AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 3rd Wave: ಹಬ್ಬಗಳಿಂದ 2 ವಾರ ಮೊದಲೇ ಭಾರತಕ್ಕೆ ಅಪ್ಪಳಿಸುತ್ತಾ ಕೊವಿಡ್ 3ನೇ ಅಲೆ?

Coronavirus Updates: ಹಬ್ಬಗಳಿಂದಾಗಿ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ರಜೆಯನ್ನು ಕಳೆಯಲು ಜನರು ರೆಸಾರ್ಟ್, ಹೋಂ ಸ್ಟೇ, ಬೇರೆ ಬೇರೆ ರಾಜ್ಯಗಳಿಗೆ ತೆರಳುವುದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗುತ್ತದೆ.

Covid 3rd Wave: ಹಬ್ಬಗಳಿಂದ 2 ವಾರ ಮೊದಲೇ ಭಾರತಕ್ಕೆ ಅಪ್ಪಳಿಸುತ್ತಾ ಕೊವಿಡ್ 3ನೇ ಅಲೆ?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 04, 2021 | 12:03 PM

ನವದೆಹಲಿ: ಇನ್ನೇನು ಸಾಲು ಸಾಲು ಹಬ್ಬಗಳು ಬರಲಾರಂಭಿಸಿವೆ. ಇನ್ನೊಂದೆಡೆ ಕೊರೊನಾ ಮೂರನೇ ಅಲೆಯ  (Coronavirus 3rd Wave) ಭೀತಿ ಹೆಚ್ಚಾಗಿದೆ. ನವರಾತ್ರಿ (Navaratri 2021), ಈದ್ ಮಿಲಾದ್, ದೀಪಾವಳಿ (Diwali 2021) ಹೀಗೆ ಸಾಲು ಸಾಲು ಹಬ್ಬಗಳಿರುವುದರಿಂದ ಕೊವಿಡ್ 3ನೇ ಅಲೆ (Covid-19 Third Wave) 2 ವಾರ ಮುಂಚಿತವಾಗಿಯೇ ಭಾರತಕ್ಕೆ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಐಸಿಎಂಆರ್ (ICMR) ತಿಳಿಸಿದೆ. ಹೀಗಾಗಿ, ಹಬ್ಬಗಳ ಹಿನ್ನೆಲೆಯಲ್ಲಿ ರಜೆಗಳಿರುವುದರಿಂದ ಸರ್ಕಾರ ಅನುಸರಿಸಬೇಕಾದ ಕೆಲವು ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಐಸಿಎಂಆರ್ ಸಲಹೆ ನೀಡಿದೆ.

ಹಬ್ಬಗಳಿಂದಾಗಿ ರಜೆ ಇರುವುದರಿಂದ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ರಜೆಯನ್ನು ಕಳೆಯಲು ಜನರು ರೆಸಾರ್ಟ್, ಹೋಂ ಸ್ಟೇ, ಬೇರೆ ಬೇರೆ ರಾಜ್ಯಗಳಿಗೆ ತೆರಳುವುದರಿಂದ ಕೊರೊನಾ ಹರಡುವ ಭೀತಿ ಹೆಚ್ಚಾಗುತ್ತದೆ. ಭಾರತಕ್ಕೆ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಕೊರೊನಾ 3ನೇ ಅಲೆ ಶುರುವಾಗಲಿದೆ ಎನ್ನಲಾಗಿತ್ತು. ಆದರೆ, ಇದೀಗ 2 ವಾರ ಮುಂಚೆತವಾಗಿಯೇ 3ನೇ ಅಲೆ ಅಪ್ಪಳಿಸುವ ಎಲ್ಲ ಸಾಧ್ಯತೆಗಳು ಕಾಣುತ್ತಿವೆ.

ಭಾರತಕ್ಕೆ ಶೀಘ್ರದಲ್ಲೇ ಕೊವಿಡ್ 3ನೇ ಅಲೆ ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಯಾವ ರೀತಿಯಲ್ಲಿ ಅಪಾಯ ಎದುರಾಗುತ್ತದೆ ಎಂದು ಊಹಿಸುವುದು ಕಷ್ಟ. ಹೀಗಾಗಿ, ನಮ್ಮ ಎಚ್ಚರಿಕೆಯಲ್ಲಿ ನಾವಿರುವುದು ಅಗತ್ಯ. ಹೀಗಾಗಿ, ಆಯಾ ರಾಜ್ಯ ಸರ್ಕಾರಗಳು, ಸ್ಥಳೀಯ ಅಧಿಕಾರಿಗಳು ಹಾಗೂ ಸ್ಥಳೀಯರು ಪ್ರವಾಸಿಗರ ಬಗ್ಗೆ ನಿಗಾ ಇಡಬೇಕು. ಹಬ್ಬಗಳಿಂದಾಗಿ ತುಸು ಬೇಗವೇ ಕೊರೊನಾ ಮೂರನೇ ಅಲೆ ಭಾರತವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಈಗಾಗಲೇ ಅಧ್ಯಯನ ಹೇಳಿದೆ. ಸಾಲು ಸಾಲು ರಜೆಗಳಿರುವುದರಿಂದ ಕೊರೊನಾ ಕೇಸುಗಳು ಹೆಚ್ಚಾಗುವ ಸಾಧ್ಯತೆ ಶೇ. 103ರಷ್ಟಿದೆ. ಇನ್ನು 4 ವಾರ ಭಾರತದ ಪಾಲಿಗೆ ಅತ್ಯಂತ ನಿರ್ಣಾಯಕವಾಗಿದೆ. ಹೀಗಾಗಿ, ರಜೆಗೆ ಪ್ರವಾಸಕ್ಕೆ ತೆರಳುವವರು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಅಧ್ಯಯನ ತಿಳಿಸಿದೆ.

ಬೇರೆ ರಾಜ್ಯ ಮತ್ತು ದೇಶಗಳಿಂದ ಮತ್ತೊಂದೆಡೆ ತೆರಳಿವವರು ತಮ್ಮ ಸಂಪರ್ಕ ವಿಳಾಸ ಮತ್ತು ದೂರವಾಣಿ ನಂಬರ್ ಅನ್ನು ರಿಜಿಸ್ಟರ್ ಮಾಡಿಸಿಕೊಳ್ಳಬೇಕು. ಇದರಿಂದ ಅವರನ್ನು ಟ್ರೇಸ್ ಮಾಡುವುದು ಸುಲಭವಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಭಾರತ ಮತ್ತೊಂದು ಅಪಾಯಕಾರಿ ಮಟ್ಟವೇರುತ್ತದೆ. ಪ್ರವಾಸಿ ತಾಣಗಳಲ್ಲಿ ಆಯಾ ಸರ್ಕಾರಗಳು ಕಟ್ಟುನಿಟ್ಟಿನ ಎಚ್ಚರ ವಹಿಸಬೇಕು ಎಂದು ಐಸಿಎಂಆರ್ ಸಲಹೆ ನೀಡಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 664 ಜನರಿಗೆ ಕೊರೊನಾ ದೃಢ; 8 ಮಂದಿ ಸಾವು

Corona 3rd Wave: ಕೊರೊನಾ 3ನೇ ಅಲೆಯ ಆತಂಕ, ಆಗಸ್ಟ್ 18ರಿಂದ ಬೆಂಗಳೂರಿನಲ್ಲಿ ಹೊಸ ರೂಲ್ಸ್ ಸಾಧ್ಯತೆ

Published On - 12:03 pm, Mon, 4 October 21

ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು