AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covishield ಕೊವಿಶೀಲ್ಡ್ ಡೋಸ್ ಅಂತರ 12-16 ರಿಂದ 8-16 ವಾರಗಳಿಗೆ ಇಳಿಕೆ

ಕೊವಿಶೀಲ್ಡ್ ಮೊದಲ ಡೋಸ್ ನಂತರ 8- 16 ವಾರಗಳ ನಡುವೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡುವಂತೆ ಭಾರತದ ಉನ್ನತ ಸಂಸ್ಥೆ ಎನ್‌ಟಿಜಿಐ ಶಿಫಾರಸು ಮಾಡಿದೆ

Covishield ಕೊವಿಶೀಲ್ಡ್ ಡೋಸ್ ಅಂತರ 12-16 ರಿಂದ 8-16 ವಾರಗಳಿಗೆ ಇಳಿಕೆ
ಕೊವಿಶೀಲ್ಡ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Mar 20, 2022 | 5:59 PM

ದೆಹಲಿ: ಮೊದಲ ಡೋಸ್ ನಂತರ 8- 16 ವಾರಗಳ ನಡುವೆ ಎರಡನೇ ಡೋಸ್ ಕೊವಿಡ್-19 (Covid 19) ಲಸಿಕೆ ಕೊವಿಶೀಲ್ಡ್ (Covishield Dose) ಅನ್ನು ನೀಡುವಂತೆ ಭಾರತದ ಉನ್ನತ ಸಂಸ್ಥೆ ಎನ್‌ಟಿಜಿಐ ಶಿಫಾರಸು ಮಾಡಿದೆ ಎಂದು ಪಿಟಿಐಗೆ ನಿಕಟವಾಗಿರುವ ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. ಪ್ರಸ್ತುತ, ಕೊವಿಶೀಲ್ಡ್‌ನ ಎರಡನೇ ಡೋಸ್ ಅನ್ನು 12-16 ವಾರಗಳ ರ ನಡುವೆ ನೀಡಲಾಗುತ್ತದೆ. ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (NTAGI) ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯನ್ನು ಇನ್ನೂ ಸೂಚಿಸಿಲ್ಲ, ಅದರ ಎರಡನೇ ಡೋಸ್ ಅನ್ನು ಮೊದಲ ಡೋಸ್ ನೀಡಿದ 28 ದಿನಗಳ ನಂತರ ನೀಡಲಾಗುತ್ತದೆ. “ಎನ್‌ಟಿಎಜಿಐನ ಇತ್ತೀಚಿನ ಶಿಫಾರಸುಗಳು ಪ್ರೋಗ್ರಾಮ್ಯಾಟಿಕ್ ಡೇಟಾದಿಂದ ಪಡೆದ ಇತ್ತೀಚಿನ ಜಾಗತಿಕ ವೈಜ್ಞಾನಿಕ ಪುರಾವೆಗಳನ್ನು ಆಧರಿಸಿದೆ” ಎಂದು ಅಧಿಕೃತ ಮೂಲವೊಂದು ತಿಳಿಸಿದೆ.  “ಅದರ ಪ್ರಕಾರ, ಕೊವಿಶೀಲ್ಡ್‌ನ ಎರಡನೇ ಡೋಸ್ ಅನ್ನು ಎಂಟು ವಾರಗಳ ನಂತರ ನೀಡಿದಾಗ, 12 ರಿಂದ 16 ವಾರಗಳ ಮಧ್ಯಂತರದಲ್ಲಿ ನಿರ್ವಹಿಸಿದಾಗ ಉತ್ಪತ್ತಿಯಾಗುವ ಪ್ರತಿಕಾಯ ಪ್ರತಿಕ್ರಿಯೆಯು ಬಹುತೇಕ ಹೋಲುತ್ತದೆ” ಎಂದು ಮೂಲವು ವಿವರಿಸಿದೆ.  ಹಲವಾರು ದೇಶಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಉಳಿದ ಆರರಿಂದ ಏಳು ಕೋಟಿ ವ್ಯಕ್ತಿಗಳಿಗೆ ಕೊವಿಶೀಲ್ಡ್‌ನ ಎರಡನೇ ಡೋಸ್‌ನ ವೇಗವರ್ಧಿತ ನೀಡಿಕೆಗೆ ಈ ನಿರ್ಧಾರವು ಕಾರಣವಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಎನ್‌ಟಿಎಜಿಐ ಶಿಫಾರಸುಗಳ ಆಧಾರದ ಮೇಲೆ ಸರ್ಕಾರವು ಮೇ 13, 2021 ರಂದು ಕ`ವಿಶೀಲ್ಡ್ ಲಸಿಕೆಯ ಮೊದಲ ಮತ್ತು ಎರಡನೇ ಡೋಸ್‌ಗಳ ನಡುವಿನ ಅಂತರವನ್ನು 6-8 ವಾರಗಳಿಂದ 12-16 ವಾರಗಳವರೆಗೆ ವಿಸ್ತರಿಸಿತ್ತು ಎನ್‌ಟಿಎಜಿಐ ದೇಶದಲ್ಲಿ ಲಸಿಕೆ-ತಡೆಗಟ್ಟಬಹುದಾದ ರೋಗಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಪ್ರತಿರಕ್ಷಣೆ ಸೇವೆಗಳ ಕುರಿತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಮಾರ್ಗದರ್ಶನ ಮತ್ತು ಸಲಹೆಯನ್ನು ನೀಡುತ್ತದೆ.

ಇದನ್ನೂ ಓದಿ: ಕೊವಿಡ್ ಪ್ರಕರಣಗಳು ಜಾಗತಿಕವಾಗಿ ಹೆಚ್ಚಾಗುತ್ತಿದ್ದಂತೆ ಒಮಿಕ್ರಾನ್ ಬಗ್ಗೆ ಇರುವ ತಪ್ಪು ಮಾಹಿತಿಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಕಳವಳ

ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
Live: ರಕ್ಷಣಾ ಇಲಾಖೆಯಿಂದ ಸುದ್ದಿಗೋಷ್ಠಿ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ದೇಶಕ್ಕಾಗಿ ಏನು ಮಾಡಿದರೂ ಕಮ್ಮಿ: ಜಮೀರ್ ಅಹ್ಮದ್, ಸಚಿವ
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ನೋಂದಣಿಗೆ ಬಂದವರಲ್ಲಿ ಯುವತಿಯರು ಮತ್ತು ವಯಸ್ಕರೂ ಶಾಮೀಲು!
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ಪ್ರಧಾನಿ ಮೋದಿ ತೆಗೆದುಕೊಳ್ಳುತ್ತಿರುವ ಕ್ರಮಗಳ ಜೊತೆಗಿದ್ದೇವೆ: ಮುಸಲ್ಮಾನರು
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ದಿನೇದಿನೆ ಅತೀವ ಹಾನಿಗೊಳಗಾಗುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕಾಶ್ಮೀರ ಗಡಿಯಲ್ಲಿ ಉಗ್ರ ನೆಲೆಗಳು ಉಡೀಸ್: ಸೇನೆಯ ಅಧಿಕೃತ ವಿಡಿಯೋ ಇಲ್ಲಿದೆ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಕೇಂದ್ರ ಗೃಹ ಇಲಾಖೆಯಿಂದ ಕರ್ನಾಟಕಕ್ಕೂ ಎಚ್ಚರಿಕೆ ಸೂಚನೆ ಬಂದಿದೆ: ಡಿಕೆಶಿ
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಇವತ್ತು ಸಾಯಂಕಾಲ ಸಿಎಂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ: ಪರಮೇಶ್ವರ್
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ
ಮನೆ ಹಾಳಾದರೂ ಪಾಕಿಸ್ತಾನಕ್ಕೆ ಸದ್ಬುದ್ಧಿ ಬರಲಿ ಎನ್ನುವ ಮನೆ ಯಜಮಾನಿ