AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ

ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿಗಳು ಲಸಿಕೆಯ ತುರ್ತು ಬಳಕೆಗೆ ಅರ್ಜಿ ಸಲ್ಲಿಸಿವೆ.

ಭಾರತಕ್ಕೂ ಬರಲಿದೆ ಕೊರೊನಾ ಸೋಂಕು ನಿರೋಧಕ ಲಸಿಕೆ
ಕೊವಿಡ್​ ಲಸಿಕೆಯ ಸಾಂದರ್ಭಿಕ ಚಿತ್ರ
preethi shettigar
| Edited By: |

Updated on: Dec 08, 2020 | 6:17 PM

Share

ದೆಹಲಿ: ಈಗಾಗಲೇ ದೇಶದಾದ್ಯಂತ ಕೊರೊನಾ ಲಸಿಕೆಯ ಬಳಕೆಗೆ ಸಂಬಂಧಪಟ್ಟಂತೆ ಹಲವು ಪ್ರಯೋಗಗಳು ನಡೆದಿದ್ದು, ಬ್ರಿಟನ್​ನಂತಹ ರಾಷ್ಟ್ರಗಳಲ್ಲಿ ಮೊದಲ ಹಂತದ ಲಸಿಕೆಯ ಬಳಕೆ ಪ್ರಾರಂಭವಾಗಿದೆ.

ಇನ್ನು ಕೆಲವೇ ವಾರದಲ್ಲಿ ಭಾರತ ಕೂಡ ಲಸಿಕೆ ಬಳಕೆಗೆ ಒಪ್ಪಿಗೆ ನೀಡಲಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ಮೂರು ಕಂಪನಿಗಳ ಲಸಿಕೆಯನ್ನು ರೆಗ್ಯುಲೇಟರಿ ಒಪ್ಪಿಗೆಯ ಪರಿಗಣನೆಗೆ ತೆಗೆದುಕೊಂಡಿದ್ದು, ಮೂರು ಕಂಪನಿಗೂ ಒಪ್ಪಿಗೆ ನೀಡಬಹುದು, ಇಲ್ಲವೇ ಯಾವುದಾದರೊಂದು ಕಂಪನಿಯ ಲಸಿಕೆ ಬಳಕೆಗೆ ಒಪ್ಪಿಗೆ ನೀಡುವ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದೆ.

ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ, ಭಾರತ್ ಬಯೋಟೆಕ್ ಕಂಪನಿಗಳು ಲಸಿಕೆಯ ತುರ್ತು ಬಳಕೆಗೆ ಅರ್ಜಿ ಸಲ್ಲಿಸಿವೆ. ಸದ್ಯ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಲಸಿಕೆ ಉತ್ಪಾದಕರೊಂದಿಗೆ ಚರ್ಚಿಸಿದ್ದು, ಆರು ಕಂಪನಿಗಳ ಲಸಿಕೆಗಳು ಪ್ರಯೋಗದ ಹಂತದಲ್ಲಿವೆ ಎಂದು ತಿಳಿಸಲಾಗಿದೆ.

ವಿಜ್ಞಾನಿಗಳಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ದೊಡ್ಡಮಟ್ಟದಲ್ಲಿ ಲಸಿಕೆ ಉತ್ಪಾದನೆ ಮಾಡಲಾಗುತ್ತದೆ ಮತ್ತು ಉತ್ಪಾದನೆ ಹೆಚ್ಚಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಡಿಮೆ ಅವಧಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ ಎಂದು ದೇಶದಲ್ಲಿ ಕೊರೊನಾ ಸ್ಥಿತಿಗತಿ, ಲಸಿಕೆಯ ಬಗ್ಗೆ ಕೇಂದ್ರ ಸರ್ಕಾರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ ಡಾಕ್ಟರ್ ವಿ.ಕೆ.ಪೌಲ್‌ ಮತ್ತು ಕೇಂದ್ರದ ಆರೋಗ್ಯ ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಜಂಟಿ ಹೇಳಿಕೆ ನೀಡಿದ್ದಾರೆ.

ಕೊರೊನಾಗೆ ತಿಲಾಂಜಲಿ! ಇನ್ನು 9 ತಿಂಗಳಲ್ಲಿ ಭಾರತದಲ್ಲೂ ಸಿಗಲಿದೆ ಕೊರೊನಾ ಲಸಿಕೆ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ