AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

COVID-19 Updates: ಭಾರತದಲ್ಲಿ ಹೊಸ ಕೊವಿಡ್ ರೂಪಾಂತರಿ ಬಿಎ 2.75 ಪತ್ತೆ; WHO ಮಾಹಿತಿ

BA 2.75 Covid Sub-Variant: ಯುರೋಪ್ ಮತ್ತು ಅಮೆರಿಕಾದಲ್ಲಿ BA.4 ಮತ್ತು BA.5 ಪ್ರಕರಣಗಳು ಕಾಣಿಸಿಕೊಂಡಿವೆ. ಭಾರತದಂತಹ ದೇಶಗಳಲ್ಲಿ BA 2.75ನ ಹೊಸ ಉಪ ವಂಶಾವಳಿಯನ್ನು ಸಹ ಪತ್ತೆಹಚ್ಚಲಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

COVID-19 Updates: ಭಾರತದಲ್ಲಿ ಹೊಸ ಕೊವಿಡ್ ರೂಪಾಂತರಿ ಬಿಎ 2.75 ಪತ್ತೆ; WHO ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 07, 2022 | 9:47 AM

Share

ನವದೆಹಲಿ: ಭಾರತದಲ್ಲಿ ಕೊವಿಡ್-19 ವೈರಸ್ ಒಮಿಕ್ರಾನ್ ರೂಪಾಂತರದ (Omicron variant) ಹೊಸ ಉಪ ವಂಶಾವಳಿಯಾಗಿರುವ ಬಿಎ 2.75 ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಮಾಹಿತಿ ನೀಡಿದೆ. ಕಳೆದ ಎರಡು ವಾರಗಳಲ್ಲಿ ಜಾಗತಿಕವಾಗಿ ವರದಿಯಾದ ಕೊವಿಡ್-19 ಪ್ರಕರಣಗಳು ಸುಮಾರು ಶೇ. 30ರಷ್ಟು ಹೆಚ್ಚಾಗಿದೆ ಎಂದು ಡಬ್ಲುಹೆಚ್​ಓ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಯುರೋಪ್ ಮತ್ತು ಅಮೆರಿಕಾದಲ್ಲಿ BA.4 ಮತ್ತು BA.5 ಪ್ರಕರಣಗಳು ಕಾಣಿಸಿಕೊಂಡಿವೆ. ಭಾರತದಂತಹ ದೇಶಗಳಲ್ಲಿ BA 2.75ನ ಹೊಸ ಉಪ ವಂಶಾವಳಿಯನ್ನು ಸಹ ಪತ್ತೆಹಚ್ಚಲಾಗಿದೆ. ನಾವು ಆ ಬಗ್ಗೆ ಗಮನವಿಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ BA 2.75 ಮೊದಲ ಕೇಸ್ ಪತ್ತೆಯಾದ ನಂತರ ಇನ್ನೂ 10 ದೇಶಗಳಲ್ಲಿ ಈ ಉಪ-ರೂಪಾಂತರಿ ವೈರಸ್ ತಳಿ ಪತ್ತೆಯಾಗಿದೆ.

ಇದನ್ನೂ ಓದಿ: COVID-19: ಭಾರತದೊಳಗೆ ಬರುವ ಪ್ರತಿ ವಿಮಾನದ ಶೇ. 2ರಷ್ಟು ಜನರಿಗೆ ರ್ಯಾಂಡಮ್ ಕೊವಿಡ್ ಟೆಸ್ಟ್​ ಕಡ್ಡಾಯ

ಜೂನ್ 27ರಿಂದ ಜುಲೈ 3ರವರೆಗೆ ಜಗತ್ತಿನಾದ್ಯಂತ 4.6 ಮಿಲಿಯನ್ ಕೊವಿಡ್ ಪ್ರಕರಣಗಳು ವರದಿಯಾಗಿವೆ. ಇದು ಹಿಂದಿನ ವಾರದಂತೆಯೇ ಇದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ವಾರದ ಕೊವಿಡ್ ಸೋಂಕಿನಿಂದ ಸಾವಿನ ಸಂಖ್ಯೆ ಶೇ. 12ರಷ್ಟು ಕಡಿಮೆಯಾಗಿದೆ. ಈ ವಾರ 8100ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ.

ಒಟ್ಟು 83 ದೇಶಗಳಲ್ಲಿ ಬಿಎ.5 ತಳಿ ಪತ್ತೆಯಾಗಿದೆ. 73 ದೇಶಗಳಲ್ಲಿ ಪತ್ತೆಯಾಗಿರುವ ಬಿಎ.4 ಜಾಗತಿಕ ಮಟ್ಟದಲ್ಲಿಯೂ ಏರಿಕೆಯಾಗುತ್ತಿದ್ದರೂ ಬಿಎ.5ರಷ್ಟು ಏರಿಕೆ ಪ್ರಮಾಣ ಹೆಚ್ಚಾಗಿಲ್ಲ. ಭೂತಾನ್, ನೇಪಾಳ ಮತ್ತು ಬಾಂಗ್ಲಾದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ಕೇಸುಗಳ ಹೆಚ್ಚಳ ಕಂಡುಬಂದಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ