AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 4ನೇ ಅಲೆಯ ಭೀತಿ; ಪಾಟ್ನಾದಲ್ಲಿ ಒಮಿಕ್ರಾನ್ ಹೊಸ ರೂಪಾಂತರಿ BA.2.12 ಮೊದಲ ಪ್ರಕರಣ ಪತ್ತೆ

ಏಪ್ರಿಲ್ 23ರಂದು ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ COVID-19 ನ BA.2.12 ರೂಪಾಂತರ ಕಾಣಿಸಿಕೊಂಡಿತ್ತು. ಇದು ಕೊವಿಡ್ ವೈರಸ್‌ನ ಒಮಿಕ್ರಾನ್ ರೂಪಾಂತರಕ್ಕಿಂತ (BA.2) ಹೆಚ್ಚು ವೇಗವಾಗಿ ಹರಡುತ್ತದೆ.

ಕೊವಿಡ್ 4ನೇ ಅಲೆಯ ಭೀತಿ; ಪಾಟ್ನಾದಲ್ಲಿ ಒಮಿಕ್ರಾನ್ ಹೊಸ ರೂಪಾಂತರಿ BA.2.12 ಮೊದಲ ಪ್ರಕರಣ ಪತ್ತೆ
ಕೊವಿಡ್ ರೂಪಾಂತರಿ
TV9 Web
| Edited By: |

Updated on:Apr 28, 2022 | 3:25 PM

Share

ಪಾಟ್ನಾ: ಬಿಹಾರದ ಆರೋಗ್ಯ ಇಲಾಖೆಯು ಪಾಟ್ನಾದ ಇಂದಿರಾಗಾಂಧಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (IGIMS) ಇಂದು ಹೊಸ ಒಮಿಕ್ರಾನ್ ಕೊವಿಡ್-19 ರೂಪಾಂತರವನ್ನು ಪತ್ತೆ ಮಾಡಿದೆ. ಹೊಸ ಕೊವಿಡ್ ರೂಪಾಂತರ BA.2. 12 BA.2ಗಿಂತ 10 ಪಟ್ಟು ಹೆಚ್ಚು ಅಪಾಯಕಾರಿಯಾಗಿದೆ. ಭಾರತದಲ್ಲಿ ಕೊರೋನಾ ಮೂರನೇ ಅಲೆಯ ಸಮಯದಲ್ಲಿ ಈ ಹೊಸ ಕೊವಿಡ್ ವೈರಸ್​ ಪ್ರಕರಣ ಪತ್ತೆಯಾಗಿದೆ. BA.2.12 ರೂಪಾಂತರವನ್ನು ಮೊದಲು ಅಮೆರಿಕಾದಲ್ಲಿ ಕಂಡುಹಿಡಿಯಲಾಯಿತು. ದೆಹಲಿಯಲ್ಲಿ ಒಟ್ಟು ಐದು ಬಿಎ.2.12 ಪ್ರಕರಣಗಳು ಪತ್ತೆಯಾಗಿದ್ದು, ಈಗ ಪಾಟ್ನಾದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ಐಜಿಐಎಂಎಸ್‌ನ ಮೈಕ್ರೋಬಯಾಲಜಿ ವಿಭಾಗದ ಹೆಚ್‌ಓಡಿ ಪ್ರೊಫೆಸರ್ ಡಾ. ನಮ್ರತಾ ಕುಮಾರಿ ಮಾತನಾಡಿ, ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ನಾವು ಕೊರೊನಾದ ಒಮಿಕ್ರಾನ್ ರೂಪಾಂತರದ ಮಾದರಿಗಳ ಜಿನೋಮ್ ಅನುಕ್ರಮವನ್ನು ಪ್ರಾರಂಭಿಸಿದ್ದೇವೆ. ಈ ವೇಳೆ 13 ಮಾದರಿಗಳನ್ನು ಪರೀಕ್ಷಿಸಲಾಯಿತು. ಅವುಗಳಲ್ಲಿ ಒಂದು ಬಿಎ.12 ತಳಿಗಳನ್ನು ಹೊಂದಿತ್ತು. ಉಳಿದ 12 ಮಾದರಿಗಳು BA.2 ತಳಿಗಳನ್ನು ಹೊಂದಿವೆ.

ಒಮಿಕ್ರಾನ್‌ನ ಎಲ್ಲಾ ಪಾಸಿಟಿವ್ ಮಾದರಿಗಳ ಸಂಪರ್ಕ ಪತ್ತೆಹಚ್ಚುವಿಕೆಗಾಗಿ ನಾವು ಪ್ರಾಧಿಕಾರವನ್ನು ಕೇಳಿದ್ದೇವೆ. BA.12 ರೂಪಾಂತರವು BA.2ಗಿಂತ 10 ಪಟ್ಟು ಹೆಚ್ಚು ಅಪಾಯಕಾರಿಯಾಗಿದೆ. ಆದರೂ ಆತಂಕ ಪಡುವ ಅಗತ್ಯವಿಲ್ಲ. ಇದರಿಂದ ರಕ್ಷಣೆ ಪಡೆಯಲು ಇಲ್ಲಿ ಮುನ್ನೆಚ್ಚರಿಕೆ ಅಗತ್ಯ ಎಂದು ಹೇಳಿದ್ದಾರೆ.

ಏಪ್ರಿಲ್ 23ರಂದು ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ COVID-19 ನ BA.2.12 ರೂಪಾಂತರ ಕಾಣಿಸಿಕೊಂಡಿತ್ತು. ಇದು ಕೊವಿಡ್ ವೈರಸ್‌ನ ಒಮಿಕ್ರಾನ್ ರೂಪಾಂತರಕ್ಕಿಂತ (BA.2) ಹೆಚ್ಚು ವೇಗವಾಗಿ ಹರಡುತ್ತದೆ. BA.2.12 ಒಮಿಕ್ರಾನ್ ರೂಪಾಂತರದ ಉಪ-ವಂಶಾವಳಿಯಾಗಿದೆ.

ಇದನ್ನೂ ಓದಿ: Covid XE Variant: ಭಾರತಕ್ಕೂ ಕಾಲಿಟ್ಟ ಹೊಸ ಕೊವಿಡ್ ರೂಪಾಂತರಿ; ಮುಂಬೈನಲ್ಲಿ ಮೊದಲ XE ವೈರಸ್ ಪತ್ತೆ

Omicron XE Variant: ಹೊಸ ಒಮಿಕ್ರಾನ್ ಎಕ್ಸ್​ಇ ರೂಪಾಂತರದ ಲಕ್ಷಣ, ಪರಿಣಾಮಗಳೇನು?

Published On - 3:24 pm, Thu, 28 April 22

Follow Us
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು
ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಆಗಮಿಸಿದ ಮತದಾರರು