AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19 Updates: ಭಾರತದಲ್ಲಿ ಹೊಸ ಕೊವಿಡ್ ರೂಪಾಂತರಿ ಬಿಎ 2.75 ಪತ್ತೆ; WHO ಮಾಹಿತಿ

BA 2.75 Covid Sub-Variant: ಯುರೋಪ್ ಮತ್ತು ಅಮೆರಿಕಾದಲ್ಲಿ BA.4 ಮತ್ತು BA.5 ಪ್ರಕರಣಗಳು ಕಾಣಿಸಿಕೊಂಡಿವೆ. ಭಾರತದಂತಹ ದೇಶಗಳಲ್ಲಿ BA 2.75ನ ಹೊಸ ಉಪ ವಂಶಾವಳಿಯನ್ನು ಸಹ ಪತ್ತೆಹಚ್ಚಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

COVID-19 Updates: ಭಾರತದಲ್ಲಿ ಹೊಸ ಕೊವಿಡ್ ರೂಪಾಂತರಿ ಬಿಎ 2.75 ಪತ್ತೆ; WHO ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 07, 2022 | 9:47 AM

Share

ನವದೆಹಲಿ: ಭಾರತದಲ್ಲಿ ಕೊವಿಡ್-19 ವೈರಸ್ ಒಮಿಕ್ರಾನ್ ರೂಪಾಂತರದ (Omicron variant) ಹೊಸ ಉಪ ವಂಶಾವಳಿಯಾಗಿರುವ ಬಿಎ 2.75 ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮಾಹಿತಿ ನೀಡಿದೆ. ಕಳೆದ ಎರಡು ವಾರಗಳಲ್ಲಿ ಜಾಗತಿಕವಾಗಿ ವರದಿಯಾದ ಕೊವಿಡ್-19 ಪ್ರಕರಣಗಳು ಸುಮಾರು ಶೇ. 30ರಷ್ಟು ಹೆಚ್ಚಾಗಿದೆ ಎಂದು ಡಬ್ಲುಹೆಚ್​ಓ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಯುರೋಪ್ ಮತ್ತು ಅಮೆರಿಕಾದಲ್ಲಿ BA.4 ಮತ್ತು BA.5 ಪ್ರಕರಣಗಳು ಕಾಣಿಸಿಕೊಂಡಿವೆ. ಭಾರತದಂತಹ ದೇಶಗಳಲ್ಲಿ BA 2.75ನ ಹೊಸ ಉಪ ವಂಶಾವಳಿಯನ್ನು ಸಹ ಪತ್ತೆಹಚ್ಚಲಾಗಿದೆ. ನಾವು ಆ ಬಗ್ಗೆ ಗಮನವಿಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ BA 2.75 ಮೊದಲ ಕೇಸ್ ಪತ್ತೆಯಾದ ನಂತರ ಇನ್ನೂ 10 ದೇಶಗಳಲ್ಲಿ ಈ ಉಪ-ರೂಪಾಂತರಿ ವೈರಸ್ ತಳಿ ಪತ್ತೆಯಾಗಿದೆ.

ಇದನ್ನೂ ಓದಿ: COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ

ಜೂನ್ 27ರಿಂದ ಜುಲೈ 3ರವರೆಗೆ ಜಗತ್ತಿನಾದ್ಯಂತ 4.6 ಮಿಲಿಯನ್ ಕೊವಿಡ್ ಪ್ರಕರಣಗಳು ವರದಿಯಾಗಿವೆ. ಇದು ಹಿಂದಿನ ವಾರದಂತೆಯೇ ಇದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ವಾರದ ಕೊವಿಡ್ ಸೋಂಕಿನಿಂದ ಸಾವಿನ ಸಂಖ್ಯೆ ಶೇ. 12ರಷ್ಟು ಕಡಿಮೆಯಾಗಿದೆ. ಈ ವಾರ 8100ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ.

ಒಟ್ಟು 83 ದೇಶಗಳಲ್ಲಿ ಬಿಎ.5 ತಳಿ ಪತ್ತೆಯಾಗಿದೆ. 73 ದೇಶಗಳಲ್ಲಿ ಪತ್ತೆಯಾಗಿರುವ ಬಿಎ.4 ಜಾಗತಿಕ ಮಟ್ಟದಲ್ಲಿಯೂ ಏರಿಕೆಯಾಗುತ್ತಿದ್ದರೂ ಬಿಎ.5ರಷ್ಟು ಏರಿಕೆ ಪ್ರಮಾಣ ಹೆಚ್ಚಾಗಿಲ್ಲ. ಭೂತಾನ್, ನೇಪಾಳ ಮತ್ತು ಬಾಂಗ್ಲಾದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ಕೇಸುಗಳ ಹೆಚ್ಚಳ ಕಂಡುಬಂದಿದೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು