AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆಯನ್ನು ಗರ್ಭಿಣಿಯರಿಗೆ ನೀಡಬೇಕು, ಅದು ಅವರಿಗೆ ಉಪಯುಕ್ತ: ಐಸಿಎಂಆರ್

ICMR: ದೇಶದ ಕೊವಿಡ್ -19 ಪರಿಸ್ಥಿತಿ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರ್ಗವ, ಕೇವಲ ಒಂದು ದೇಶ ಮಾತ್ರ ಮಕ್ಕಳಿಗೆ ಕೋವಿಡ್ -19 ಲಸಿಕೆ ನೀಡುತ್ತಿದೆ. 2-18 ವಯಸ್ಸಿನ ಮಕ್ಕಳ ಬಗ್ಗೆ ಸಣ್ಣ ಅಧ್ಯಯನವನ್ನು ನಡೆಸಲಾಗಿದ್ದು, ಸೆಪ್ಟೆಂಬರ್ ವೇಳೆಗೆ ಫಲಿತಾಂಶಗಳು ಬರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಕೊವಿಡ್ ಲಸಿಕೆಯನ್ನು ಗರ್ಭಿಣಿಯರಿಗೆ ನೀಡಬೇಕು, ಅದು ಅವರಿಗೆ ಉಪಯುಕ್ತ: ಐಸಿಎಂಆರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 25, 2021 | 7:26 PM

Share

ದೆಹಲಿ: ಕೊವಿಡ್ -19 ಲಸಿಕೆ ಗರ್ಭಿಣಿಯರಿಗೆ ಉಪಯುಕ್ತವಾದ ಕಾರಣ ಅವರಿಗೆ ನೀಡಬೇಕು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಶುಕ್ರವಾರ ಹೇಳಿದ್ದಾರೆ. ಗರ್ಭಿಣಿಯರಿಗೆ ಲಸಿಕೆ ನೀಡಬಹುದು ಎಂದು ಆರೋಗ್ಯ ಸಚಿವಾಲಯ ಮಾರ್ಗಸೂಚಿಯಲ್ಲಿ ಹೇಳಿದೆ. ಗರ್ಭಿಣಿ ಮಹಿಳೆಯರಿಗೆ ವ್ಯಾಕ್ಸಿನೇಷನ್ ಉಪಯುಕ್ತವಾಗಿದೆ,ಅದನ್ನು ನೀಡಬೇಕು ಎಂದು ಅವರು ಹೇಳಿದರು. ದೇಶದ ಕೊವಿಡ್ -19 ಪರಿಸ್ಥಿತಿ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಭಾರ್ಗವ, ಕೇವಲ ಒಂದು ದೇಶ ಮಾತ್ರ ಮಕ್ಕಳಿಗೆ ಕೋವಿಡ್ -19 ಲಸಿಕೆ ನೀಡುತ್ತಿದೆ. 2-18 ವಯಸ್ಸಿನ ಮಕ್ಕಳ ಬಗ್ಗೆ ಸಣ್ಣ ಅಧ್ಯಯನವನ್ನು ನಡೆಸಲಾಗಿದ್ದು, ಸೆಪ್ಟೆಂಬರ್ ವೇಳೆಗೆ ಫಲಿತಾಂಶಗಳು ಬರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ತೀರಾ ಸಣ್ಣ ಮಕ್ಕಳಿಗೆ ಲಸಿಕೆ ಅಗತ್ಯವಿದೆಯೇ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಭಾರ್ಗವ ಹೇಳಿದರು. ಅಲ್ಲಿಯವರೆಗೆ ನಾವು ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಹೆಚ್ಚಿನ ಡೇಟಾವನ್ನು ಹೊಂದಿರುತ್ತೇವೆ, ಹೆಚ್ಚಿನ ಪ್ರಮಾಣದಲ್ಲಿ ಮಕ್ಕಳಿಗೆ ಲಸಿಕೆ ಹಾಕಲು ನಮಗೆ ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದರು. ಕೊವಿಡ್ -19 ವಿರುದ್ಧ ಗರ್ಭಿಣಿ ಮಹಿಳೆಯರಿಗೆ ಲಸಿಕೆ ಹಾಕುವ ಮಾರ್ಗಸೂಚಿಗಳನ್ನು ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡುತ್ತದೆ. ಪ್ರಸ್ತುತ, ಭಾರತದಲ್ಲಿ ಹಾಲುಣಿಸುವ ಮಹಿಳೆಯರಿಗೆ ಮಾತ್ರ ಕೊವಿಡ್ -19 ಲಸಿಕೆ ತೆಗೆದುಕೊಳ್ಳಲು ಶಿಫಾರಸು ಮಾಡಲಾಗಿದೆ.

ಐಸಿಎಂಆರ್ ಇತ್ತೀಚಿನ ಅಧ್ಯಯನವೊಂದರಲ್ಲಿ ಗರ್ಭಿಣಿ ಮತ್ತು ಪ್ರಸವನಂತರದ ಮಹಿಳೆಯರು ಭಾರತದ ಎರಡನೇ ಕೊವಿಡ್ -19 ಅಲೆಯಲ್ಲಿ ಮೊದಲಿಗಿಂತ ಹೆಚ್ಚು ತೀವ್ರ ಪರಿಣಾಮಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಈ ವರ್ಷ ಸಾವಿನ ಪ್ರಮಾಣ ಮತ್ತು ರೋಗಲಕ್ಷಣದ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚಿವೆ.

ಇದನ್ನೂ  ಓದಿ: Delta Plus variant ದೇಶದಲ್ಲಿ 50 ಡೆಲ್ಟಾ ಪ್ಲಸ್ ಪ್ರಕರಣಗಳು ಪತ್ತೆ, ಮಹಾರಾಷ್ಟ್ರದಲ್ಲಿ ಅತೀ  ಹೆಚ್ಚು: ಕೇಂದ್ರ ಸರ್ಕಾರ

(Covid-19 vaccine should be given to pregnant women as it is useful for them says ICMR Director-General Dr Balram Bhargava)

Published On - 7:16 pm, Fri, 25 June 21

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ