AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 4th Wave: ಜೂನ್ 22ರ ವೇಳೆಗೆ ಕೊರೊನಾ 4ನೇ ಅಲೆ ಅಪ್ಪಳಿಸುವ ಸಾಧ್ಯತೆ; ಆ. 23ಕ್ಕೆ ಉತ್ತುಂಗಕ್ಕೇರುವ ಸಾಧ್ಯತೆ

ಕೊರೊನಾವೈರಸ್ ನಾಲ್ಕನೇ ಅಲೆ 2022ರ ಜೂನ್ 22ರಿಂದ ಪ್ರಾರಂಭವಾಗುತ್ತದೆ ಹಾಗೇ, ಆಗಸ್ಟ್ 23ರಂದು ಉತ್ತುಂಗವನ್ನು ತಲುಪುತ್ತದೆ, ಅಕ್ಟೋಬರ್ 24ರಂದು ಕೊನೆಗೊಳ್ಳುತ್ತದೆ ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ.

Covid 4th Wave: ಜೂನ್ 22ರ ವೇಳೆಗೆ ಕೊರೊನಾ 4ನೇ ಅಲೆ ಅಪ್ಪಳಿಸುವ ಸಾಧ್ಯತೆ; ಆ. 23ಕ್ಕೆ ಉತ್ತುಂಗಕ್ಕೇರುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on:Feb 28, 2022 | 6:45 PM

Share

ಕಾನ್ಪುರ: ಜೂನ್ ಮಧ್ಯದಿಂದ ಅಂತ್ಯದ ವೇಳೆಗೆ ಭಾರತವು ನಾಲ್ಕನೇ ಹಂತದ COVID ಅಲೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ ಎಂದು ಐಐಟಿ- ಕಾನ್ಪುರದ ತಜ್ಞರ ತಂಡವು ಇತ್ತೀಚೆಗೆ ನಡೆಸಿದ ಅಧ್ಯಯನ ತಿಳಿಸಿದೆ. ಕೊರೊನಾವೈರಸ್ (Coronavirus) ಕೇಸುಗಳ ಉಲ್ಬಣವು ಸುಮಾರು 4 ತಿಂಗಳವರೆಗೆ ಮುಂದುವರಿಯುತ್ತದೆ. ಆದರೆ, ಕೊವಿಡ್ 4ನೇ ಅಲೆಯ ತೀವ್ರತೆಯು ಹೊಸ ರೂಪಾಂತರಗಳ ಹೊರಹೊಮ್ಮುವಿಕೆ, ವ್ಯಾಕ್ಸಿನೇಷನ್ ಸ್ಥಿತಿ ಮತ್ತು ಬೂಸ್ಟರ್ ಡೋಸ್‌ಗಳ ಆಡಳಿತದ ಮೇಲೆ ಅವಲಂಬಿತವಾಗಿರುತ್ತದೆ. ಐಐಟಿ (IIT) ಕಾನ್ಪುರದ ಗಣಿತ ವಿಭಾಗದ ಸಬರ ಪರ್ಷದ್ ರಾಜೇಶ್‌ ಭಾಯ್, ಸುಭ್ರಾ ಶಂಕರ್ ಧಾರ್ ಮತ್ತು ಶಲಭ್ ಈ ಅಧ್ಯಯನವನ್ನು ನಡೆಸಿದ್ದಾರೆ.

ಫೆಬ್ರವರಿ 24ರಂದು ಪ್ರಿಪ್ರಿಂಟ್ ಸರ್ವರ್ MedRxivನಲ್ಲಿ ಅಂಕಿ-ಅಂಶಗಳ ಭವಿಷ್ಯವನ್ನು ಪ್ರಕಟಿಸಲಾಗಿದೆ. ಅದನ್ನು ಇನ್ನೂ ಪೀರ್-ರಿವ್ಯೂ ಮಾಡಬೇಕಾಗಿದೆ. ಸಂಶೋಧಕರ ಪ್ರಕಾರ, ಭಾರತದಲ್ಲಿ COVID-19ನ ನಾಲ್ಕನೇ ಅಲೆಯು 2020ರ ಜನವರಿ 30ರ ಅನ್ವಯ 936 ದಿನಗಳ ನಂತರ ಆಗಮಿಸುತ್ತದೆ ಎಂದು ಸೂಚಿಸಲಾಗಿದೆ. ಆದ್ದರಿಂದ, ಕೊರೊನಾವೈರಸ್ ನಾಲ್ಕನೇ ತರಂಗವು 2022ರ ಜೂನ್ 22ರಿಂದ ಪ್ರಾರಂಭವಾಗುತ್ತದೆ ಹಾಗೇ, ಆಗಸ್ಟ್ 23ರಂದು ಉತ್ತುಂಗವನ್ನು ತಲುಪುತ್ತದೆ, ಅಕ್ಟೋಬರ್ 24ರಂದು ಕೊನೆಗೊಳ್ಳುತ್ತದೆ ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ.

ಕೊರೊನಾ 4ನೇ ಅಲೆ ಎಷ್ಟು ತೀವ್ರವಾಗಿರುತ್ತದೆ?: ಕೊರೊನಾವೈರಸ್‌ನ ಹೊಸ ರೂಪಾಂತರವು ಹೊರಹೊಮ್ಮುವ ಉತ್ತಮ ಅವಕಾಶವಿದೆ. ಇದು ಕೊವಿಡ್ ನಾಲ್ಕನೇ ಅಲೆಯ ಸಂಪೂರ್ಣ ವಿಶ್ಲೇಷಣೆಯ ಮೇಲೆ ಪರಿಣಾಮ ಬೀರಬಹುದು ಎಂದು ಅಧ್ಯಯನ ಹೇಳಿದೆ. ಪರಿಣಾಮದ ತೀವ್ರತೆಯು ಕೊರೊನಾ ಸೋಂಕು, ಮಾರಣಾಂತಿಕತೆ ಮುಂತಾದ ವಿವಿಧ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅಧ್ಯಯನಕಾರರು ಹೇಳಿದ್ದಾರೆ.

ಮುಂದಿನ ರೂಪಾಂತರವು ಹೇಗೆ ಬರಲಿದೆ?: ಮತ್ತೊಂದು ಸಂಶೋಧನೆಯು ಮುಂದಿನ COVID-19 ರೂಪಾಂತರವು ಎರಡು ವಿಭಿನ್ನ ರೀತಿಯಲ್ಲಿ ಹೊರಹೊಮ್ಮಬಹುದು ಎಂದು ತೋರಿಸಿದೆ. ಮೊದಲನೆಯದಾಗಿ ಒಮಿಕ್ರಾನ್ ವಿಕಸನಗೊಳ್ಳುವುದನ್ನು ಮುಂದುವರೆಸುತ್ತದೆ. ಹೊಸ ಕೊವಿಡ್ ರೂಪಾಂತರವು ಹಿಂದೆ ಗುರುತಿಸಲಾದವುಗಳಿಗಿಂತ ಕಡಿಮೆ ತೀವ್ರವಾಗಿರುತ್ತದೆ ಎಂಬುದಕ್ಕೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಲೇಖಕರು ವಿಜ್ಞಾನಿಗಳು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಜಗತ್ತನ್ನೇ ಕಂಗೆಡಿಸಿರುವ ಕೊವಿಡ್ ಈ ದೇಶಗಳಿಗೆ ಮಾತ್ರ ಒಮ್ಮೆಯೂ ಎಂಟ್ರಿ ಕೊಟ್ಟಿಲ್ಲ; ಅಚ್ಚರಿಯಾದರೂ ಸತ್ಯ

Corbevax: ಭಾರತಕ್ಕೆ ಇಂದೇ ಕಾರ್ಬ್​ವ್ಯಾಕ್ಸ್ ಪೂರೈಕೆ ಸಾಧ್ಯತೆ; ಸದ್ಯದಲ್ಲೇ ಕಡಿಮೆ ಬೆಲೆಯ ಕೊವಿಡ್ ಲಸಿಕೆ ಲಭ್ಯ

Published On - 6:42 pm, Mon, 28 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ