AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ 15-18ವರ್ಷದವರಿಗೆ ಕೊರೊನಾ ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100 ಪೂರ್ಣ

ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರು ಮತ್ತು 60ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್​ ಡೋಸ್​ ನೀಡುವ ಅಭಿಯಾನವೂ ಶುರುವಾಗಿದೆ.

ತಮಿಳುನಾಡಿನಲ್ಲಿ 15-18ವರ್ಷದವರಿಗೆ ಕೊರೊನಾ ಲಸಿಕೆ ಮೊದಲ ಡೋಸ್​ ನೀಡಿಕೆ ಶೇ.100 ಪೂರ್ಣ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jan 18, 2022 | 3:57 PM

Share

ತಮಿಳುನಾಡಿನಲ್ಲಿ 15-18 ವರ್ಷದ ಎಲ್ಲ ಫಲಾನುಭವಿಗಳಿಗೂ ಕೊರೊನಾ ಲಸಿಕೆ ಮೊದಲ ಡೋಸ್ ನೀಡಿಕೆ ಪೂರ್ಣಗೊಂಡಿದೆ ಎಂದು ಅಲ್ಲಿನ ಆರೋಗ್ಯ ಸಚಿವ ಮಾ. ಸುಬ್ರಹ್ಮಣಿಯನ್​ ತಿಳಿಸಿದ್ದಾರೆ. ಜನವರಿ 3ರಿಂದ ಶುರುವಾರ 15-18ವರ್ಷದವರಿಗೆ ಕೊರೊನಾ ಲಸಿಕೆ ಅಭಿಯಾನದಲ್ಲಿ ಶೇ.100ರಷ್ಟು ಮೊದಲ ಡೋಸ್ ನೀಡಿಕೆಯಾಗಿದೆ.  ಹೀಗೆ ಮೊದಲ ಡೋಸ್​ ಪಡೆದವರು 28 ದಿನಗಳ ಬಳಿಕ ಲಸಿಕೆಯ ಇನ್ನೊಂದು ಡೋಸ್​ ಪಡೆಯಲಿದ್ದಾರೆ. ತಮಿಳುನಾಡಿನಲ್ಲಿ 15-18ವರ್ಷದ 33,46,000 ಫಲಾನುಭವಿ ಮಕ್ಕಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಜನವರಿ 3ರಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್​ ಅವರು ಈ ವಯಸ್ಸಿನವರಿಗೆ ಲಸಿಕೆ ಹಾಕುವ ಅಭಿಯಾನಕ್ಕೆ, ಪೊರುರ್​ನ ಹೆಣ್ಣುಮಕ್ಕಳ ಸರ್ಕಾರಿ ಉನ್ನತ ಮಾಧ್ಯಮಿಕ ಶಾಲೆಯಲ್ಲಿ ಚಾಲನೆ ನೀಡಿದ್ದರು. 

ದೇಶದಲ್ಲಿ ಒಮಿಕ್ರಾನ್​ ಏರಿಕೆಯಾಗಲು ಶುರುವಾದ ಬೆನ್ನಲ್ಲೇ 15-18ವಯಸ್ಸಿನವರಿಗೆ ಕೊರೊನಾ ಲಸಿಕೆ ನೀಡಲು ಶುರು ಮಾಡುವುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದರು. ಹಾಗೇ, ಆರೋಗ್ಯ ಕಾರ್ಯಕರ್ತರು, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರು ಮತ್ತು 60ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್​ ಡೋಸ್​ ನೀಡುವ ಅಭಿಯಾನವೂ ಶುರುವಾಗಿದೆ. 15-18 ವಯಸ್ಸಿನವರ ವಿಭಾಗದಲ್ಲಿ ಯಾರೆಲ್ಲ 2007 ಮತ್ತು ಅದರ ಮೊದಲಿನ ಇಸ್ವಿಗಳಲ್ಲಿ ಜನಿಸಿದ್ದಾರೋ, ಅವರಿಗೆಲ್ಲ ಕೊರೊನಾ ಲಸಿಕೆ ನೀಡಲಾಗುತ್ತಿದೆ.  ಶಾಲೆಗಳಿಗೇ ಬಂದು ಮಕ್ಕಳಿಗೆ ಕೊವ್ಯಾಖ್ಸಿನ್ ಲಸಿಕೆ ನೀಡಲಾಗುತ್ತಿದ್ದು, ಈ ಹಂತದ ಅಭಿಯಾನ ವೇಗವಾಗಿ ಸಾಗುತ್ತಿದೆ.

ಇನ್ನೊಂದೆಡೆ ತಮಿಳುನಾಡಿನಲ್ಲಿ ಕೊರೊನಾ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜನವರಿ 31ರವರೆಗೂ ಶಾಲೆಗಳಿಗೆ ರಜೆ ಘೋಷಿಸಿ, ಆದೇಶ ಹೊರಡಿಸಿದೆ. ಹಾಗೇ, ಜನವರಿ 31ರವರೆಗೂ ನೈಟ್ ಕರ್ಫ್ಯೂ ಕೂಡ ಮುಂದುವರಿಸಲಾಗುವುದು ಎಂದೂ ಹೇಳಿದೆ. ಅದರ ಅನ್ವಯ ತಮಿಳುನಾಡಿನಲ್ಲಿ ಸೋಮವಾರದಿಂದ ಶನಿವಾರದವರೆಗೆ ಪ್ರತಿದಿನ ರಾತ್ರಿ 10 ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ನೈಟ್​ಕರ್ಫ್ಯೂ ಇರಲಿದ್ದು, ಭಾನುವಾರ ಸಂಪೂರ್ಣ ಲಾಕ್​ಡೌನ್​ ಇರಲಿದೆ.

ಇದನ್ನೂ ಓದಿJammu Kashmir: ಜಮ್ಮು ಕಾಶ್ಮೀರದಲ್ಲಿ ಹಿಮಪಾತದಲ್ಲಿ ಸಿಲುಕಿದ್ದ 14 ಜನರನ್ನು ರಕ್ಷಿಸಿದ ಭಾರತೀಯ ಸೇನೆ

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ