AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ ಎಂದೂ ಹೇಳಿದ್ದರು.

‘ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಕೊವಿಡ್​ 19 ಲಸಿಕೆ ನೀಡಬಹುದು‘: ಐಸಿಎಂಆರ್​ -ಎನ್​​ಐವಿ ನಿರ್ದೇಶಕಿ
ಕೊವಿಡ್​ 19 ಲಸಿಕೆ ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 19, 2021 | 10:51 AM

Share

2-18ವರ್ಷದವರಿಗೆ ಮುಂದಿನ ತಿಂಗಳು ಅಂದರೆ ಸೆಪ್ಟೆಂಬರ್​ನಿಂದ ಲಸಿಕೆ ನೀಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR)ಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ (ಪುಣೆ) ನಿರ್ದೇಶಕಿ ಪ್ರಿಯಾ ಅಬ್ರಾಹಂ ಹೇಳಿದ್ದಾರೆ. ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಸಂಬಂಧ ಸದ್ಯ 2 ಮತ್ತು 3ನೇ ಹಂತದ ಕ್ಲಿನಿಕಲ್​ ಪ್ರಯೋಗ ನಡೆಯುತ್ತಿದ್ದು, ಅದು ಸಂಪೂರ್ಣಗೊಂಡ ನಂತರ ಸೆಪ್ಟೆಂಬರ್​​ನಿಂದ ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ಪ್ರಿಯಾ ತಿಳಿಸಿದ್ದಾರೆ.

ಈಗ ನಡೆಯುತ್ತಿರುವ ಕ್ಲಿನಿಕಲ್​ ಪ್ರಯೋಗಗಳ ಫಲಿತಾಂಶ ಶೀಘ್ರವೇ ಬರುತ್ತದೆ ಎಂಬ ಆಶಯವಿದೆ. ಆ ಫಲಿತಾಂಶವನ್ನು ರೆಗ್ಯೂಲೇಟರ್ಸ್​​​ಗಳಿಗೆ ನೀಡಲಾಗುವುದು. ಸೆಪ್ಟೆಂಬರ್​​ ಅಥವಾ ಸೆಪ್ಟೆಂಬರ್​​ ನಂತರ ಮಕ್ಕಳಿಗೆ ಖಂಡಿತವಾಗಿ ವ್ಯಾಕ್ಸಿನ್​ ಸಿಗುತ್ತದೆ. ಮಕ್ಕಳಿಗೆ ಕೊವ್ಯಾಕ್ಸಿನ್​ ಲಸಿಕೆ ನೀಡಲಾಗುತ್ತದೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಕಳೆದ ತಿಂಗಳು ಏಮ್ಸ್​ ನಿರ್ದೇಶಕ ರಣದೀಪ್​ ಗುಲೇರಿಯಾ ಕೂಡ ಸೆಪ್ಟೆಂಬರ್​​ ಅಷ್ಟೊತ್ತಿಗೆ ಮಕ್ಕಳಿಗೂ ಲಸಿಕೆ ನೀಡಲಾಗುತ್ತದೆ. ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಸೆಪ್ಟೆಂಬರ್​ನಲ್ಲಿ ಫಲಿತಾಂಶ ಹೊರಬೀಳಲಿದೆ ಎಂದು ಹೇಳಿದ್ದರು. ಇನ್ನು ಕೇಂದ್ರ ಆರೋಗ್ಯ ಸಚಿವ ಮನ್​​ಸುಖ್​ ಮಾಂಡವಿಯಾ ಕೂಡ, ಮಕ್ಕಳಿಗೆ ಕೊವಿಡ್​ 19 ಲಸಿಕೆ ನೀಡುವ ಅಭಿಯಾನ ಶೀಘ್ರವೇ ಶುರುವಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸ್ಪೆಷೆಲ್​​ ಶೇಂಗಾ ಭಾಜಿ ಮಾಡುವ ವಿಧಾನ ಗೊತ್ತೇ? ಕೇವಲ 5 ನಿಮಿಷ ಸಾಕು ದಿಢೀರ್​ ತಿಂಡಿ ತಯಾರಿಸಲು

ಜಮ್ಮು-ಕಾಶ್ಮೀರದಲ್ಲಿ ಭೂಕಂಪ; ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

Published On - 10:48 am, Thu, 19 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ