AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ

ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ
ಕೊವಿಡ್-19
TV9 Web
| Edited By: |

Updated on: Jun 30, 2022 | 8:57 AM

Share

ನವದೆಹಲಿ: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಸತತವಾಗಿ 10,000ಕ್ಕೂ ಹೆಚ್ಚು ಕೊವಿಡ್-19 ಪ್ರಕರಣಗಳು (COVID-19 Cases) ವರದಿಯಾಗಿವೆ. ಬೇರೆ ದೇಶಗಳಿಂದ ಬರುವ ಪ್ರತಿ ವಿಮಾನದಲ್ಲಿ ಇರುವ ಶೇ. 2ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ RT-PCR ಟೆಸ್ಟ್​ ಮಾಡಲು ಕೇಂದ್ರ ಸರ್ಕಾರ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ. ಈ ಮೂಲಕ ಕೊರೊನಾವೈರಸ್ (Coronavirus) ಪರೀಕ್ಷೆಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜೂನ್ 9ರಂದು ಕೇಂದ್ರ ಸರ್ಕಾರ ಹೊರಡಿಸಿದ ಕೊವಿಡ್-19 ಸಂದರ್ಭದಲ್ಲಿ ಪರಿಷ್ಕೃತ ಕಣ್ಗಾವಲು ಕಾರ್ಯತಂತ್ರದ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪತ್ರದ ಮೂಲಕ ಸಲಹೆಯನ್ನು ನೀಡಿದ್ದಾರೆ. ರಾಜ್ಯಗಳು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸಂಕ್ಷಿಪ್ತವಾಗಿ ತಿಳಿಸಿರುವ ರಾಜೇಶ್ ಭೂಷಣ್, ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ

ಎಲ್ಲಾ ಆರೋಗ್ಯ ಸೌಲಭ್ಯಗಳು ಇನ್​ಫ್ಲುಯೆನ್ಸ್​ ಲೈಕ್ ಇಲ್ನೆಸ್ (ಐಎಲ್ಐ) ಪ್ರಕರಣಗಳನ್ನು ವರದಿ ಮಾಡಬೇಕು. ಈ ಡೇಟಾವನ್ನು ವಿಶ್ಲೇಷಿಸಲು ಜಿಲ್ಲಾ ಕಣ್ಗಾವಲು ಅಧಿಕಾರಿ (ಡಿಎಸ್ಒ) ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ. ಶೇ. 5ರಷ್ಟು ಐಎಲ್ಐ ಪ್ರಕರಣಗಳನ್ನು ಆರ್​ಟಿ-ಪಿಸಿಆರ್ ಮೂಲಕ ಪರೀಕ್ಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?