ಕೊರೊನಾ ಲಸಿಕೆಯೂ ಪೋಲಾಗುತ್ತಿದೆ; ತಮಿಳುನಾಡಿನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ವ್ಯರ್ಥ: ಆರ್​ಟಿಐ ವರದಿ

ತಮಿಳುನಾಡಿನಲ್ಲಿ ಶೇ.12.10, ಹರ್ಯಾಣ ರಾಜ್ಯದಲ್ಲಿ ಶೇ.9.74, ಮಣಿಪುರದಲ್ಲಿ ಶೇ.7.8 ಹಾಗೂ ತೆಲಂಗಾಣದಲ್ಲಿ ಶೇ.7.55ರಷ್ಟು ಲಸಿಕೆಯನ್ನು ಪೋಲು ಮಾಡಲಾಗಿದೆ ಎಂಬ ಸಂಗತಿ ಬಯಲಾಗಿದ್ದು, 10 ಕೋಟಿ ಡೋಸ್ ಪೈಕಿ ಅಂದಾಜು 44 ಲಕ್ಷ ಡೋಸ್ ವ್ಯರ್ಥವಾಗಿರುವುದು ಆರ್​ಟಿಐ ಮೂಲಕ ತಿಳಿದುಬಂದಿದೆ.

ಕೊರೊನಾ ಲಸಿಕೆಯೂ ಪೋಲಾಗುತ್ತಿದೆ; ತಮಿಳುನಾಡಿನಲ್ಲಿ ಅತಿ ಹೆಚ್ಚು ಪ್ರಮಾಣದಲ್ಲಿ ಲಸಿಕೆ ವ್ಯರ್ಥ: ಆರ್​ಟಿಐ ವರದಿ
ಪ್ರಾತಿನಿಧಿಕ ಚಿತ್ರ
Follow us
| Updated By: ganapathi bhat

Updated on: Apr 20, 2021 | 2:53 PM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಅತ್ಯಂತ ವೇಗವಾಗಿ ವ್ಯಾಪಿಸುತ್ತಿದ್ದು ಕಳೆದ ಬಾರಿಗಿಂತಲೂ ಹೆಚ್ಚು ಗಂಭೀರತೆಯನ್ನು ಸೃಷ್ಟಿಸಿದೆ. ಈ ಬಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಊಹೆಗೂ ಮೀರಿ ಏರಿಕೆಯಾಗುತ್ತಿರುವ ಕಾರಣ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯವನ್ನು ಪೂರೈಸುವುದೂ ಕಷ್ಟವಾಗಿದೆ. ಇದಕ್ಕೆ ತಕ್ಕನಾಗಿ ಅನೇಕ ರಾಜ್ಯಗಳು ತಮ್ಮಲ್ಲಿ ಕೊರೊನಾ ಲಸಿಕೆಯ ಅಭಾವ ಸೃಷ್ಟಿಯಾಗಿದೆ ಎಂದು ಹೇಳಿಕೊಂಡಿದ್ದವು. ಆದರೆ, ಇದೇ ವಿಚಾರವಾಗಿ ಸಲ್ಲಿಸಲಾದ ಆರ್​ಟಿಐ ಅರ್ಜಿಗೆ ಉತ್ತರ ಬಂದಿದ್ದು, ರಾಜ್ಯಗಳಿಗೆ ಏಪ್ರಿಲ್ 11ರ ತನಕ ಕಳುಹಿಸಲಾದ ಕೊರೊನಾ ಲಸಿಕೆಯ ಶೇ.23ರಷ್ಟು ಭಾಗವನ್ನು ವ್ಯರ್ಥ ಮಾಡಲಾಗಿದೆ ಎಂಬ ಆಘಾತಕಾರಿ ಅಂಶ ಬಯಲಾಗಿದೆ.

ತಮಿಳುನಾಡಿನಲ್ಲಿ ಶೇ.12.10, ಹರ್ಯಾಣ ರಾಜ್ಯದಲ್ಲಿ ಶೇ.9.74, ಮಣಿಪುರದಲ್ಲಿ ಶೇ.7.8 ಹಾಗೂ ತೆಲಂಗಾಣದಲ್ಲಿ ಶೇ.7.55ರಷ್ಟು ಲಸಿಕೆಯನ್ನು ಪೋಲು ಮಾಡಲಾಗಿದೆ ಎಂಬ ಸಂಗತಿ ಬಯಲಾಗಿದ್ದು, 10 ಕೋಟಿ ಡೋಸ್ ಪೈಕಿ ಅಂದಾಜು 44 ಲಕ್ಷ ಡೋಸ್ ವ್ಯರ್ಥವಾಗಿರುವುದು ಆರ್​ಟಿಐ ಮೂಲಕ ತಿಳಿದುಬಂದಿದೆ. ಇದಕ್ಕೆ ತದ್ವಿರುದ್ಧವಾಗಿ ಕೇರಳ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಮಿಜೋರಾಂ, ಗೋವಾ, ದಮನ್​ ಮತ್ತು ದಿಯು, ಅಂಡಮಾನ್ ಮತ್ತು ನಿಕೋಬಾರ್ ಹಾಗೂ ಲಕ್ಷದ್ವೀಪಗಳಲ್ಲಿ ಕೊರೊನಾ ಲಸಿಕೆಯನ್ನು ಅತ್ಯಂತ ಸಮರ್ಪಕವಾಗಿ ಬಳಸಲಾಗಿದ್ದು, ಇಲ್ಲಿನ ಆಡಳಿತ ವ್ಯವಸ್ಥೆ ಕೊರೊನಾ ಲಸಿಕೆ ವ್ಯರ್ಥವಾಗಲು ಬಿಟ್ಟಿಲ್ಲ ಎನ್ನುವುದನ್ನು ವರದಿ ತಿಳಿಸಿದೆ.

ಸದ್ಯದ ಪರಿಸ್ಥಿತಿಯಲ್ಲಿ ಕೊರೊನಾ ಲಸಿಕೆಯ ಅಭಾವ ಎನ್ನುವ ವಾದ ರಾಜಕೀಯ ತಿರುವುಗಳನ್ನು ಪಡೆದುಕೊಂಡಿದ್ದು, ಕೇಂದ್ರ ಸರ್ಕಾರ ಹಾಗೂ ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. ಇನ್ನೊಂದೆಡೆ, ಕೊರೊನಾ ಲಸಿಕೆಯ ಉತ್ಪಾದನೆ ಹೆಚ್ಚಿಸುವ ಸಲುವಾಗಿ ದೇಶದಲ್ಲಿ ಇನ್ನೂ ಕೆಲ ಸಂಸ್ಥೆಗಳಿಗೆ ಕೇಂದ್ರದ ವತಿಯಿಂದ ಅನುಮತಿ ದೊರೆತಿದ್ದು, ಲಸಿಕೆ ಉತ್ಪಾದಕರಿಗೆ ₹4,500ಕೋಟಿ ಬಿಡುಗಡೆ ಮಾಡಲಾಗಿದೆ.

ಕೊವಿಶೀಲ್ಡ್ ಲಸಿಕೆ ಉತ್ಪಾದಿಸುವ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಗೆ ₹3,000 ಕೋಟಿ, ಕೊವ್ಯಾಕ್ಸಿನ್ ಲಸಿಕೆ ತಯಾರಿಸುವ ಭಾರತ್ ಬಯೋಟೆಕ್ ಸಂಸ್ಥೆಗೆ ₹1,500 ಕೊಟಿ ಬಿಡುಗಡೆ ಮಾಡಲಾಗಿದೆ. ಕೆಲದಿನಗಳ ಹಿಂದೆ ಒಂದಷ್ಟು ರಾಜ್ಯಗಳು ಕೊರೊನಾ ಲಸಿಕೆ ಕೊರತೆ ಬಗ್ಗೆ ಮಾತೆತ್ತಿದಾಗಲೂ ಕೇಂದ್ರ ಸರ್ಕಾರ ಲಸಿಕೆ ವ್ಯರ್ಥವಾಗದಂತೆ ಅದನ್ನು ಸರಿಯಾಗಿ ನಿರ್ವಹಿಸುವುದು ಅವಶ್ಯಕ ಎಂಬರ್ಥದಲ್ಲಿ ಉತ್ತರಿಸಿತ್ತು.

ಇದನ್ನೂ ಓದಿ: Explainer: ವಿದೇಶಿ ಕೊರೊನಾ ಲಸಿಕೆಗಳಿಗೆ ಅನುಮತಿ ನೀಡಲು ತುದಿಗಾಲಲ್ಲಿ ನಿಂತಿದೆ ಭಾರತ ಸರ್ಕಾರ; ಉಂಟಾ ಏನಾದರೂ ಪ್ರಯೋಜನ? 

ಕೊವಿಶೀಲ್ಡ್​, ಕೊವ್ಯಾಕ್ಸಿನ್​ ಜೊತೆಗೆ ಭಾರತದಲ್ಲಿ ಸಿಗಲಿದೆ ಸ್ಪುಟ್ನಿಕ್​-ವಿ ಕೊರೊನಾ ಲಸಿಕೆ; ಮೂರರಲ್ಲಿ ಯಾವುದು ಉತ್ತಮ?

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್