್ರೆ ಇತ್ತೀಚೆಗೆ ಅಭಿಪ್ರಾಯಪಟ್ಟಿದ್ದರು.

ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ. ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದ್ದರು. ಲಾಕ್​ಡೌನ್​ ಅಗತ್ಯವಿದೆಯೇ? ನೀವು ಜವಾಬ್ದಾರಿಯುತವಾಗಿ ವರ್ತಿಸಿ. ಲಾಕ್‌ಡೌನ್ ಬೇಡದವರು ಮಾಸ್ಕ್​ ಧರಿಸುತ್ತಾರೆ. ಲಾಕ್‌ಡೌನ್ ಬಯಸುವವರು ಮಾಸ್ಕ್​ ಧರಿಸುವುದಿಲ್ಲ. ಮಾಸ್ಕ್​ ಧರಿಸಿ, ಲಾಕ್​ಡೌನ್​ ಬೇಡವೆನ್ನಿ ಎಂದು ಉದ್ಧವ್​ ಕರೆ ನೀಡಿದ್ದರು.

ಇದನ್ನೂ ಓದಿ: ಕಾಲೇಜುಗಳಿಗೆ ಕಂಟಕವಾದ ಕೊರೊನಾ.. ಕಿಟ್ ಧರಿಸಿ ಮಹಾರಾಣಿ ಕಾಲೇಜಿನಲ್ಲಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು 

ಕೊರೊನಾಕ್ಕೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗುಲಿದ ಭ್ರಷ್ಟಾಚಾರಿ ವೈರಸ್​ಗೆ ಮದ್ದು ಸಿಕ್ಕಿಲ್ಲ: ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ