AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ

ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ.

COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ
ಕೊವಿಡ್-19
TV9 Web
| Edited By: |

Updated on: Jun 30, 2022 | 8:57 AM

Share

ನವದೆಹಲಿ: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಸತತವಾಗಿ 10,000ಕ್ಕೂ ಹೆಚ್ಚು ಕೊವಿಡ್-19 ಪ್ರಕರಣಗಳು (COVID-19 Cases) ವರದಿಯಾಗಿವೆ. ಬೇರೆ ದೇಶಗಳಿಂದ ಬರುವ ಪ್ರತಿ ವಿಮಾನದಲ್ಲಿ ಇರುವ ಶೇ. 2ರಷ್ಟು ಪ್ರಯಾಣಿಕರಿಗೆ ರ್ಯಾಂಡಮ್ RT-PCR ಟೆಸ್ಟ್​ ಮಾಡಲು ಕೇಂದ್ರ ಸರ್ಕಾರ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆದೇಶಿಸಿದೆ. ಈ ಮೂಲಕ ಕೊರೊನಾವೈರಸ್ (Coronavirus) ಪರೀಕ್ಷೆಗಳನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜೂನ್ 9ರಂದು ಕೇಂದ್ರ ಸರ್ಕಾರ ಹೊರಡಿಸಿದ ಕೊವಿಡ್-19 ಸಂದರ್ಭದಲ್ಲಿ ಪರಿಷ್ಕೃತ ಕಣ್ಗಾವಲು ಕಾರ್ಯತಂತ್ರದ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಉಲ್ಲೇಖಿಸಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪತ್ರದ ಮೂಲಕ ಸಲಹೆಯನ್ನು ನೀಡಿದ್ದಾರೆ. ರಾಜ್ಯಗಳು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಸಂಕ್ಷಿಪ್ತವಾಗಿ ತಿಳಿಸಿರುವ ರಾಜೇಶ್ ಭೂಷಣ್, ಆರ್​​ಟಿ-ಪಿಸಿಆರ್ ಮೂಲಕ ಭಾರತಕ್ಕೆ ಒಳಬರುವ ಪ್ರತಿ ವಿಮಾನದಲ್ಲಿ ಶೇ. 2ರಷ್ಟು ಪ್ರಯಾಣಿಕರ ರ್ಯಾಂಡಮ್ ತಪಾಸಣೆಯನ್ನು ಒಳಗೊಂಡಿರುವ ಅಂತಾರಾಷ್ಟ್ರೀಯ ಪ್ರಯಾಣಿಕರ ಕಣ್ಗಾವಲು ವಹಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ: India Covid Update: ಭಾರತದಲ್ಲಿ ಇಂದು ಒಂದೇ ದಿನ 17,336 ಹೊಸ ಕೊವಿಡ್ ಕೇಸ್ ಪತ್ತೆ; ಕರ್ನಾಟಕದಲ್ಲಿ ಹೆಚ್ಚಿದ ಕೊರೊನಾ ಭೀತಿ

ಎಲ್ಲಾ ಆರೋಗ್ಯ ಸೌಲಭ್ಯಗಳು ಇನ್​ಫ್ಲುಯೆನ್ಸ್​ ಲೈಕ್ ಇಲ್ನೆಸ್ (ಐಎಲ್ಐ) ಪ್ರಕರಣಗಳನ್ನು ವರದಿ ಮಾಡಬೇಕು. ಈ ಡೇಟಾವನ್ನು ವಿಶ್ಲೇಷಿಸಲು ಜಿಲ್ಲಾ ಕಣ್ಗಾವಲು ಅಧಿಕಾರಿ (ಡಿಎಸ್ಒ) ಜವಾಬ್ದಾರರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ. ಶೇ. 5ರಷ್ಟು ಐಎಲ್ಐ ಪ್ರಕರಣಗಳನ್ನು ಆರ್​ಟಿ-ಪಿಸಿಆರ್ ಮೂಲಕ ಪರೀಕ್ಷಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್