AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ

ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿಗಳು ಲಸಿಕೆಯ ತುರ್ತು ಬಳಕೆಗೆ ಅರ್ಜಿ ಸಲ್ಲಿಸಿವೆ.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ
ಕೊವಿಡ್​ ಲಸಿಕೆಯ ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 08, 2020 | 6:17 PM

Share

ದೆಹಲಿ: ಈಗಾಗಲೇ ದೇಶದಾದ್ಯಂತ ಕೊರೊನಾ ಲಸಿಕೆಯ ಬಳಕೆಗೆ ಸಂಬಂಧಪಟ್ಟಂತೆ ಹಲವು ಪ್ರಯೋಗಗಳು ನಡೆದಿದ್ದು, ಬ್ರಿಟನ್​ನಂತಹ ರಾಷ್ಟ್ರಗಳಲ್ಲಿ ಮೊದಲ ಹಂತದ ಲಸಿಕೆಯ ಬಳಕೆ ಪ್ರಾರಂಭವಾಗಿದೆ.

ಇನ್ನು ಕೆಲವೇ ವಾರದಲ್ಲಿ ಭಾರತ ಕೂಡ ಲಸಿಕೆ ಬಳಕೆಗೆ ಒಪ್ಪಿಗೆ ನೀಡಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಮೂರು ಕಂಪನಿಗಳ ಲಸಿಕೆಯನ್ನು ರೆಗ್ಯುಲೇಟರಿ ಒಪ್ಪಿಗೆಯ ಪರಿಗಣನೆಗೆ ತೆಗೆದುಕೊಂಡಿದ್ದು, ಮೂರು ಕಂಪನಿಗೂ ಒಪ್ಪಿಗೆ ನೀಡಬಹುದು, ಇಲ್ಲವೇ ಯಾವುದಾದರೊಂದು ಕಂಪನಿಯ ಲಸಿಕೆ ಬಳಕೆಗೆ ಒಪ್ಪಿಗೆ ನೀಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ.

ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿಗಳು ಲಸಿಕೆಯ ತುರ್ತು ಬಳಕೆಗೆ ಅರ್ಜಿ ಸಲ್ಲಿಸಿವೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಲಸಿಕೆ ಉತ್ಪಾದಕರೊಂದಿಗೆ ಚರ್ಚಿಸಿದ್ದು, ಆರು ಕಂಪನಿಗಳ ಲಸಿಕೆಗಳು ಪ್ರಯೋಗದ ಹಂತದಲ್ಲಿವೆ ಎಂದು ತಿಳಿಸಲಾಗಿದೆ.

ವಿಜ್ಞಾನಿಗಳಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ದೊಡ್ಡಮಟ್ಟದಲ್ಲಿ ಲಸಿಕೆ ಉತ್ಪಾದನೆ ಮಾಡಲಾಗುತ್ತದೆ ಮತ್ತು ಉತ್ಪಾದನೆ ಹೆಚ್ಚಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಡಿಮೆ ಅವಧಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ ಎಂದು ದೇಶದಲ್ಲಿ ಕೊರೊನಾ ಸ್ಥಿತಿಗತಿ, ಲಸಿಕೆಯ ಬಗ್ಗೆ ಕೇಂದ್ರ ಸರ್ಕಾರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ ಡಾಕ್ಟರ್ ವಿ.ಕೆ.ಪೌಲ್‌ ಮತ್ತು ಕೇಂದ್ರದ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಜಂಟಿ ಹೇಳಿಕೆ ನೀಡಿದ್ದಾರೆ.

ಕೊರೊನಾಗೆ ತಿಲಾಂಜಲಿ! ಇನ್ನು 9 ತಿಂಗಳಲ್ಲಿ ಭಾರತದಲ್ಲೂ ಸಿಗಲಿದೆ ಕೊರೊನಾ ಲಸಿಕೆ

Follow Us
preethi shettigar
preethi shettigar
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?