AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ ಎಂದೂ ಹೇಳಿದ್ದರು.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ
ಕೊವಿಡ್​ 19 ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 19, 2021 | 10:51 AM

Share

2-18ವರ್ಷದವರಿಗೆ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್​ನಿಂದ ಲಸಿಕೆ ನೀಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಪುಣೆ) ನಿರ್ದೇಶಕಿ ಪ್ರಿಯಾ ಅಬ್ರಾಹಂ ಹೇಳಿದ್ದಾರೆ. ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಸಂಬಂಧ ಸದ್ಯ 2 ಮತ್ತು 3ನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಯುತ್ತಿದ್ದು, ಅದು ಸಂಪೂರ್ಣಗೊಂಡ ನಂತರ ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ಪ್ರಿಯಾ ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಕ್ಲಿನಿಕಲ್​ ಪ್ರಯೋಗಗಳ ಫಲಿತಾಂಶ ಶೀಘ್ರವೇ ಬರುತ್ತದೆ ಎಂಬ ಆಶಯವಿದೆ. ಆ ಫಲಿತಾಂಶವನ್ನು ರೆಗ್ಯೂಲೇಟರ್ಸ್​​​ಗಳಿಗೆ ನೀಡಲಾಗುವುದು. ಸೆಪ್ಟೆಂಬರ್​​ ಅಥವಾ ಸೆಪ್ಟೆಂಬರ್​​ ನಂತರ ಮಕ್ಕಳಿಗೆ ಖಂಡಿತವಾಗಿ ವ್ಯಾಕ್ಸಿನ್​ ಸಿಗುತ್ತದೆ. ಮಕ್ಕಳಿಗೆ ಕೊವ್ಯಾಕ್ಸಿನ್​ ಲಸಿಕೆ ನೀಡಲಾಗುತ್ತದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಸೆಪ್ಟೆಂಬರ್​ನಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದ್ದರು. ಇನ್ನು ಕೇಂದ್ರ ಆರೋಗ್ಯ ಸಚಿವ ಮನ್​​ಸುಖ್​ ಮಾಂಡವಿಯಾ ಕೂಡ, ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಅಭಿಯಾನ ಶೀಘ್ರವೇ ಶುರುವಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೆಷೆಲ್​​ ಶೇಂಗಾ ಭಾಜಿ ಮಾಡುವ ವಿಧಾನ ಗೊತ್ತೇ? ಕೇವಲ 5 ನಿಮಿಷ ಸಾಕು ದಿಢೀರ್​ ತಿಂಡಿ ತಯಾರಿಸಲು

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

Published On - 10:48 am, Thu, 19 August 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ